ಕರಾವಳಿ
ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಜೀವ ಬೆದರಿಕೆ ಪ್ರಕರಣ: ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತನಿದೆ 20 ವರ್ಷಗಳ ಕಠಿಣ ಸಜೆ ಹಾಗೂ ದಂಡ
ಮಂಗಳೂರು ತಾಲೂಕಿನ ಕುಂಜತ್ತಬೈಲು ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತ 2024ನೇ ಇಸವಿಯ ಫೆಬ್ರವರಿ ತಿಂಗಳಿನಿಂದ ನೊಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯ ಮನವೊಲಿಸಿ, ನೊಂದ ಅಪ್ರಾಪ್ತ ಬಾಲಕಿ ವಾಸವಾಗಿದ್ದ ಶಕ್ತಿ ನಗರದ ಮನೆಯಲ್ಲಿ 2024 ನೇ ಇಸವಿಯ ಸೆಪ್ಟೆಂಬರ್ ತಿಂಗಳಿನಲ್ಲಿ ಹಾಗೂ ಅಳಪೆ ಗ್ರಾಮದ ಕೆಂಬಾರು ಕೆ.ಇ.ಬಿ. ಮುಂಭಾಗವಿರುವ ಮನೆಯೊಂದಲ್ಲಿ ಹಲವಾರು ಬಾರಿ ಪದೇ ಪದೇ ಅತ್ಯಾಚಾರ ನಡೆಸಿದ್ದು, ಮಾತ್ರವಲ್ಲದೆ ಬಾಲಕಿ ಸ್ನಾನ ಗೃಹದಲ್ಲಿ ನಗ್ನ ಸ್ಥಿತಿಯಲ್ಲಿ ಸ್ನಾನ ಮಾಡುತ್ತಿರುವ ಸಮಯದಲ್ಲಿ ಆರೋಪಿ […]
ಪಣಂಬೂರು ಬೀಚಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ, ಹಾಗೂ ದಂಡ
ತೋಟ ಬೆಂಗ್ರೆ ಬೀಚ್ ನಲ್ಲಿ ಕುಳಿತು ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದ ವೇಳೆ, ಏಳು ಮಂದಿ ಅಪರಿಚಿತರು ಬಂದು ಯುವತಿಯ ಸ್ನೇಹಿತನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ, ಯುವತಿಯ ಮೇಲೆ ಬಲವಂತವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದರು. ಘಟನೆಯ ನಂತರ ಭಯದಿಂದ ಯುವತಿಯು ಯಾರಿಗೂ ವಿಷಯ ತಿಳಿಸದೆ ಇದ್ದು, ಎರಡು ದಿನಗಳ ಬಳಿಕ ಆರೋಪಿಗಳು ದೂರವಾಣಿ ಕರೆ ಮಾಡಿ ಬರಲು ಸೂಚಿಸಿದಾಗ, ಯುವತಿಯು ಮನೆಯವರಿಗೆ ವಿಷಯ ತಿಳಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. […]
ರಾಜ್ಯ
ಕಾವೇರಿ ವಿವಾದ: ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿರುವ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು (ಆಗಸ್ಟ್ 2): ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ, ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾನೂನು ಮತ್ತು ರಾಜಕೀಯ ಕಾರ್ಯತಂತ್ರವನ್ನು ರೂಪಿಸಲು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವಿಷಯದಲ್ಲಿ ಕರ್ನಾಟಕದ ನಿಲುವಿನ ಕುರಿತು ಚರ್ಚಿಸಲು ನಡೆಯಲಿರುವ ಈ ಸಭೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ […]
ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚು
ಅಸುರಕ್ಷಿತ ನಡೆನುಡಿಗೆ ಒಳಗಾಗಿ 22 ವರ್ಷ ಒಳಗಿನ ಯುವ ಜನತೆ ಎಚ್ಐವಿ ಬಲೆಗೆ ಬೀಳುತ್ತಿದ್ದಾರೆ ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚಾಗುತ್ತಿರುವ ಆತಂಕಕಾರಿ ಸಂಗತಿಯೊಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಬೆಳಕಿಗೆ ಬಂದಿದೆ. ರಾಜ್ಯದ ಯುವಜನತೆಯಲ್ಲಿ ಹೆಚ್ಐವಿ ಸೋಂಕು ದಿನೇ ದಿನೇ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ಆರಂಭಿಕ ಹಂತದಲ್ಲೇ ತಡೆಯಲು ರಾಜ್ಯ ಸರ್ಕಾರಿ ನಿರ್ಧಾರಿಸಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ ಪರೀಕ್ಷೆಯನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ […]
ರಾಷ್ಟ್ರೀಯ
ಕೇರಳದಲ್ಲಿ ಭಾರಿ ಮಳೆ; ಎಂಟು ಮಂದಿ ಸಾವು, 13 ಮಂದಿಗೆ ಗಾಯ, 8 ಮಂದಿ ನಾಪತ್ತೆ: ಕೇರಳ ಸಿಎಂ
ತಿರುವನಂತಪುರಂ: (ಆಗಸ್ಟ್ 2) ರಾಜ್ಯದ ಹಲವೆಡೆ ಆಸ್ತಿಪಾಸ್ತಿ ಹಾನಿ, ಭೂಕುಸಿತ ಮತ್ತು ಜಲಾವೃತಕ್ಕೆ ಕಾರಣವಾದ ಹಿಂದಿನ ದಿನದ ಭಾರಿ ಮಳೆಯಿಂದಾಗಿ ಎಂಟು ಮಂದಿ ಮೃತಪಟ್ಟಿದ್ದಾರೆ, ಅಷ್ಟೇ ಸಂಖ್ಯೆಯ ಜನರು ನಾಪತ್ತೆಯಾಗಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಭಾನುವಾರ ತಿಳಿಸಿದ್ದಾರೆ. ತಮ್ಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, 27 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ, 196 ಮನೆಗಳು ಭಾಗಶಃ ಹಾನಿಗೀಡಾಗಿವೆ ಮತ್ತು ರಾಜ್ಯಾದ್ಯಂತ ತೆರೆಯಲಾದ 209 ಪರಿಹಾರ ಶಿಬಿರಗಳಿಗೆ 5,792 ಜನರನ್ನು ಸ್ಥಳಾಂತರಿಸಲಾಗಿದೆ […]
SIR ಕೋಟಿಗೂ ಮಿಕ್ಕ ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ
ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯವು ಭರದಿಂದ ಸಾಗುತ್ತಿದ್ದು, ಬೃಹತ್ ಪ್ರಮಾಣದಲ್ಲಿ ಹೆಸರುಗಳು ಕರಡು ಪಟ್ಟಿಯಿಂದ ಹೊರಬೀಳುವ ಲಕ್ಷಣಗಳು ಕಂಡುಬರುತ್ತಿವೆ. ಪ್ರಸ್ತುತ ಅಂಕಿ-ಅಂಶಗಳ ಪ್ರಕಾರ, ವಾರಾಂತ್ಯದ ವೇಳೆಗೆ ಸುಮಾರು 98.73 ಲಕ್ಷ ಮತದಾರರನ್ನು ‘ASDDO’ (ಪತ್ತೆಯಾಗದವರು, ಶಾಶ್ವತ ಸ್ಥಳಾಂತರಗೊಂಡವರು, ಮೃತಪಟ್ಟವರು, ನಕಲಿ ಹೆಸರುಗಳು, ಇತರೆ) ವರ್ಗಕ್ಕೆ ಸೇರಿಸಲಾಗಿದ್ದು, ಈ ಸಂಖ್ಯೆಯು ಆಗಸ್ಟ್ 8ರ ವೇಳೆಗೆ ಒಂದು ಕೋಟಿಗೂ ಮಿಕ್ಕಿ ಗಡಿ ದಾಟುವ ಸಾಧ್ಯತೆಯಿದೆ. ಇದುವರೆಗೆ ನಡೆಸಲಾದ ಸಾರ್ವತ್ರಿಕ ಪರಿಶೀಲನೆಯಲ್ಲಿ ಒಟ್ಟು 98.73 ಲಕ್ಷ ಜನರನ್ನು ಈ ತಾತ್ಕಾಲಿಕ […]
ಅಂತಾರಾಷ್ಟ್ರೀಯ
ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ
ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
