ಕರಾವಳಿ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಆರೋಪಿಯ ಬಂಧನ
ಮಂಗಳೂರು ನಗರದಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 179/2025 ರಂತೆ ಪ್ರಕರಣ ದಾಖಲಾಗಿ ತನಿಖೆಯ ಹಂತದಲ್ಲಿತ್ತು. ತನಿಖೆಯ ಸಮಯದಲ್ಲಿ TN- MADDY ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ವ್ಯಕ್ತಿಯು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ, ತಂದೆ : ಬಾಲಕೃಷ್ಣ, ಮೂಡುಬೆಳ್ಳೆ ಗ್ರಾಮ ಎಂದು ತನಿಖೆಯಲ್ಲಿ […]
ಅಕ್ರಮ ಟೋಲ್ ಗೇಟ್ ಗಳ ವಿರುದ್ಧ ಎಪ್ರಿಲ್ ನಲ್ಲಿ ಪಾದಯಾತ್ರೆಯ ಎಚ್ಚರಿಕೆ: ಮುನೀರ್ ಕಾಟಿಪಳ್ಳ
ಬಿ.ಸಿ ರೋಡ್ – ಚಾರ್ಮಾಡಿ ರಸ್ತೆಯ ಪಣಕಜೆ ಎಂಬಲ್ಲಿ ನಿರ್ಮಾಣವಾಗುವ ಟೋಲ್ ಗೇಟ್ ಕಾನೂನು ಬಾಹಿರವಾಗಿದೆ. ಜಿಲ್ಲೆಯಲ್ಲಿರುವ ಅಕ್ರಮ ಟೋಲ್ ಗೇಟ್ ಗಳ ವಿರುದ್ಧ ಎಪ್ರಿಲ್ ನಲ್ಲಿ ಪಾದಯಾತ್ರೆ ನಡೆಸಲಾಗುವುದು ಎಂದು ಸಿಪಿಐ(ಎಂ) ದ.ಕ ಜಿಲ್ಲಾ ಕಾರ್ಯದರ್ಶಿ, ಹೋರಾಟಗಾರ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದರು. ಅವರು ಬೆಳ್ತಂಗಡಿ ತಾಲೂಕಿನ ಪಣಕಜೆ ಎಂಬಲ್ಲಿ ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಜಿಲ್ಲಾ ಮಟ್ಟದ ಟೋಲ್ ಗೇಟ್ ತೆರವು ಹೋರಾಟ ಸಮಿತಿ ನಿಯೋಗದಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಬಳಿಕ ಸಾರ್ವಜನಿಕರನ್ನು […]
ರಾಜ್ಯ
ಆಪರೇಷನ್ ಟ್ವೆಂಟಿಗೆ ಸಿದ್ದು ರೆಡಿ; ಕೆ.ಸಿ. ವೇಣುಗೋಪಾಲ್ ಅವರ 3:2 ಸೂತ್ರ. ಜಮೀರಣ್ಣಾಕೀ ಪೊಲಿಟಿಕ್ಸ್
✍️. ಅರ್.ಟಿ.ವಿಠ್ಠಲಮೂರ್ತಿ ಕಳೆದ ಬುಧವಾರ ವಿಧಾನಸಭೆಯ ಮೊಗಸಾಲೆಯಲ್ಲಿ ಕುಳಿತಿದ್ದ ಡಿಸಿಎಂ ಡಿಕೆಶಿ ಕ್ಯಾಂಪಿನ ಹಿರಿಯ ನಾಯಕರೊಬ್ಬರು ತಮ್ಮ ಆಪ್ತರ ಬಳಿ ಮೆಲ್ಲಗೆ ಮಾತನಾಡುತ್ತಿದ್ದರು. ಅವರ ಪ್ರಕಾರ: ‘ಏಪ್ರಿಲ್ ಮೊದಲ ವಾರ ದಿಲ್ಲಿಯಲ್ಲಿ ನಿರ್ಣಾಯಕ ಸಭೆ ನಡೆಯಲಿದೆ.’ ಅರ್ಥಾತ್, ಬಜೆಟ್ ಅಧಿವೇಶನದ ನಂತರ ದಿಲ್ಲಿಗೆ ಧಾವಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಹತ್ವದ ವಿಷಯವೊಂದನ್ನು ಪ್ರಸ್ತಾಪಿಸಲಿದ್ದಾರೆ. ಅಂದ ಹಾಗೆ ಕೆ.ಸಿ. ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಪರವಾಗಿಯೇ ನಿಂತವರು ಮತ್ತು […]
543 ಲೋಕಸಭಾ ಸ್ಥಾನಗಳನ್ನು ಬರೋಬ್ಬರಿ 816ಕ್ಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ; ಕರ್ನಾಟಕದ ಹಾಲಿ ಸಂಸದರ ಸಂಖ್ಯೆ 28 ರಿಂದ 42ಕ್ಕೆ ಏರಿಕೆ
ಕೇಂದ್ರ ಸರ್ಕಾರ ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು ಬರೋಬ್ಬರಿ 816ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 2011ರ ಜನಗಣತಿ ಆಧರಿಸಿ ಕ್ಷೇತ್ರಗಳ ಮರ ವಿಂಗಡಣೆ ಪ್ರಕ್ರಿಯೆ ನಡೆದಲ್ಲಿ ಕರ್ನಾಟಕದ ಹಾಲಿ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆಯಾಗಲಿದೆ. ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ತಿದ್ದುಪಡಿ ಕೂಡ ಈ ವಿಧೇಯಕದ ಭಾಗವಾಗಲಿದೆ. 2029ರ ಚುನಾವಣೆಗೆ ಮೊದಲು ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ಪಕ್ಷಗಳ […]
ರಾಷ್ಟ್ರೀಯ
ದುಡ್ಡು ಕೊಟ್ಟರೆ ಸಿಗುತ್ತೆ ಶುದ್ಧ ಗಾಳಿ.!, ಟ್ರೆಂಡ್ ಆಗುತ್ತಿದೆ ಶುದ್ಧವಾದ ಗಾಳಿ ನೀಡುವ ಚಿಕಿತ್ಸಾಲಯಗಳು
ದುಡ್ಡು.. ದುಡ್ಡು ಪ್ರಪಂಚದಲ್ಲಿ ದುಡ್ಡು ಇಲ್ಲದೆ ಏನೂ ನಡೆಯಲ್ಲ. ಕೊನೆಗೆ ದುಡ್ಡು ಇಲ್ಲದಿದ್ದರೆ ಒಳ್ಳೆಯ ಗಾಳಿ ಕೂಡ ಸಿಗಲ್ಲ ಎಂಬ ಸ್ಥಿತಿ ನಿರ್ಮಾಣವಾಗುತ್ತಿದೆ. ಅದರಲ್ಲೂ ದೇಶದ ಕೆಲವು ರಾಜಧಾನಿಗಳಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಾ ಇದ್ದು, ವಾತಾವರಣ ಮಾಲಿನ್ಯದಿಂದ ಆತಂಕ ಮೂಡಿಸುತ್ತಿದೆ. ಕೆಲವೇ ವರ್ಷಗಳ ಹಿಂದೆ ಮೆಟ್ರೋ ಪೊಲಿಟಿ ಸಿಟಿಗಳಲ್ಲಿ ಅತ್ಯಂತ ಶುದ್ಧ ಗಾಳಿಯನ್ನು ಉಸಿರಾಡುತ್ತಿದ್ದ ಜನರಿಗೆ ಇದೀಗ ವಾಯು ಮಾಲಿನ್ಯದ ಪರಿಣಾಮ ದೊಡ್ಡ, ದೊಡ್ಡ ಆರೋಗ್ಯದ ಸಮಸ್ಯೆಗಳು ಎದುರಾಗುತ್ತಿವೆ. ಇಂತಹ ಸಂದರ್ಭದಲ್ಲೇ 4,000 ರೂಪಾಯಿ ಕೊಟ್ಟರೆ […]
ಏಪ್ರಿಲ್ ಒಂದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ (NHIA) ಟೋಲ್ ದರ ಏರಿಕೆಯ ಬಿಸಿ.!
ವಾಹನ ಸವಾರರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಬರುವ ಕರ್ನಾಟಕದ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಹೆಚ್ಚಿಸಲಾಗಿದ್ದು, ಈ ಹೊಸ ದರಗಳು ಏಪ್ರಿಲ್ ಒಂದರಿಂದ ಜಾರಿಗೆ ಬರಲಿವೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಸಂಚರಿಸುವವರಿಗೆ ಈ ದರ ಏರಿಕೆ ದೊಡ್ಡ ಹೊರೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಮತ್ತು ಸಗಟು ಬೆಲೆ ಸೂಚ್ಯಂಕವನ್ನು ಆಧರಿಸಿ ಟೋಲ್ ದರಗಳನ್ನು ಪರಿಷ್ಕರಿಸಲಾಗುತ್ತದೆ. ರಸ್ತೆಗಳ ನಿರ್ವಹಣೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಈ ಹೆಚ್ಚಳ ಅನಿವಾರ್ಯ ಎಂದು NHAI […]
ಅಂತಾರಾಷ್ಟ್ರೀಯ
ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ
ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]
ಮೂಲಸೌಕರ್ಯದ ಮೇಲಿನ ದಾಳಿಗೆ ಇರಾನ್ ಆಕ್ರೋಶ; ಇಂತಹ ದಾಳಿ ನಡೆದರೆ ನಿಮ್ಮ ಮಿತ್ರ ರಾಷ್ಟ್ರಗಳನ್ನು ಸಂಪೂರ್ಣ ನಾಶ ಮಾಡದೆ ಬಿಡುವುದಿಲ್ಲ: ಇರಾನ್ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ “ಅನಿಯಂತ್ರಿತ ಪ್ರತಿದಾಳಿ” ನಡೆಸುವುದಾಗಿ ಇರಾನ್ ಸ್ಪಷ್ಟ ಎಚ್ಚರಿಕೆ ನೀಡಿದೆ. ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿ ನಡೆಸಿದರೆ ಗಲ್ಫ್ ಪ್ರದೇಶದ ತೈಲ ಹಾಗೂ ಅನಿಲ ವಲಯವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಇಸ್ರೇಲ್’ಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ […]
