ಕರಾವಳಿ
ಪುತ್ತೂರು: ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ, ಮನೆ ಕಳ್ಳತನದ ಆರೋಪಿಯ ಬಂಧನ
ಪುತ್ತೂರು ತಾಲೂಕು ನಿವಾಸಿ ರೇವತಿ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಭರಣ ಕಳವುಗೈದು ಪರಾರಿಯಾದ ಆರೋಪಿ ಪ್ರವೀಣ್ ಸಿಟಿ ಗುಡ್ಡೆ ಮನೆ, ಕಬಕ ಗ್ರಾಮ ಪುತ್ತೂರು ತಾಲೂಕು ಎಂಬಾತನನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿರುತ್ತಾರೆ. ಶ್ರೀಮತಿ ರೇವತಿ ಪುತ್ತೂರು ಎಂಬವರ ದೂರಿನಂತೆ ದಿನಾಂಕ:12.10.2025 ರಂದು ಬೆಳಿಗ್ಗೆ ಸಮಯ 10:00 ರಿಂದ ಸಾಯಂಕಾಲ 5 ಗಂಟೆ ಸಮಯದ ಮಧ್ಯಾವದಿಯಲ್ಲಿ ತನ್ನ ವಾಸದ ಮನೆಯಿಂದ ಯಾರೋ ಕಳ್ಳರು ಒಂದು ಚಿನ್ನದ ಬಳೆ, ಒಂದು ಜೊತೆ ಕಿವಿಯೋಲೆ ಹಾಗೂ ಒಂದು […]
ಸಿಜೆಐ ಮೇಲಿನ ಶೂ ದಾಳಿಯನ್ನು ಸಮರ್ಥಿಸುವವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ; ಸಿಎಂಗೆ ವಕೀಲ ಮನೋರಾಜ್ ಆಗ್ರಹ
ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ ಸಿಜೆಐ ಮೇಲೆ ದಾಳಿ ನಡೆಸಿದವರಷ್ಟೇ ಅಲ್ಲ, ಬೆಂಬಲಿಸಿ ಪೋಸ್ಟ್ ಹಾಕಿದವರಿಗೂ ಸಂಚಕಾರ? ಸಿಎಂ ಮೇಲೆ ವಕೀಲರ ಒತ್ತಡ ಸಿಜೆಐ ಮೇಲಿನ ದಾಳಿ ಬೆಂಬಲಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ; ಸರ್ಕಾರಕ್ಕೆ ವಕೀಲ ಮನೋರಾಜ್ ರಾಜೀವ್ ಆಗ್ರಹ ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ […]
ರಾಜ್ಯ
ರಾಹುಲ್ ಗಾಂಧಿಗೆ ಸಿದ್ದು ಹೇಳಿದ್ದೇನು?, 12 ಹೊರಕ್ಕೆ 12 ಒಳಕ್ಕೆ
ಬಿಜೆಪಿ ಗೋಳು ತಪ್ಪುತ್ತಿಲ್ಲ, ಸಂಜಯ್ ಜೋಷಿಗೆ ಸಾರಥ್ಯ? ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಯಿಂದ ಬಂದ ವರ್ತಮಾನ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರ ಆತ್ಮವಿಶ್ವಾಸ ಹೆಚ್ಚಿಸಿದೆ. ಅದರ ಪ್ರಕಾರ ರಾಹುಲ್ ಗಾಂಧಿಯವರಿಗೆ ಕೊಡಬೇಕಾದ ಮೆಸೇಜನ್ನು ಸಿದ್ದರಾಮಯ್ಯ ಅವರು ಕೊಟ್ಟಿದ್ದಾರೆ.ಯಾವಾಗ ರಾಹುಲ್ ಗಾಂಧಿ ಅವರಿಗೆ ಈ ಮೆಸೇಜನ್ನು ಸಿದ್ದರಾಮಯ್ಯ ತಲುಪಿಸಿದ್ದಾರೆ ಎಂಬ ವರ್ತಮಾನ ಸಿಕ್ಕಿತೋ? ಇದಾದ ನಂತರ ಸಿದ್ಧು ಆಪ್ತರ ಪಡೆ ಸಂಪುಟ ಪುನರ್ರಚನೆಯ ದಿನವನ್ನು ಎದುರು ನೋಡುತ್ತಿದೆ.ಮೂಲಗಳ ಪ್ರಕಾರ, ಇತ್ತೀಚೆಗೆ ರಾಹುಲ್ ಗಾಂಧಿ ಅವರ ಜತೆ ಮಾತನಾಡಿದ […]
ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ; ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ಪಕ್ಕಾ
ರಾಜ್ಯ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸುಳಿವನ್ನು ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ ಆಗಿವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಶಾಸಕರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಸಿಎಂ ಸಂಪುಟ ಪುನಾರಚನೆಯ ಸುಳಿವು ನೀಡಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯ ಚರ್ಚೆ ಹೊತ್ತಲ್ಲೇ ಡಿನ್ನರ್ ಮೀಟಿಂಗ್ ಸಿಎಂ ಸಿದ್ದರಾಮಯ್ಯ ಕರೆದಿದ್ದಾರೆ. ಡಜನ್ ಗೂ ಹೆಚ್ಚು […]
ರಾಷ್ಟ್ರೀಯ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒಬ್ಬ ಒಳನುಸುಳುಕೋರ, ಅವರನ್ನು ಉತ್ತರಾಖಂಡಕ್ಕೆ ಗಡೀಪಾರು ಮಾಡಬೇಕು: ಅಖಿಲೇಶ್ ಯಾದವ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒಬ್ಬ ಒಳನುಸುಳುಕೋರನಾಗಿದ್ದು, ಅವರನ್ನು ಉತ್ತರಾಖಂಡಕ್ಕೆ ಗಡೀಪಾರು ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಆಗ್ರಹಿಸಿದ್ದಾರೆ. ಲಕ್ನೋದಲ್ಲಿ ನಡೆದ ರಾಮ್ ಮನೋಹರ್ ಲೋಹಿಯಾ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳನುಸುಳುಕೋರರ ಬಗ್ಗೆ ಬಿಜೆಪಿ ಲೆಕ್ಕಾಚಾರ ಕೊಡುತ್ತಿದೆ. ಉತ್ತರ ಪ್ರದೇಶದಲ್ಲಿಯೂ ಒಳನುಸುಳುಕೋರರಿದ್ದಾರೆ. ನಮ್ಮ ಮುಖ್ಯಮಂತ್ರಿ ಉತ್ತರಾಖಂಡದವರು. ಅವರನ್ನು ಅಲ್ಲಿಗೇ ಕಳುಹಿಸಬೇಕು. ಸೈದ್ಧಾಂತಿಕವಾಗಿಯೂ ಅವರು ಒಳನುಸುಳುಕೋರ. ಅವರು ಮೊದಲು ಬಿಜೆಪಿಯಲ್ಲಿರಲಿಲ್ಲ. ಇಂತಹ ಒಳನುಸುಳುಕೋರರನ್ನು ಯಾವಾಗ ಹೊರಹಾಕುತ್ತೀರಿ ಎಂದು ಅಖಿಲೇಶ್ […]
ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು-ನೀಲಿ ಬಣ್ಣದ ಬೀಕನ್ ಗಳ ಬಳಕೆ ನಿಷೇಧಿಸುವಂತೆ ರಾಜ್ಯಗಳಿಗೆ ಸೂಚನೆ: ಸು.ಕೋ
ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು ನೀಲಿ ಬಣ್ಣದ ಬೀಕನ್ ಗಳ ಖಾಸಗಿ ಬಳಕೆ, ತುರ್ತು ವಾಹನದ ಸೌಂಡ್ ನಿಷೇಧಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.ಕಾನೂನು ಬಾಹಿರ ಎಲ್ಇಡಿ ಲೈಟ್ ಗಳು ರಸ್ತೆ ಅಪಘಾತಗಳನ್ನು ಹೆಚ್ಚಿಸುತ್ತಿವೆ. ತುರ್ತು ವಾಹನಗಳಿಗೆಂದು ಇರುವ ಕೆಂಪು- ನೀಲಿ ಬೀಕನ್ ಗಳನ್ನು ಖಾಸಗಿ ವಾಹನಗಳಲ್ಲಿ ಬಳಸಲಾಗುತ್ತಿದೆ.ಇದು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳ ಬಳಕೆ […]
ಅಂತಾರಾಷ್ಟ್ರೀಯ
ವಿಶ್ವಸಂಸ್ಥೆಯಲ್ಲಿ ಇಸ್ರೇಲಿ ನಾಯಕ ಮಾತನಾಡುತ್ತಿದ್ದಂತೆ ಸಭಾಂಗಣದಲ್ಲಿ ಕೂಗಾಟ, ಧಿಕ್ಕಾರ, ಬಹಿಷ್ಕಾರದ ಘೋಷಣೆ.
ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ತನ್ನ ಕೆಲಸವನ್ನು ಮುಗಿಸಬೇಕಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೇಳಿದ್ದಾರೆ. ಗಾಜಾದಲ್ಲಿ ವಿನಾಶಕಾರಿ ಯುದ್ಧವನ್ನು ಕೊನೆಗೊಳಿಸಲು ಒಪ್ಪದ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರಗಳ ಪ್ರತಿಭಟನೆ ನಡುವೆಯೂ ವಿಶ್ವಸಂಸ್ಥೆಯಲ್ಲಿ ಉದ್ಧಟತನದಿಂದ ಭಾಷಣ ಮಾಡಿದ್ದಾರೆ. ವಿಶ್ವಸಂಸ್ಥೆಯಲ್ಲಿ ಅವರು ಭಾಷಣ ಮಾಡಲು ತಯಾರಾಗುತ್ತಿದ್ದಂತೆಯೇ ಡಜನ್ ಗಟ್ಟಲೇ ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ ಹೊರನಡೆದಿದ್ದಾರೆ. ನಂತರ ನೆತನ್ಯಾಹು ಭಾಷಣ ಮಾಡಿದ್ದಾರೆ. ಇಸ್ರೇಲಿ ನಾಯಕ ಮಾತನಾಡುತ್ತಿದ್ದಂತೆ ಸಭಾಂಗಣದಲ್ಲಿ ಕೂಗಾಟ, ಧಿಕ್ಕಾರದ […]
ಜುಲೈ 16 ರಂದು ನರ್ಸ್ ನಿಮಿಷಾ ಪ್ರಿಯ ಗಲ್ಲುಗೇರಿಸುವ ಕುರಿತು ಮಾಹಿತಿ; ನರ್ಸ್ ನಿಮಿಷಾ ಪ್ರಿಯ ಯೆಮೆನ್ ಪ್ರಜೆಯನ್ನು ಕೊಲೆ ಮಾಡಿರುವ ಆರೋಪ
ನರ್ಸ್ ನಿಮಿಷಾ ಪ್ರಿಯಾಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಜುಲೈ 16 ರಂದು ನಿಮಿಷಾ ಪ್ರಿಯ ಗಲ್ಲುಗೇರಿಸುವ ಕುರಿತು ಜೈಲು ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮೆನ್ನಲ್ಲಿ ಯೆಮೆನ್ ಪ್ರಜೆಯಾದ ತಲಾಲ್ ಅಬ್ದು ಮೆಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಪರಾಧಿ ಎಂದು ಸಾಬೀತಾಗಿದ್ದು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ನಿಮಿಷಾ ಮೆಹ್ದಿ ಸಹಕಾರದೊಂದಿಗೆ ಓಮನ್ನಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಆದರೆ ಮೆಹ್ದಿ ತನ್ನ ಪಾಸ್ಪೋರ್ಟ್ ವಶಕ್ಕೆ ತೆಗೆದುಕೊಂಡು […]