ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ ಡಿ.27 ರಂದು ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲೂ ಕಾಂಗ್ರೆಸ್ ನೇತೃತ್ವದ ಸರಕಾರವೂ ಏಳು ದಿನಗಳ ಶೋಕಾಚರಣೆ ಘೋಷಿಸಿದ್ದು, ಶುಕ್ರವಾರ (ಡಿ. 27) ಸರ್ಕಾರಿ ರಜೆ ಘೋಷಿಸಿದ್ದು, ಶಾಲೆ, ಕಾಲೇಜುಗಳು ಬ್ಯಾಂಕ್ಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ.
ಕೇಂದ್ರ ಸರಕಾರ ನಾಳೆ ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳ ರದ್ದುಗೊಳಿಸಿ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿ ನಾಳೆ ಬೆಳಗ್ಗೆ 11 ಗಂಟೆಗೆ ತುರ್ತು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ ಡಾ. ಮನಮೋಹನ್ ಸಿಂಗ್ ಅವರಿಗೆ ಗೌರವ ನಮನಗಳ ಸಲ್ಲಿಸಲಿದೆ ಎಂದು ತಿಳಿಸಿದೆ.