ಮನೆಯಂಗಳದಲ್ಲಿ ಮಹಿಳೆಯೊಬ್ಬರು ಕಾರು ಹಿಂದಕ್ಕೆ ತೆಗೆಯುವ ಸಂದರ್ಭ ಮನೆಯ ಮಗುವೇ ಕಾರಿನಡಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಮಲ್ಲಿಗೆ ಮಜಲು ಎಂಬಲ್ಲಿ ನಡೆದಿದೆ. ಮಲ್ಲಿಗೆ ಮಜಲು ನಿವಾಸಿ ಅಬ್ದುಲ್ ಹಮೀದ್ ಪುತ್ರ ನವಾಫ್ ಇಸ್ಮಾಯಿಲ್ ಮೃತ ಬಾಲಕ.!

ಮನೆಯ ಮಹಿಳೆಯೊಬ್ಬರು ಅಂಗಳದಲ್ಲೇ ಕಾರು ಹಿಂದಕ್ಕೆ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಮುಂದಕ್ಕೆ ಚಲಾಯಿಸಿ ಡಿಕ್ಕಿ ಹೊಡೆದಿದೆ. ಶಾಲೆ ಬಿಟ್ಟು ಆಗಷ್ಟೇ ಮನೆಗೆ ಬಂದಿದ್ದ ಬಾಲಕ ನವಾಫ್ ಕಾರಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ. ಅದೇ ಸಂದರ್ಭ ಅಂಗಳದಲ್ಲಿದ್ದ ಇನ್ನೊಂದು ಮಗು ಕೂಡಾ ಗಾಯಗೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.