ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಚಿಂತನೆ

ರಾಜ್ಯ

ರಾಜ್ಯದಲ್ಲಿ ಭ್ರೂಣಹತ್ಯೆ ತಡೆಗೆ ಪೊಲೀಸ್ ಇಲಾಖೆ ಹೊಸ ನಿಯಮ ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ಮು ಮುಂದೆ 6 ತಿಂಗಳ ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡುತ್ತಿದೆ. ಆರು ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ನಡೆಸುತ್ತಿದೆ.

ಭ್ರೂಣ ಹತ್ಯೆ ಮಾಡಿದರೆ IPC 302 ಅಡಿ ಕೇಸ್ ದಾಖಲಿಸಿಕೊಳ್ಳಲು ಚಿಂತನೆಗಳು ನಡೆದಿದ್ದು, ಈ ಹೊಸ ನಿಯಮ ಜಾರಿಗೆ ತರುವ ಬಗ್ಗೆ ಹಿರಿಯ ಪೊಲೀಸ್​ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲು ಮಾಡಲು ಕರಡು ತಯಾರಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಕರಡು ಸಿದ್ದಪಡಿಸಿ ಜಾರಿಗೆ ತರುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ.

ಒಂದು ವೇಳೆ ಇದು ಜಾರಿಗೆ ಬಂದರೆ ಆರು ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಅಂತರವರ ವಿರುದ್ಧ ಐಪಿಸಿ 302 ಅಡಿಯಲ್ಲಿ ಕೇಸ್ ದಾಖಲಾಗಲಿದೆ. ಈ ಮೂಲಕ ಭ್ರೂಣ ಹತ್ಯೆ ತಡೆಗಟ್ಟಲು ಪೊಲೀಸ್ ಇಲಾಖೆ ಈ ರೀತಿಯಾಗಿ ಮುಂದಾಗಿದೆ.