ದೇಶಕ್ಕಾಗಿ ಹೋರಾಡಿದ ನನಗೆ ನನ್ನ ಪತ್ನಿ, ಮಕ್ಕಳನ್ನು ಕಾಪಾಡಲು ಸಾಧ್ಯವಾಗಲಿಲ್ಲ: ಕಾರ್ಗಿಲ್ ನಲ್ಲಿ ಹೋರಾಡಿದ ಯೋಧ

ರಾಷ್ಟ್ರೀಯ

ಮಣಿಪುರದಲ್ಲಿ ಹಿಂಸಾಚಾರ ಆಗುತ್ತಿದ್ದರೆ. ಅತ್ತ ಬೆತ್ತಲೇ ವಿಡಿಯೋ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ದೇಶದ ಮೂಲೆ ಮೂಲೆ ಮೂಲೆಯಲ್ಲೂ ಘಟನೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿದೆ.

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶದ ಗಡಿಯನ್ನು ಕಾಪಾಡಿದ ವೀರ ಯೋಧ ಪತ್ನಿಯನ್ನು ಮಣಿಪುರ ಘಟನೆಯಿಂದ ಆತನಿಗೆ ರಕ್ಷಿಸಿ ಕೊಳ್ಳಲು ಸಾಧ್ಯವಾಗಿಲ್ಲ.!ಶ್ರೀಲಂಕಾದಲ್ಲಿ ನಡೆದ ಭಾರತೀಯ ಸೇನೆಯ ಶಾಂತಿ ಸ್ಥಾಪನೆ ಆಂದೋಲನದಲ್ಲಿ ಭಾಗಿಯಾಗಿ ಸೇವೆ ಸಲ್ಲಿಸಿದ್ದೆ. ಆದರೆ ದೇಶವನ್ನು ಉಳಿಸಿದ ನನಗೆ ನನ್ನ ಪತ್ನಿ, ಮನೆ ಹಾಗೂ ಗ್ರಾಮಸ್ಥರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಅಸ್ಸಾಂ ರಿಜಿಮೆಂಟ್‌ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದ ಯೋಧ, ಪಾಕಿಸ್ತಾನ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದರ. ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ ಯೋಧ, ತನ್ನ ಪತ್ನಿ, ಮನೆ ಕುಟುಂಬಸ್ಥರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಅನ್ನೋ ಕೊರಗು ಕಾಡುತ್ತಿದೆ ಎಂದು ನಿವೃತ್ತ ಯೋಧ ಹೇಳಿದ್ದಾರೆ.ಘಟನೆಗೂ ಮೊದಲು ಪೊಲೀಸರು ಸ್ಥಳದಲ್ಲಿದ್ದರು. ಈ ಘಟನೆಯನ್ನು ತಡೆಯುವ ಎಲ್ಲಾ ಸಾಧ್ಯತೆಗಳು ಪೊಲೀಸ ಕೈಯಲ್ಲಿತ್ತು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ಘಟನೆ ಹಿಂದಿರುವ ಎಲ್ಲಾ ದುಷ್ಕರ್ಮಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ನಿವೃತ್ತ ಯೋಧ ಆಗ್ರಹಿಸಿದ್ದಾರೆ. ನಮ್ಮ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಇಬ್ಬರು ಮಹಿಳೆಯರಲ್ಲಿ ಒಬ್ಬರ ಪತಿ ಭಾರತೀಯ ಸೇನೆಯ ಯೋಧನಾಗಿದ್ದು, ಕಾರ್ಗಿಲ್‌ ಯುದ್ಧದಲ್ಲಿ ಭಾಗಿಯಾಗಿದ್ದಾರೆ. ದೇಶವನ್ನು ರಕ್ಷಿಸಿದರೂ ತನ್ನ ಹೆಂಡತಿಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂಬ ಕೊರಗು ಮಣಿಪುರ ಸೈನಿಕನಿಗೆ ಕಾಡುತ್ತಿದೆ.

“ನಾನು ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿದೆ ಮತ್ತು ಭಾರತೀಯ ಶಾಂತಿ ಪಾಲನಾ ಪಡೆಯ ಭಾಗವಾಗಿ ಶ್ರೀಲಂಕಾದಲ್ಲಿಯೂ ಇದ್ದೆ. ನಾನು ದೇಶವನ್ನು ರಕ್ಷಿಸಿದ್ದೇನೆ ಆದರೆ ನನ್ನ ಹೆಂಡತಿ ಮತ್ತು ನನ್ನ ಗ್ರಾಮಸ್ಥರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಬೇಸರವಾಗುತ್ತಿದೆ” ಎಂದು ಸ್ಥಳೀಯ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಮೇ 4 ರಂದು ಮುಂಜಾನೆ ಜನಸಮೂಹವು ಹಲವಾರು ಮನೆಗಳನ್ನು ಸುಟ್ಟುಹಾಕಿತು, ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಜನರ ಮುಂದೆ ಹಳ್ಳಿಯ ಹಾದಿಯಲ್ಲಿ ಮೆರವಣಿಗೆ ಮಾಡುವಂತೆ ಹೇಳಿತು. ಪೊಲೀಸರು ಸ್ಥಳದಲ್ಲಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮನೆಗಳನ್ನು ಸುಟ್ಟುಹಾಕಿದರು ಮತ್ತು ಮಹಿಳೆಯರನ್ನು ಹೀನಾಯವಾಗಿ ನಡೆಸಿಕೊಂಡರು.