ಕಳಪೆ ಮಟ್ಟದ ಪೀಠೋಪಕರಣ ತಯಾರಿಸಿ ಕೊಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್ ಮಾಲಕ ಸಂಜಯ್ ಕುಮಾರ್ ಗೆ 20,000 ರೂಪಾಯಿ ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
ಕಲ್ಲಂಗಲ ನಿವಾಸಿ ಹೈದರ್ ಅಲಿ 50,000 ರೂಪಾಯಿ ಮುಂಗಡ ನೀಡಿ ಉತ್ತಮ ಗುಣಮಟ್ಟದ ತೇಗದ ಮರದಿಂದ ಮನೆಗೆ ಪೀಠೋಪಕರಣವನ್ನು ತಯಾರಿಸಲು ಸೂಚಿಸಿದ್ದರು. ನಿಗದಿತ ಸಮಯಕ್ಕೆ ಪೀಠೋಪಕರಣ ತಯಾರಿಸದೆ ಕಳಪೆ ಗುಣಮಟ್ಟದ ಪೀಠೋಪಕರಣಗಳನ್ನು ಪೂರೈಸಿದ ಬಗ್ಗೆ ಹೈದರ್ ಅಲಿ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣವನ್ನು ದಾಖಲಿಸಿದ ನ್ಯಾಯಾಲಯವು ವಿಚಾರಣೆ ನಡೆಸಿ ಮುಂಗಡ ಪಡೆದ ಹಣವನ್ನು ಗ್ರಾಹಕನಿಗೆ ಹಿಂದಿರುಗಿಸಿ ಪೀಠೋಪಕರಣಗಳನ್ನು ಮರಳಿ ಪಡೆಯಲು ಮತ್ತು ನಷ್ಟ ಹಾಗೂ ದಾವೆ ಖರ್ಚು ಸೇರಿಸಿ ಪರಿಹಾರ ನೀಡುವಂತೆ ಆದೇಶಿಸಿದೆ.