ಸಿ.ಎಂ ಸಿದ್ದರಾಮಯ್ಯಗೆ ಇಂದು ಸಂಕಷ್ಟದ ದಿನ. ಮುಡಾ ಕೇಸ್ ಸಿಬಿಐಗೆ ವರ್ಗಾವಣೆ ಮಾಡುವ ಕುರಿತು ಇಂದು ನ್ಯಾಯಾಲಯ ಮಹತ್ವದ ತೀರ್ಪು ಸಾಧ್ಯತೆ.

ರಾಜ್ಯ

ಸಿದ್ದರಾಮಯ್ಯರವರಿಗೆ ಇಂದು ಸಂಕಷ್ಟದ ದಿನ. ಮುಡಾ ಕೇಸ್ ಸಿಬಿಐಗೆ ವರ್ಗಾವಣೆ ಮಾಡುವ ಕುರಿತು ಇಂದು ನ್ಯಾಯಾಲಯ ಮಹತ್ವದ ತೀರ್ಪು ಕೊಡಲಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಬುಧವಾರ ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆ ಇದೆ.

ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಇಂದು ಬಹುತೇಕ ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಿದೆ. ದೂರುದಾರ ಸ್ನೇಹಮಹಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ ಹೋಗುತ್ತದೆ. ಆದೇಶದ ನಂತರ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಬೆಳವಣಿಗೆಯೂ ನಡೆಯುತ್ತದೆ ಎಂದಿದ್ದಾರೆ.

ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿದ್ದರಾಮಯ್ಯರವರ ಪತ್ನಿ ಮೇಲಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ ಅಧಿಕಾರಿಗಳು ಸಿಎಂ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.