ಕರಾವಳಿ

ಬಂಟ್ವಾಳ ರಾಜಕೀಯದಲ್ಲಿ ಬದಲಾವಣೆಯ ಕೂಗು: ಮಾಜಿ ಸಚಿವರ ವಿರುದ್ಧ ಸ್ವಜಾತಿಯಲ್ಲೇ ಅಸಮಾಧಾನ

ಬಂಟ್ವಾಳ ಕ್ಷೇತ್ರದ ರಾಜಕೀಯದಲ್ಲಿ ಬದಲಾವಣೆಯ ಮಾತುಗಳು ಜೋರಾಗುತ್ತಿವೆ. ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ಮಾಜಿ ಸಚಿವರನ್ನು ಈಗ ಅವರದೇ ಸಮುದಾಯದ ಕೆಲ ನಾಯಕರು ಹಾಗೂ ಕಾರ್ಯಕರ್ತರು ಒಪ್ಪಿಕೊಳ್ಳಲು ಇಷ್ಟಪಡುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇತರ ಸಮುದಾಯದ ಮತದಾರರನ್ನು ಮನವೊಲಿಸಿ ರಾಜಕೀಯವಾಗಿ ಮುನ್ನಡೆದಿದ್ದರೂ, ತಮ್ಮ ಸಮುದಾಯದ ನಾಯಕರಿಗೆ ಅವಕಾಶ ನೀಡಿಲ್ಲ ಎಂಬ ಅಸಮಾಧಾನ ಒಳಗೊಳಗೆ ಮೂಡಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಒತ್ತಾಯವೂ ಹೆಚ್ಚಾಗಿದೆ. ಬಿಲ್ಲವ […]

ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಾಧ್ಯವಾಗದಿದ್ದರೆ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ “ರಾಜೀನಾಮೆ ನೀಡಿ ಅಥವಾ ವರ್ಗಾವಣೆ ಕೋರಿ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಸಂಭಾಲ್‌ನಲ್ಲಿರುವ ಮಸೀದಿಯಲ್ಲಿ ನಮಾಜ್ ಮಾಡುವ ಜನರ ಸಂಖ್ಯೆಯನ್ನು ನಿರ್ಬಂಧಿಸುವ ಉತ್ತರ ಪ್ರದೇಶ ಆಡಳಿತದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾಧ್ಯವಾಗದಿದ್ದರೆ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ “ರಾಜೀನಾಮೆ ನೀಡಿ ಅಥವಾ ವರ್ಗಾವಣೆಯನ್ನು ಕೋರಬೇಕು” ಎಂದು ಕೇಳಿದೆ. ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ಪೀಠವು ಮುನಜೀರ್ ಖಾನ್ ಅವರ ಅರ್ಜಿಯನ್ನು ವಿಚಾರಣೆ ನಡೆಸುತ್ತಿತ್ತು, ಅವರು ಮಸೀದಿ ಇರುವ ಗಟಾ ಸಂಖ್ಯೆ 291 ರಂದು ರಂಜಾನ್ ಸಮಯದಲ್ಲಿ ಪ್ರಾರ್ಥನೆ […]

ರಾಜ್ಯ

ಹಿರಿಯ ಕಲಾವಿದ ಲಿಯಾಕತ್ ಆಲಿ ನಿಧನ; ಕ.ಸಾ.ಪ ವತಿಯಿಂದ ಶ್ರದ್ಧಾಂಜಲಿ ಸಭೆ.

ಮಡಿಕೇರಿಯ ಹಿಲ್ ರೋಡ್ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ (69) ಇಂದು ಬೆಳಗಿನ ಜಾವ 3 ಗಂಟೆಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಜಿಲ್ಲೆಯ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿ ಇಂದು (15.03.2026) ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ ಸಭೆ ನಡೆಯಿತು. ಕೊಡಗಿನ ಹಿರಿಯ ಕಲಾವಿದರಾದ ಇವರು ಉತ್ತಮ ಗಾಯಕರಾಗಿದ್ದರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ವಿಶೇಷ ಅಹ್ವಾನಿತ […]

ಪಕ್ಷದ ನಿಷ್ಠಾವಂತ ನಾಯಕರನ್ನು ರಾಜ್ಯಸಭೆಗೆ ಕಳುಹಿಸಲು ರಾಜ್ಯ ಬಿಜೆಪಿ ನಾಯಕರ ಚಿಂತನೆ.

ಮೋದಿ – ಅಮಿತ್ ಷಾ ಮಟ್ಟದಲ್ಲಿ ಗೌಡರ ಆಯ್ಕೆಯ ಬಗ್ಗೆ ಬೇರೆಯದೇ ಲೆಕ್ಕಾಚಾರ ಮಾಜಿ ಪ್ರಧಾನಿ ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಕುರಿತು ದೆಹಲಿಯ ಬಿಜೆಪಿ ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಆದರೆ, ಈ ಪ್ರಸ್ತಾವನೆಗೆ ರಾಜ್ಯ ಬಿಜೆಪಿ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಮೈತ್ರಿ ಪಕ್ಷದ ನಾಯಕರಿಗಿಂತ ಸ್ವಂತ ಪಕ್ಷದ ನಾಯಕರಿಗೇ ಈ ಸ್ಥಾನವನ್ನು ಬಿಟ್ಟುಕೊಡುವುದು ಸೂಕ್ತ ಎಂಬ […]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರೀ ಶಾಕ್ ನೀಡಲಿದೆ ಟಿಸಿಎಂ; ಬಿಗಿಯಾದ ಸ್ಪರ್ಧೆಯ ಭವಿಷ್ಯ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 294 ಸ್ಥಾನಗಳ ಹೋರಾಟದಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದೆ ಮತ್ತು ಬಿಜೆಪಿ ಹಿಂದಿದೆ ಎಂದು ಸಮೀಕ್ಷೆಯು ಭವಿಷ್ಯ ನುಡಿದಿದೆ. ಮ್ಯಾಟ್ರಿಜ್-ಐಎಎನ್‌ಎಸ್ ನಡೆಸಿದ ಅಭಿಪ್ರಾಯ ಸಮೀಕ್ಷೆಯು ಪಶ್ಚಿಮ ಬಂಗಾಳದಲ್ಲಿ ಬಿಗಿಯಾದ ಸ್ಪರ್ಧೆಯ ಭವಿಷ್ಯ ನುಡಿದಿದೆ. 294 ಸ್ಥಾನಗಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕಿಂತ ಹೆಚ್ಚಿನ ಮುನ್ನಡೆಯನ್ನು ಕಾಯ್ದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಸಮೀಕ್ಷೆಯ ಪ್ರಕಾರ, ಆಡಳಿತ ಪಕ್ಷವು ಮತ ​​ಹಂಚಿಕೆ ಮತ್ತು ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆ ಸಾಧಿಸುವ ನಿರೀಕ್ಷೆಯಿದೆ, […]

ಇತಿಹಾಸದ ಅತ್ಯಂತ ಮಹತ್ವದ ತೀರ್ಪು; ಮನುಷ್ಯನಿಗೆ ಬದುಕುವ ಹಕ್ಕು ಇರುವಂತೆ, ಘನತೆಯಿಂದ ಸಾಯುವುದು ಮೂಲಭೂತ ಹಕ್ಕು”: ಸುಪ್ರೀಂ ಕೋರ್ಟ್

ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಅತ್ಯಂತ ಮಹತ್ವದ ತೀರ್ಪು. ಕಳೆದ ಹನ್ನೆರಡು ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಉತ್ತರ ಪ್ರದೇಶದ 32 ವರ್ಷದ ಯುವಕನಿಗೆ ‘ದಯಾಮರಣ’ ನೀಡಲು ಸುಪ್ರೀಂ ಕೋರ್ಟ್ ಬುಧವಾರದಂದು ಐತಿಹಾಸಿಕ ಆದೇಶ ಹೊರಡಿಸಿದೆ. ಇದು ಭಾರತದಲ್ಲಿ ಅಧಿಕೃತವಾಗಿ ದಯಾಮರಣಕ್ಕೆ ಅನುಮತಿ ನೀಡಿದ ಮೊದಲ ಪ್ರಕರಣವಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಈ ಯುವಕ, 12 ವರ್ಷಗಳ ಹಿಂದೆ ಕಟ್ಟಡವೊಂದರಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು. ಅಂದಿನಿಂದ ಆತ ಸಂಪೂರ್ಣವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕೇವಲ ಯಂತ್ರೋಪಕರಣಗಳ ಸಹಾಯದಿಂದ ಜೀವ ಹಿಡಿದಿದ್ದನು. […]

ಅಂತಾರಾಷ್ಟ್ರೀಯ

ದುಬೈ: ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ನೆರವು, ತುರ್ತು ಸಹಕಾರಕ್ಕಾಗಿ ಸರ್ಕಾರಕ್ಕೆ ಮನವಿ.

ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವು, ಯುಎಇಯಲ್ಲಿ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಲು ಹಾಗೂ ಇಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಿಸಲು ಮತ್ತು ಕರ್ನಾಟಕ ಸರ್ಕಾರದೊಂದಿಗೆ ಹಂಚಿಕೊಳ್ಳಲು ಝೂಮ್ ಸಭೆಯನ್ನು ಆಯೋಜಿಸಿತು. ಯುಎಇಯಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಸುರಕ್ಷಿತವಾಗಿದ್ದು, ಇಲ್ಲಿನ ಸರ್ಕಾರ ಎಲ್ಲ ಅನಿವಾಸಿಗಳ ಸುರಕ್ಷತೆಯನ್ನು ಸಮರ್ಪಕವಾಗಿ ಕಾಪಾಡುತ್ತಿದೆ, ಯಾವುದೇ ಆತಂಕಕ್ಕೆ ಒಳಗಾಗದೆ, ಅನಧಿಕೃತ ಅಥವಾ ಅಪಪ್ರಚಾರದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಳ್ಳಬಾರದು […]

ಪವಿತ್ರ ರಂಜಾನ್ ತಿಂಗಳಲ್ಲಿ ಕರುಣೆ ತೋರಿದ ಆಡಳಿತಗಾರರು: ಶಾರ್ಜಾ, ಅಜ್ಮಾನ್ ಜೈಲಿನ 872 ಕೈದಿಗಳಿಗೆ ಬಿಡುಗಡೆ ಭಾಗ್ಯ

ರಂಝಾನ್ ತಿಂಗಳು ಅನ್ನುವುದು ಕ್ಷಮೆಯ ತಿಂಗಳು. ದೇವನ ಸಂಪ್ರೀತಿ ಪಡೆಯಲು ಹಪಹಪಿಸುವ ಪಾವನ ಮಾಸವಾಗಿದೆ ರಂಝಾನ್ ತಿಂಗಳು. ಇಂತಹ ಪವಿತ್ರ ಮಾಸದಲ್ಲಿ ಶಾರ್ಜಾ ಮತ್ತು ಅಜ್ಮಾನ್ ಜೈಲಿನಲ್ಲಿರುವ ಖೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಉತ್ತಮ ಸನ್ನಡತೆ, ಸ್ವಭಾವ ಹೊಂದಿರುವ ವಿವಿಧ ಅಪರಾಧಗಳಿಗೆ ಜೈಲು ಶಿಕ್ಷೆ ಅನುಭವಿಸುತ್ತಿರುವ 872 ಖೈದಿಗಳಿಗೆ ಕ್ಷಮಾದಾನ ದೊರೆತಿದೆ. ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಶಾರ್ಜಾ ಆಡಳಿತಗಾರ ಶೇಖ್ ಡಾ. ಸುಲ್ತಾನ್ ಬಿನ್ ಮೊಹಮ್ಮದ್ ಅಲ್ ಖಾಸಿಮಿ ಅವರು ಶಾರ್ಜಾದಲ್ಲಿ 738 ಕೈದಿಗಳನ್ನು ಬಿಡುಗಡೆ […]

error: Content is protected !!