ಬಜಪೆ: ಲೋಕಾಯುಕ್ತ ದಾಳಿ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲಾ ಸಂಚಾಲಕಿಯ ಬಂಧನ

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಲೋಕಾಯಯಕ್ತ ಪೊಲೀಸರು ಇಂದು ದೊಡ್ಡ ಮಿಕವೊಂದನ್ನು ಬೇಟೆಯಾಡಿದ್ದು, ನಿವೃತ್ತ ಶಿಕ್ಷಕಿಯೊಬ್ಬರು ಪೆನ್ಷನ್ ಹಣ ಪಡೆಯಲು ಅಗತ್ಯ ದಾಖಲೆ ಸಿದ್ಧಪಡಿಸಲು ಐದು ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಶಾಲಾ ಸಂಚಾಲಕಿಯನ್ನು ರೆಡ್ ಹ್ಯಾಂಡಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಜ್ಪೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಪೂಜಾರಿ ರೆಡ್ ಹ್ಯಾಂಡಾಗಿ ಸೆರೆಯಾದವ ರಾಗಿದ್ದಾರೆ. ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ,ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾರಾಣಿರವರು ದಿನಾಂಕ ಜುಲೈ 31 ರಂದು ವಯೋನಿವೃತ್ತಿ ಹೊಂದಲಿದ್ದು, ತನ್ನ ಪಿಂಚಣಿ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಶ್ರೀ ನಿರಂಜನ ಸ್ವಾಮೀ ಅನುದಾನಿತ ಶಾಲೆಯ ಮ್ಯಾನೇಜ್‌ಮೆಂಟ್‌ ಸಂಚಾಲಕರಾದ ಶ್ರೀಮತಿ ಜ್ಯೋತಿ ಎನ್ ಪೂಜಾರಿರವರಿಗೆ ಮನವಿ ಪತ್ರದೊಂದಿಗೆ ವಿನಂತಿಸಿಕೊಂಡು ಸ್ವೀಕೃತಿಯನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಸಂಚಾಲಕಿ ಶ್ರೀಮತಿ ಜ್ಯೋತಿ.ಎನ್‌.ಪೂಜಾರಿರವರು ಸ್ವೀಕೃತಿಯನ್ನು ನಂತರ ನೀಡುವುದಾಗಿ ತಿಳಿಸಿ, ಪಿಂಚಣಿ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಫಿರ್ಯಾದಿದಾರರಿಗೆ ಸತಾಯಿಸಿ, ಪಿಂಚಣಿ ಪತ್ರಗಳಿಗೆ ಸಹಿ ಮಾಡಬೇಕಾದರೆ ರೂ.ಇಪ್ಪತ್ತು ಲಕ್ಷ ಹಣ ನೀಡಬೇಕೇಂದು ಬೇಡಿಕೆ ಇಟ್ಟಿದ್ದರು.

ಮತ್ತೆ ಜ್ಯೋತಿಯರನ್ನು ಭೇಟಿ ಮಾಡಿ ತನ್ನ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಿ ಕಳುಹಿಸಿಕೊಡುವಂತೆ ಕೋರಿಕೊಂಡರೂ ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡಬೇಕಾದರೆ, ರೂ ಐದು ಲಕ್ಷ ಕೊಡಬೇಕು ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಶೋಭಾ ರಾಣಿ ಅವರು ಮಂಗಳೂರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.