ಆರೋಪಿ ಪರ ವಾದ ಮಂಡಿಸಿದ ಖ್ಯಾತ ನ್ಯಾಯವಾದಿ ಮಹೇಶ್ ಕಜೆ
ಪುತ್ತೂರು: ಕಳೆದ October ತಿಂಗಳಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು, ಅಪಹರಿಸಿ, ನಂತರ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ ಕಡಬದ ಸಮೀಪದ ಯಜ್ಞೇಶ್ ಎಂಬವರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. October 10-2023 ರಂದು ಬೆಳಿಗ್ಗಿನ ಜಾವ 7:30 ರ ಸಮಯಕ್ಕೆ ಅಪ್ರಾಪ್ತ ಬಾಲಕಿ ತನ್ನ ಮನೆಯಿಂದ ಹೊರಟು ತನಗೆ ಇನ್ನು ಮೂರು ದಿನದ ವಿಶೇಷ
ತರಗತಿಯಿದ್ದು, ಬೊಳುವಾರಿನ ತನ್ನ ಗೆಳತಿಯ ಮನೆಗೆ ಹೋಗಿ ಶುಕ್ರವಾರದಂದು ಸಂಜೆ ಮನೆಗೆ ಬರುವುದಾಗಿ ತಿಳಿಸಿ ಕಾಲೇಜಿಗೆ ಹೋಗಿದ್ದು, ಬಳಿಕ ಅಪ್ರಾಪ್ತ ಬಾಲಕಿಯು ಮನೆಗೂ ಬಾರದೆ, ಫೋನ್ ಮಾಡದೆ ಇರುವುದರಿಂದ, ಗಡಿಬಿಡಿಗೊಂಡ ಬಾಲಕಿಯ ಮನೆಯವರು ಸ್ನೇಹಿತೆಯಲ್ಲಿ ವಿಚಾರಿಸಿದಾಗ, ಬಾಲಕಿ ಸ್ನೇಹಿತೆಯ ಮನೆಗೆ ಹೋಗದೆ ಇರುವುದನ್ನು ತಿಳಿದು, ನಂತರ ಬಾಲಕಿ ಕಲಿಯುತ್ತಿದ್ದ ಕಾಲೇಜಿನಲ್ಲಿ ವಿಚಾರಿಸಿದಾಗ, ಮಧ್ಯಾಹ್ನದವರೆಗೆ ಕಾಲೇಜಿಗೆ ಬಂದು ನಂತರ ಬಂದಿರುವುದಿಲ್ಲ ಎಂಬುದನ್ನು ತಿಳಿದ ಅಪ್ರಾಪ್ತ ಬಾಲಕಿಯ ತಂದೆಯು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಾಲಕಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಸದ್ರಿ ದೂರಿಗೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಭಾರತೀಯ ದಂಡ ಸಂಹಿತೆ ಕಲಂ 363 ರಂತೆ ಪ್ರಕರಣ ದಾಖಲಿಸಿದ್ದರು.
ಈ ನಡುವೆ ಅಪ್ರಾಪ್ತ ಬಾಲಕಿಯು ತನ್ನ ತಂದೆಯೊಂದಿಗೆ ದಿನಾಂಕ 13/10/2023 ರಂದು ಪೊಲೀಸ್ ಠಾಣೆಗೆ ಹಾಜರಾಗಿ ಯಜ್ಞೇಶ್ ನನ್ನು ಕಳೆದ ಮೂರು ತಿಂಗಳಿನಿಂದ ನಾನು ಪ್ರೀತಿಸುತ್ತಿದ್ದು, ದಿನಾಂಕ 10-10-2023 ರಂದು ಯಜ್ಞೇಶ್ ನನ್ನನು ಮಡಿಕೇರಿಗೆ ಕರೆದುಕೊಂಡು ಹೋಗಿ ಯಜ್ಞೇಶ್ ರವರ ಅತ್ತೆ ಮನೆಯಲ್ಲಿ ದೈಹಿಕ ಸಂಪರ್ಕ ನಡೆಸಿರುವುದಾಗಿ ಹೇಳಿಕೆಯನ್ನು ನೀಡಿದ್ದಳು. ಈ ಆಧಾರದಲ್ಲಿ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ ಕಾಯಿದೆಯ ಕಲಂ 4ರನ್ವಯ ಪ್ರಕರಣ ದಾಖಲಿಸಿ, ತದನಂತರ ತನಿಖೆ ಮುಂದುವರಿಸಿ, ಆರೋಪಿಯೆನ್ನಲಾಗಿದ್ದ
ಯಜ್ಞೇಶ್ ನನ್ನು ಬಂಧಿಸಿ, ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಅರೋಪಿ ಯಜ್ಞೇಶ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ತದ ನಂತರ ಆರೋಪಿಯು ತನ್ನ ಪರ ವಕೀಲರಾದ ಕಜೆ ಲಾ ಚೇಂಬರ್ಸ್ ನ ಶ್ರೀ ಮಹೇಶ್ ಕಜೆ ಅವರ ಮುಖಾಂತರ ಮಾನ್ಯ ನಾಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಪ್ರಕರಣದ ವಾದ -ವಿವಾದವನ್ನು ಆಲಿಸಿದ ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಾಂತರಾಜು ಎಸ್.ವಿ ರವರು ಆರೋಪಿ ಯಜ್ಞೇಶ್ ಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿರುತ್ತಾರೆ. ಅರೋಪಿಯ ಪರ ವಾದ ಮಂಡಿಸಿದ ಖ್ಯಾತ ನ್ಯಾಯಾವಾದಿ ಮಹೇಶ್ ಕಜೆ ಆರೋಪಿಗೆ ಜಾಮೀನು ದೊರಕಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ.