ಗ್ರಾಮ ಪಂಚಾಯಿತಿ ಕಾಯ್ದೆ 1993 ಕ್ಕೆ ತಿದ್ದುಪಡಿ : ರಾಜ್ಯಪಾಲರಿಂದ ಸುಗ್ರೀವಾಜ್ಞೆ

ರಾಜ್ಯ

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳನ್ನು ಪುನರ್ರಚಿಸುವ ಸಂಬಂಧಕ್ಕೆ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993 ಕ್ಕೆ ಕೆಲವು ತಿದ್ದುಪಡಿಗಳನ್ನು ಸೂಚಿಸಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋತ್ ಅವರು ಭಾನುವಾರ ಸುಗ್ರೀವಾಜ್ಞೆಯನ್ನು ಹೊರಡಿಸಿದ್ದಾರೆ.
ಈ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ ಶಿಫಾರಸ್ಸಿಗೆ ಅನುಗುಣವಾಗಿ ರಾಜ್ಯಪಾಲರು ಕರ್ನಾಟಕ ಪಂಚಾಯತ್ ರಾಜ್ (ತಿದ್ದುಪಡಿ)ಗೆ ಸುಗ್ರೀವಾಜ್ಞೆ 1999ಕ್ಕೆ ತಮ್ಮ ಅಂಕಿತ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.