ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ; ಕಾರು ಚಾಲಕ ಸ್ಥಳದಲ್ಲಿಯೇ ಸಾವು. ಇಬ್ಬರ ಸ್ಥಿತಿ ಗಂಭೀರ,ಬಾರ್ದಿಲ,ಗಂಜಿಮಠ ನಿವಾಸಿಗಳು

ರಾಜ್ಯ

ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ 5:00 ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ನವದುರ್ಗ ಬಸ್​ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ.ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಆನೆ ಕ್ಯಾಂಪ್​ಗೂ ಮೊದಲು ಸಿಗುವ ಫಿಶ್ ಹೋಟೆಲ್​ನ ಸಮೀಪ ಘಟನೆ ಸಂಭವಿಸಿದೆ. ಆಕ್ಸಿಡೆಂಟ್​ನಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ಧಾರೆ. ಕಾರಿನಲ್ಲಿದ್ದವರು ಮಂಗಳೂರು ತಾಲೂಕಿನ ಎಡಪದಪು,ಗಂಜಿಮಠ ನಿವಾಸಿಗಳೆಂದು ತಿಳಿದು ಬಂದಿದೆ.
ಅನಾರೋಗ್ಯದಲ್ಲಿದ್ದ ವ್ಯಕ್ತಿಯ ಆರೋಗ್ಯ ವಿಚಾರಿಸಿ ಹಿಂತಿರುಗುವ ಸಮಯದಲ್ಲಿ ಈ ದುರ್ಘಟನೆ ನಡೆದಿರುತ್ತದೆ.ಅಪಘಾತಕ್ಕೆ ಬಸ್ಸಿನ ಅತೀ ವೇಗವೇ ಕಾರಣವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುತ್ತಾರೆ.

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗಾಯಾಳುಗಳು ಗಂಜಿಮಠದ ಇಸ್ಮಾಯಿಲ್ ಹಾಗೂ ಬಾರ್ದಿಲ ನಿವಾಸಿ ಎಂಬ ಮಾಹಿತಿ ಇದೆ.