ಸ್ಮಶಾನದಲ್ಲಿ ಲಂಚ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ

ರಾಜ್ಯ

ಶಿವಮೊಗ್ಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ. ಸ್ಮಶಾನದಲ್ಲಿ 15 ಸಾವಿರ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿತ್ತು. ದೂರಿನನ್ವಯ ಲೋಕಾಯುಕ್ತ ಡಿವೈಎಸ್​ಪಿ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಸ್ಮಶಾನದ ಕಾಮಗಾರಿ ಪರಿಶೀಲಿಸಿ ರಿಪೋರ್ಟ್ ಕೊಡುವ ಸಂಬಂಧ 15 ಸಾವಿರ ರೂಪಾಯಿ ಲಂಚ ಪಡೆಯುವಾಗಲೇ ಗೋಪಿನಾಥ್​ ನವರನ್ನು ರೆಡ್ ಹ್ಯಾಂಡಾಗಿ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.