ಕರಾವಳಿ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಸೌಜನ್ಯ ತಾಯಿ ಕುಸುಮವತಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮುಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ […]

ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ- ಯು.ಟಿ ಕಾದರ್ ಭರವಸೆ, ಸಭೆ ನಿಗದಿ ಮಾಡಲು ಆಯುಕ್ತರಿಗೆ ಸೂಚನೆ

ಮಂಗಳೂರು : ನಗರದಲ್ಲಿ ಅನೇಕ ವರ್ಷಗಳಿಂದ ಪುರಭವನದ ಬಳಿ ವಾರದ ರಜಾದಿನದ ವ್ಯಾಪಾರ ನಡೆಯುತ್ತಿದ್ದ ಸಂಡೆ ಬಜಾರ್ ವ್ಯಾಪಾರಸ್ಥರನ್ನು ಮಹಾನಗರ ಪಾಲಿಕೆ ತೆರವುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಂಡೆ ಬಜಾರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘವು ಮನವಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರಾದ ಯು.ಟಿ ಕಾದರ್ ಅವರು ಇಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರತಿನಿಧಿಗಳ ಸಭೆ ನಡೆಸಿ ಸಂಡೆ ಬಜಾರ್ ವ್ಯಾಪಾರಸ್ಥರ ಅಹವಾಲು ಆಲಿಸಿ, ಸಂಡೆ […]

ರಾಜ್ಯ

ಅಪ್ರಾಪ್ತೆಯನ್ನು ದೇವಸ್ಥಾನಕ್ಕೆಂದು ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ, ರಾತ್ರಿಪೂರ್ತಿ ಅತ್ಯಾಚಾರ; ಮೂವರ ಬಂಧನ

ದೇವಸ್ಥಾನಕ್ಕೆಂದು ಅಪ್ರಾಪ್ತೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ , ರಾತ್ರಿ ಪೂರ್ತಿ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17ರ ರಾತ್ರಿ ಈ ನೀಚ ಕೃತ್ಯ ನಡೆದಿದ್ದು, ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಹೋಗೋಣಾ ಅಂತಾ ಅಪ್ರಾಪ್ತೆಯನ್ನು ಪುಸಲಾಯಿಸಿ ರೇಣುಕಾ ಕರೆ ತಂದಿದ್ದಳು. ಈ ವೇಳೆ ಆಟೋದಲ್ಲಿ ಬೇರೆಡೆಗೆ ರೇಣುಕಾ, ವೆಂಕಟರಮಣ ಮತ್ತು ನವೀನ್ […]

ಮದುವೆಯಾಗುವುದಾಗಿ ನಂಬಿಸಿ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ, ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಯ್ಯೂರು ಗ್ರಾಮದ ಉದ್ಯಮಿ ಅನನ್ಯ ಕೃಷ್ಣ ಎಂಬವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ ಮೂಲದ ಅನಿಷಾ ಪಾಲನ್ನ ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕ ದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಆರೋಪಿ […]

ರಾಷ್ಟ್ರೀಯ

ಸಿಜೆಪಿ ಜೊತೆ ಮಾತುಕತೆಗೆ ಮುಂದಾದ ಕೇಂದ್ರ ಸರಕಾರ; ಸಚಿವ ಜೆ.ಪಿ. ನಡ್ಡಾ ಜೊತೆ ಮಾತುಕತೆ

ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ಪ್ರಶ್ನಿಸಿ ಕಾಕ್ರೋಜ್​ ಜನತಾ ಪಾರ್ಟಿಯ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದು ಸಂಸತ್ ಚಲೋ ಎಂಬ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ. ಈ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ ಇರದ ಕಾರಣ ಕೆಲ ಕಡೆಗಳಲ್ಲಿ ಲಾಠಿ ಚಾರ್ಜ್​ ಕೂಡ ಆಗಿದೆ ಎಂದು ವರದಿಯಾಗಿದೆ. ಇದರ ನಡುವೆ ಪ್ರತಿಭಟನೆಯ ತೀವ್ರತೆಯನ್ನು ಅರಿತ ಕೇಂದ್ರ ಸರ್ಕಾರವು ಸಿಜೆಪಿಯೊಂದಿಗೆ ಮಾತುಕತೆಗೆ ಮುಂದಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಕಾಕ್ರೋಚ್ ಜನತಾ ಪಕ್ಷದ ಪ್ರತಿನಿಧಿಗಳು […]

ಚುನಾವಣಾ ಆಯೋಗವು ಪೌರತ್ವವನ್ನು ನಿರ್ಧರಿಸುವ ಸಾಂವಿಧಾನಿಕ ಸಂಸ್ಥೆಯಲ್ಲ: ಸುಪ್ರೀಂ ಕೋರ್ಟ್

ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಲು ಚುನಾವಣಾ ಆಯೋಗಕ್ಕೆ ವಿಶೇಷ ಅಧಿಕಾರವಿದೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಹೆಗೆದುಹಾಕಿದ ಮಾತ್ರಕ್ಕೆ ವ್ಯಕ್ತಿಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ. ಚುನಾವಣಾ ಆಯೋಗವು ಪೌರತ್ವವನ್ನು ನಿರ್ಧರಿಸುವ ಸಾಂವಿಧಾನಿಕ ಸಂಸ್ಥೆಯಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ಗೆ (SIR) ಸಂಬಂಧಿಸಿದಂತೆ ಶುಕ್ರವಾರ ನಡೆದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಹೇಳಿಕೆ ನೀಡಿದೆ. ಬಿಹಾರ SIR ಪ್ರಕರಣದಲ್ಲಿ ಈಗಾಗಲೇ ನೀಡಿರುವ ತೀರ್ಪನ್ನ ಉಲ್ಲೇಖಿಸಿದ ನ್ಯಾಯಾಲಯ, ಪೌರತ್ವವನ್ನ […]

ಅಂತಾರಾಷ್ಟ್ರೀಯ

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

error: Content is protected !!