ಕರಾವಳಿ
ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಜೀವ ಬೆದರಿಕೆ ಪ್ರಕರಣ: ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತನಿದೆ 20 ವರ್ಷಗಳ ಕಠಿಣ ಸಜೆ ಹಾಗೂ ದಂಡ
ಮಂಗಳೂರು ತಾಲೂಕಿನ ಕುಂಜತ್ತಬೈಲು ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತ 2024ನೇ ಇಸವಿಯ ಫೆಬ್ರವರಿ ತಿಂಗಳಿನಿಂದ ನೊಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯ ಮನವೊಲಿಸಿ, ನೊಂದ ಅಪ್ರಾಪ್ತ ಬಾಲಕಿ ವಾಸವಾಗಿದ್ದ ಶಕ್ತಿ ನಗರದ ಮನೆಯಲ್ಲಿ 2024 ನೇ ಇಸವಿಯ ಸೆಪ್ಟೆಂಬರ್ ತಿಂಗಳಿನಲ್ಲಿ ಹಾಗೂ ಅಳಪೆ ಗ್ರಾಮದ ಕೆಂಬಾರು ಕೆ.ಇ.ಬಿ. ಮುಂಭಾಗವಿರುವ ಮನೆಯೊಂದಲ್ಲಿ ಹಲವಾರು ಬಾರಿ ಪದೇ ಪದೇ ಅತ್ಯಾಚಾರ ನಡೆಸಿದ್ದು, ಮಾತ್ರವಲ್ಲದೆ ಬಾಲಕಿ ಸ್ನಾನ ಗೃಹದಲ್ಲಿ ನಗ್ನ ಸ್ಥಿತಿಯಲ್ಲಿ ಸ್ನಾನ ಮಾಡುತ್ತಿರುವ ಸಮಯದಲ್ಲಿ ಆರೋಪಿ […]
ಪಣಂಬೂರು ಬೀಚಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ, ಹಾಗೂ ದಂಡ
ತೋಟ ಬೆಂಗ್ರೆ ಬೀಚ್ ನಲ್ಲಿ ಕುಳಿತು ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದ ವೇಳೆ, ಏಳು ಮಂದಿ ಅಪರಿಚಿತರು ಬಂದು ಯುವತಿಯ ಸ್ನೇಹಿತನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ, ಯುವತಿಯ ಮೇಲೆ ಬಲವಂತವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದರು. ಘಟನೆಯ ನಂತರ ಭಯದಿಂದ ಯುವತಿಯು ಯಾರಿಗೂ ವಿಷಯ ತಿಳಿಸದೆ ಇದ್ದು, ಎರಡು ದಿನಗಳ ಬಳಿಕ ಆರೋಪಿಗಳು ದೂರವಾಣಿ ಕರೆ ಮಾಡಿ ಬರಲು ಸೂಚಿಸಿದಾಗ, ಯುವತಿಯು ಮನೆಯವರಿಗೆ ವಿಷಯ ತಿಳಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. […]
ರಾಜ್ಯ
ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚು
ಅಸುರಕ್ಷಿತ ನಡೆನುಡಿಗೆ ಒಳಗಾಗಿ 22 ವರ್ಷ ಒಳಗಿನ ಯುವ ಜನತೆ ಎಚ್ಐವಿ ಬಲೆಗೆ ಬೀಳುತ್ತಿದ್ದಾರೆ ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚಾಗುತ್ತಿರುವ ಆತಂಕಕಾರಿ ಸಂಗತಿಯೊಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಬೆಳಕಿಗೆ ಬಂದಿದೆ. ರಾಜ್ಯದ ಯುವಜನತೆಯಲ್ಲಿ ಹೆಚ್ಐವಿ ಸೋಂಕು ದಿನೇ ದಿನೇ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ಆರಂಭಿಕ ಹಂತದಲ್ಲೇ ತಡೆಯಲು ರಾಜ್ಯ ಸರ್ಕಾರಿ ನಿರ್ಧಾರಿಸಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ ಪರೀಕ್ಷೆಯನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ […]
ಗೃಹಜ್ಯೋತಿ ಯೋಜನೆ: ಜುಲೈ 31 ಅಂತಿಮ ಗಡುವಲ್ಲ; ಆಗಸ್ಟ್ 31 ವರೆಗೆ ಅವಕಾಶ
ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಪುನರ್ ಪರಿಶೀಲನೆ ಪ್ರಕ್ರಿಯೆ ರಾಜ್ಯಾದ್ಯಂತ ಚುರುಕಿನಿಂದ ಸಾಗಿದೆ. ಈ ನಡುವೆ, ಪರಿಶೀಲನೆಗೆ ಜುಲೈ 31 ಕೊನೆಯ ದಿನಾಂಕ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಆದರೆ, ಈ ವದಂತಿಗಳಿಗೆ ತೆರೆ ಎಳೆದಿರುವ ಬೆಸ್ಕಾಂ ಹಿರಿಯ ಅಧಿಕಾರಿಗಳು, ಜುಲೈ 31 ಅಂತಿಮ ಗಡುವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿ ಮನೆಗೆ ತೆರಳುತ್ತಿರುವ ಮೀಟರ್ ರೀಡರ್ ಹಾಗೂ ಲೈನ್ ಮ್ಯಾನ್ಗಳು ಪ್ರಸ್ತುತ ವಾಸವಿರುವವರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಯೋಜನೆಯು ಅರ್ಹರಿಗೆ […]
ರಾಷ್ಟ್ರೀಯ
ಜೆನ್ ಝೀ ‘ಪವರ್’ ಪತರುಗುಟ್ಟಿದ ಮೋ-ಶಾ ಸಾಮ್ರಾಜ್ಯ.. ನಮೋ ಸರಕಾರ ಮೆರೆದಾಡಲು ಕಾಂಗ್ರೆಸ್ ವೈಫಲ್ಯವೂ ಕಾರಣ
ಜೆನ್ ಝೀ ಕ್ರಾಂತಿಕಾರಿ ಹೋರಾಟ ಕಾಂಗ್ರೆಸ್ಸಿಗೊಂದು ಪಾಠವಾಗಲಿ.. ಕಾಂಗ್ರೆಸ್ ನಲ್ಲಿ ಯುವಶಕ್ತಿ ಮೊಳಗಲಿ.! ಆನೆ ನಡೆದದ್ದೇ ದಾರಿ, ಯಾರೂ ಬಗ್ಗಿಸಲು ಸಾಧ್ಯವಿಲ್ಲ ಅನ್ನುವ ಅಹಂ ನಲ್ಲಿದ್ದ ಮೋ-ಶಾ ಸಾಮ್ರಾಜ್ಯವನ್ನು ತಕ್ಕಮಟ್ಟಿಗೆ ಬಗ್ಗಿಸುವಲ್ಲಿ ತುಂಟ ಜಿರಳೆಗಳಿಗೆ ಸಾಧ್ಯವಾಗಿದೆ. ಕಳೆದ ಹನ್ನೆರಡು ವರ್ಷಗಳಿಂದ ನಮ್ಮ ಸರಕಾರ ರಾಜೀನಾಮೆ ನೀಡುವ ಸರಕಾರವಲ್ಲ ಎಂದು ಲಂಗು ಲಗಾಮಿಲ್ಲದೆ ಚಲಿಸುತ್ತಿದ್ದ ಸರಕಾರಕ್ಕೆ ಬ್ರೇಕ್ ಹಾಕುವಲ್ಲಿ ನಿನ್ನೆ ಮೊನ್ನೆ ಹುಟ್ಟಿದ ಆನ್ ಲೈನ್ ಜಿರಳೆಗಳಿಗೆ ಸಾಧ್ಯವಾಗುವುದಾದರೆ ನೂರಾರು ವರ್ಷಗಳ ಇತಿಹಾಸವಿರುವ ರಾಷ್ಟ್ರೀಯ ಪಕ್ಷವೊಂದಕ್ಕೆ ಆಡಳಿತಾರೂಢರ ಹುಳುಕುಗಳನ್ನು […]
ಸೈಬರ್ ಅಪರಾಧಿಗಳಿಗೆ ನಕಲಿ ಬ್ಯಾಂಕಿಂಗ್ ಅಪ್ಲಿಕೇಶನ್ ಮತ್ತು ಮಾಲ್ವೇರ್ ತುಂಬಿದ APK ಫೈಲ್ ಪೂರೈಕೆ, 17 ವರ್ಷದ ಪೋರ ಡೆವಲಪರ್ನ ಬಂಧನ
ದೇಶಾದ್ಯಂತ ಸೈಬರ್ ಕ್ರಿಮಿನಲ್ ಗಳಿಗೆ ನಕಲಿ ಬ್ಯಾಂಕಿಂಗ್ ಅಪ್ಲಿಕೇಶನ್ಗಳು ಮತ್ತು ಮಾಲ್ವೇರ್ ತುಂಬಿದ APK ಫೈಲ್ಗಳನ್ನು ರಚಿಸಿ ಪೂರೈಸಿದ ಆರೋಪದ ಮೇಲೆ ಗುಜರಾತ್ನ ಸೂರತ್ ಸೈಬರ್ ಕ್ರೈಮ್ ಸೆಲ್ ಉತ್ತರ ಪ್ರದೇಶದ ಕಾನ್ಪುರದ 17 ವರ್ಷದ ಡೆವಲಪರ್ನನ್ನು ಬಂಧಿಸಲಾಗಿದೆ. ಆರೋಪಿಯು 11 ನೇ ತರಗತಿಯವರೆಗೆ ಮಾತ್ರ ಅಧ್ಯಯನ ಮಾಡಿದ್ದರೂ, ದೊಡ್ಡ ಪ್ರಮಾಣದ ಸೈಬರ್ ವಂಚನೆ ಕಾರ್ಯಾಚರಣೆಗಳಲ್ಲಿ ಬಳಸಲಾಗುತ್ತಿದ್ದ ಅತ್ಯಾಧುನಿಕ ಸಾಧನಗಳನ್ನು ಅಭಿವೃದ್ಧಿಪಡಿಸಲು ಕೃತಕ ಬುದ್ಧಿಮತ್ತೆ ಮತ್ತು ಟೆಲಿಗ್ರಾಮ್ ಅನ್ನು ಬಳಸಿದ್ದಾನೆ. ಬಂಧಿತನನ್ನು ರೋಹಿತ್ ವೀರೇಂದ್ರ ಸಿಂಗ್ ಶಕ್ಯಾ […]
ಅಂತಾರಾಷ್ಟ್ರೀಯ
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
