ಕರಾವಳಿ
ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಜೀವ ಬೆದರಿಕೆ ಪ್ರಕರಣ: ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತನಿದೆ 20 ವರ್ಷಗಳ ಕಠಿಣ ಸಜೆ ಹಾಗೂ ದಂಡ
ಮಂಗಳೂರು ತಾಲೂಕಿನ ಕುಂಜತ್ತಬೈಲು ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತ 2024ನೇ ಇಸವಿಯ ಫೆಬ್ರವರಿ ತಿಂಗಳಿನಿಂದ ನೊಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯ ಮನವೊಲಿಸಿ, ನೊಂದ ಅಪ್ರಾಪ್ತ ಬಾಲಕಿ ವಾಸವಾಗಿದ್ದ ಶಕ್ತಿ ನಗರದ ಮನೆಯಲ್ಲಿ 2024 ನೇ ಇಸವಿಯ ಸೆಪ್ಟೆಂಬರ್ ತಿಂಗಳಿನಲ್ಲಿ ಹಾಗೂ ಅಳಪೆ ಗ್ರಾಮದ ಕೆಂಬಾರು ಕೆ.ಇ.ಬಿ. ಮುಂಭಾಗವಿರುವ ಮನೆಯೊಂದಲ್ಲಿ ಹಲವಾರು ಬಾರಿ ಪದೇ ಪದೇ ಅತ್ಯಾಚಾರ ನಡೆಸಿದ್ದು, ಮಾತ್ರವಲ್ಲದೆ ಬಾಲಕಿ ಸ್ನಾನ ಗೃಹದಲ್ಲಿ ನಗ್ನ ಸ್ಥಿತಿಯಲ್ಲಿ ಸ್ನಾನ ಮಾಡುತ್ತಿರುವ ಸಮಯದಲ್ಲಿ ಆರೋಪಿ […]
ಪಣಂಬೂರು ಬೀಚಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ, ಹಾಗೂ ದಂಡ
ತೋಟ ಬೆಂಗ್ರೆ ಬೀಚ್ ನಲ್ಲಿ ಕುಳಿತು ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದ ವೇಳೆ, ಏಳು ಮಂದಿ ಅಪರಿಚಿತರು ಬಂದು ಯುವತಿಯ ಸ್ನೇಹಿತನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ, ಯುವತಿಯ ಮೇಲೆ ಬಲವಂತವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದರು. ಘಟನೆಯ ನಂತರ ಭಯದಿಂದ ಯುವತಿಯು ಯಾರಿಗೂ ವಿಷಯ ತಿಳಿಸದೆ ಇದ್ದು, ಎರಡು ದಿನಗಳ ಬಳಿಕ ಆರೋಪಿಗಳು ದೂರವಾಣಿ ಕರೆ ಮಾಡಿ ಬರಲು ಸೂಚಿಸಿದಾಗ, ಯುವತಿಯು ಮನೆಯವರಿಗೆ ವಿಷಯ ತಿಳಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. […]
ರಾಜ್ಯ
ಲಂಚ ಪ್ರಕರಣ: ಎ.ಸಿ ಕಾವ್ಯಾರಾಣಿ, ಆಪ್ತಸಹಾಯಕ ಶಿವಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ
ಮೈಸೂರು: ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್ ಸೋಮವಾರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 31 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ 15 ಲಕ್ಷಕ್ಕೆ ರೂಪಾಯಿ ಬೇಡಿಕೆ ಇಟ್ಟಿದ್ದರು. ತದ ನಂತರ 10.50 ಲಕ್ಷಕ್ಕೆ ಒಪ್ಪಂದವಾಗಿತ್ತು. ಈ ಪೈಕಿ ಮೊದಲ ಕಂತಾಗಿ 5 ಲಕ್ಷ […]
ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ.!, ಸಂಪುಟ ಸರ್ಕಸ್ಸು ಹೇಗಿತ್ತು, ಡಿಕೆಶಿ ಲಕ್ಕು ಚೆನ್ನಾಗಿದೆ. ಬಿಜೆಪಿ ಭಿನ್ನರಿಗೆ ‘ಕಾಕ್ರೋಚ್’ ಅಡ್ಡಿ
✍️. ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟಕ್ಕೆ ಯಾರ್ಯಾರು ಸೇರಬೇಕು ಎಂಬ ವಿಷಯ ರಾಹುಲ್ ಗಾಂಧಿ ಸುಸ್ತಾಗುವಂತೆ ಮಾಡಿದೆಯಂತೆ. ಕಾರಣ? ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಇಪ್ಪತ್ತು ಸ್ಥಾನಗಳು ಖಾಲಿ ಇದ್ದರೆ, ಅದಕ್ಕೆ ಕನಿಷ್ಟ ಎಪ್ಪತ್ತು ಮಂದಿ ಲಗ್ಗೆ ಹಾಕಿದ್ದು. ಹೀಗಾಗಿ ಮೊನ್ನೆ ಸಂಜೆ, ಮಂತ್ರಿ ಮಂಡಲದ ಪಟ್ಟಿ ಒಂದು ರೂಪ ತಳೆಯುವ ಹೊತ್ತಿಗೆ ರಾಹುಲ್ ಗಾಂಧಿ ಸುಸ್ತಾಗಿದ್ದಷ್ಟೇ ಅಲ್ಲ, ಚಿಂತೆಗೂ ಒಳಗಾಗಿದ್ದರಂತೆ. ಅವರ ಈ ಚಿಂತೆಗೆ ಮುಂದೇನು?ಎಂಬ ಪ್ರಶ್ನೆಯೇ ಕಾರಣ. ಯಾಕೆಂದರೆ ಈ ಬಾರಿ ಮಂತ್ರಿಗಿರಿ ಸಿಗದವರು […]
ರಾಷ್ಟ್ರೀಯ
2019 ರಿಂದ 2026 ರ ನಡುವಿನ ಅವಧಿಯಲ್ಲಿ 36 ದೇಶಗಳಿಂದ 274 ಅಪರಾಧಿಗಳನ್ನು ಪತ್ತೆ ಹಚ್ಚಿ ಭಾರತಕ್ಕೆ ವಾಪಾಸ್
ವಿವಿಧ ಅಪರಾಧಗಳನ್ನು ಎಸಗಿ ದೇಶದಿಂದ ಪರಾರಿಯಾಗಿ ತಲೆಮರೆಸಿಕೊಂಡಿರುವ ಅಪರಾಧಿಗಳ ಪೈಕಿ 274 ಮಂದಿಯನ್ನು ಕಳೆದ ಐದು ವರ್ಷದ ಅವಧಿಯಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗಿದೆ. 2019 ರಿಂದ 2026 ರ ನಡುವಿನ ಅವಧಿಯಲ್ಲಿ 36 ದೇಶಗಳಿಂದ 274 ಅಪರಾಧಿಗಳನ್ನು ಭಾರತಕ್ಕೆ ತರಲಾಗಿದೆ ಎನ್ನುವ ಮಾಹಿತಿಯನ್ನು ಕೇಂದ್ರಸರ್ಕಾರ ನೀಡಿದೆ. ಪ್ರಸಕ್ತ ಕೇಂದ್ರ ಸರ್ಕಾರವು ಅಪರಾಧಿಗಳ ಹಸ್ತಾಂತರವನ್ನು ‘ರಾಷ್ಟ್ರೀಯ ಆದ್ಯತೆ’ಯನ್ನಾಗಿ ಮಾಡಿಕೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿದೆ. 2022ರಲ್ಲಿ 40, 2023ರಲ್ಲಿ 100, 2024ರಲ್ಲಿ […]
ಕಬನಿ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ಬೈರಾಕುಪ್ಪ ಸೇತುವೆಗೆ ಕರ್ನಾಟಕದಿಂದ ನಿರಾಕ್ಷೇಪಣಾ ಪತ್ರ (NOC) ಮಂಜೂರು: ಕೇರಳ ಸಚಿವ
ತಿರುವನಂತಪುರಂ: ಕೇರಳ-ಕರ್ನಾಟಕ ಗಡಿಯಲ್ಲಿರುವ ಕಬನಿ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ, ದೀರ್ಘಕಾಲದಿಂದ ಬಾಕಿ ಉಳಿದಿದ್ದ ಬೈರಾಕುಪ್ಪ ಸೇತುವೆಯ ನಿರ್ಮಾಣಕ್ಕೆ ಕರ್ನಾಟಕವು ನಿರಾಕ್ಷೇಪಣಾ ಪತ್ರವನ್ನು (NOC) ಮಂಜೂರು ಮಾಡಿದೆ ಎಂದು ಕೇರಳದ ಸಾರ್ವಜನಿಕ ನಿರ್ಮಾಣ ಕಾರ್ಯಗಳ ಸಚಿವ ಪಿ.ಎ. ಬಶೀರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆಸಿದ ಚರ್ಚೆಯ ನಂತರ ಈ ಅನುಮತಿ ದೊರೆತಿದೆ ಎಂದು ಸಚಿವರು ಹೇಳಿದ್ದಾರೆ ಎಂದು ಗುರುವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯೊಂದು ತಿಳಿಸಿದೆ. ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಕರ್ನಾಟಕ […]
ಅಂತಾರಾಷ್ಟ್ರೀಯ
ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ
ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
