2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿ ಆದೇಶಿಸಿದೆ. ತೀಸ್ತಾ ವಿರುದ್ಧದ ಪ್ರಕರಣದಲ್ಲಿ ಚಾರ್ಜ್ ಶೀಟ್ ದಾಖಲಾಗಿರುವುದರಿಂದ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ತೀಸ್ತಾಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.ಮಾತ್ರವಲ್ಲದೆ ತೀಸ್ತಾ ಸೆಟಲ್ವಾಡ್ ರನ್ನು ಕೂಡಲೇ ಶರಣಾಗುವಂತೆ ಆದೇಶ ನೀಡಿ, ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಒಂದು ವೇಳೆ ಈ ಷರತ್ತನ್ನು ಉಲ್ಲಂಘಿಸಿದರೆ ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.