ಕರಾವಳಿ

ಬೆಳ್ಳಾರೆ: ವಿದ್ಯಾರ್ಥಿ ನಿಲಯಕ್ಕೆ ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರ ಬಟ್ಟೆ ಕಳವು ಪ್ರಕರಣ: ಪುತ್ತೂರಿನ ರಾಮಚಂದ್ರ ಅರೆಸ್ಟ್

ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ ಬಟ್ಟೆಗಳು ಕಳವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಕೆ. ರಾಮಚಂದ್ರ ಎಂಬಾತನನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 2 ರಂದು ಬೆಳಿಗ್ಗೆ ವಿದ್ಯಾರ್ಥಿನಿಯರು ಒಣಗಲು ಹಾಕಿದ್ದ ಬಟ್ಟೆಗಳು ಕಾಣೆಯಾಗಿರುವ ಸಂಗತಿ ಗಮನಕ್ಕೆ ಬಂದಿದ್ದು ಈ ವಿಚಾರವನ್ನು ವಿದ್ಯಾರ್ಥಿನಿಲಯದ ಮೇಲ್ವಿಚಾರಕರಿಗೆ ತಿಳಿಸಿದ್ದಾರೆ. ಸಿ ಸಿ ಕ್ಯಾಮರಾ ಪರಿಶೀಲಿಸಿದಾಗ ದಿನಾಂಕ: 02.09.2026 ರಂದು ಬೆಳಗ್ಗಿನ ಜಾವ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿಗಳು ಒಣಗಿಸಲು ಹಾಕಿದ ಬಟ್ಟೆಗಳಲ್ಲಿ ಕೆಲವು ಬಟ್ಟೆಗಳನ್ನು ಕಳವು […]

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಿರುದ್ದದ ಕೇಸ್ ವಜಾಗೊಳಿಸಿದ ಸುಪ್ರೀಂಕೋರ್ಟ್

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಯಮ ಮೀರಿ ಅಧಿಕ ಬಡ್ಡಿ ವಸೂಲಿ ಮಾಡುತ್ತಿದೆ ಹಾಗೂ ಕಾನೂನುಬಾಹಿರವಾಗಿ ಮನಿ ಲೆಂಡಿಂಗ್ ದಂಧೆ ನಡೆಸುತ್ತಿದೆ ಎಂದು ಆರೋಪಿಸಿ ನಾಗರಿಕ ಸೇವಾ ಟ್ರಸ್ಟ್‌ನ ರಂಜನ್ ರಾವ್ ಯೆರ್ದೂರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನಾಗರಿಕ ಸೇವಾ ಟ್ರಸ್ಟ್‌ನ ರಂಜನ್ ರಾವ್ ಯೆರ್ದೂರ್ ಅವರು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯು ಕಾನೂನುಬಾಹಿರವಾಗಿ ಬಡ್ಡಿ ದಂಧೆ ನಡೆಸುತ್ತಿದೆ, ಕರ್ನಾಟಕ ಮನಿ ಲೆಂಡರ್ಸ್ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಮತ್ತು ಸಾರ್ವಜನಿಕರಿಗೆ ವಂಚನೆ ಎಸಗುತ್ತಿದೆ ಎಂದು ಆರೋಪಿಸಿ […]

ರಾಜ್ಯ

ಬೆಳ್ತಂಗಡಿ: ಲವ್, ಸೆಕ್ಸ್ ದೋಖಾ; ಮಹಿಳೆಗೆ ಮಾರಣಾಂತಿಕ ಹಲ್ಲೆ. ಯುವ ವಕೀಲನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಂಗಳೂರಿನಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಬೆಳ್ತಂಗಡಿ ಮೂಲದ ಯುವ ವಕೀಲರೊಬ್ಬರು ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಮದುವೆಯಾಗುವುದಿಲ್ಲವೆಂದು ವಂಚಿಸಿದ್ದಲ್ಲದೆ ಮಹಿಳೆ ಮೇಲೆ ಮಾರಣಾಂತಿಕವಾಗಿ‌ ಹಲ್ಲೆ ನಡೆಸಿರುವ ಬಗ್ಗೆ ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬೆಂಗಳೂರು ನಗರದ ಬಾಗಳಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲ್ಕೊಡಿ ನಿವಾಸಿ, ವಕೀಲ ವೃತ್ತಿ ನಡೆಸುತ್ತಿರುವ ಜಿತಿನ್ ಜಿಜೋ ಎಂಬಾತ ಮೇಲೆ ಪ್ರಕರಣ ದಾಖಲಾಗಿದೆ. ಸಂತ್ರಸ್ತ […]

ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ. ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’; ಇವರದ್ದು ಅರ್ಥಪೂರ್ಣ ಅನುಭವ ಕಥನ.

ಬೆಂಗಳೂರು: ಪೊಲೀಸ್ ಸಮವಸ್ತ್ರ ಕಂಡಾಗ ಸಾಮಾನ್ಯವಾಗಿ ನೆನಪಾಗುವುದು ಶಿಸ್ತು, ಕಾನೂನು ಮತ್ತು ಕಠಿಣ ಕ್ರಮ. ಆದರೆ ಅದೇ ಸಮವಸ್ತ್ರದೊಳಗೆ ಮಿಡಿಯುವ ಮಾನವೀಯ ಹೃದಯವೊಂದಿದೆ. ಅಪರಾಧಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ನಿಷ್ಠುರತೆ ತೋರುವ ಪೊಲೀಸ್ ಅಧಿಕಾರಿ, ಮತ್ತೊಂದೆಡೆ ಯುವಜನರ ಮುಂದೆ ನಿಂತು ಬದುಕಿನ ಪಾಠ ಹೇಳುವ ಆತ್ಮೀಯ ಶಿಕ್ಷಕಿಯಾಗಬಹುದು ಎಂಬುದಕ್ಕೆ ರೀನಾ ಸುವರ್ಣ ಅವರ ಸೇವಾ ಪಯಣ ಒಂದು ಉದಾಹರಣೆ. ಹಿರಿಯ KSPS ಅಧಿಕಾರಿ ರೀನಾ ಸುವರ್ಣ ಅವರು ಪೊಲೀಸ್ ಇಲಾಖೆಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಕಳ್ಳರ ಬೆನ್ನತ್ತುವುದರಿಂದ ಹಿಡಿದು […]

ರಾಷ್ಟ್ರೀಯ

ಉದ್ಯೋಗ ಬಿಡಿ, ಇಲ್ಲದಿದ್ದರೆ ಸಾಯಲು ರೆಡಿಯಾಗಿ.! ಕಾಶ್ಮೀರಿ ಪಂಡಿತರಿಗೆ ಉಗ್ರರ ಬೆದರಿಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ರಕ್ತಪಾತದ ಭೀತಿ ಶುರುವಾಗಿದೆ. ಕಣಿವೆ ರಾಜ್ಯದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ವಿರುದ್ಧ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾದ ಅಂಗ ಸಂಸ್ಥೆಯಾದ ‘ಯುನೈಟೆಡ್ ಲಿಬರೇಷನ್ ಕೌನ್ಸಿಲ್’ ಮೂಲಕ ಜೀವ ಬೆದರಿಕೆ ನೀಡಿದೆ. ಉದ್ಯೋಗಕ್ಕೆ ತಕ್ಷಣ ರಾಜೀನಾಮೆ ನೀಡಿ, ಇಲ್ಲದಿದ್ದರೆ ಸಾಯಲು ತಯಾರಾಗಿ ಎಂದು ಉಗ್ರರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಕಳೆದೊಂದು ತಿಂಗಳಲ್ಲಿ 5-6 ಬಾರಿ ಇಂಥ ಬೆದರಿಕೆ ಸಂದೇಶಗಳು ಬಂದಿದ್ದು, ಸುಮಾರು 7000 ಕಾಶ್ಮೀರಿ ಪಂಡಿತರು ಆತಂಕದಲ್ಲಿದ್ದಾರೆ. ಈ ನಡುವೆ ಉದ್ಯೋಗಿಗಳ […]

2029 ಕ್ಕೆ ದೇಶದಲ್ಲಿ ಜೆನ್ ಝೀ ಗಳದ್ದೇ ಕಾರುಬಾರು.. ಜೆನ್ ಝೀ ಗಳ ಹೃದಯ ಗೆದ್ದವರಿಗೆ ಗದ್ದುಗೆ ಫಿಕ್ಸ್!

ಹಿಂದೂ -ಮುಸ್ಲಿಂ ಖೇಲ್ ಖತಂ.. ಜೆನ್ ಝೀ -ಮಿಲೇನಿಯಲ್ಸ್ ತೀರ್ಪೆ ಫೈನಲ್ 2029 ಕ್ಕೆ ಚುನಾವಣೆಯ ಇಶ್ಯೂ ಯಾವುದೆಂದರೆ ಒಳ್ಳೆಯ ಗುಣಮಟ್ಟದ ಶಿಕ್ಷಣ, ಉಜ್ವಲ ಭವಿಷ್ಯಕ್ಕಾಗಿ ಯುವಜನತೆಗೆ ಉದ್ಯೋಗ, ಪರಿಸರದ ಬಗ್ಗೆ ಕಾಳಜಿ, ಆರೋಗ್ಯಕರ ಜೀವನ, ಬೆಲೆ ಏರಿಕೆಗೆ ಕಡಿವಾಣ, ಸ್ವಾಭಿಮಾನದ ಬದುಕು ಇದೇ ಮುಖ್ಯ ಅಸ್ತ್ರ ವಾಗುವ ಸಾಧ್ಯತೆಗಳಿವೆ. ದೇಶದೆಲ್ಲೆಡೆ ಜೆನ್ ಝೀ ಗಳ ಸಂಖ್ಯೆ ಗಣನೀಯ ಮಟ್ಟದಲ್ಲಿರುವುದರಿಂದ ಈ ತಲೆಮಾರನ್ನು ರಾಜಕಾರಣಿಗಳು ಭಾವನಾತ್ಮಕ ಅಂಶಗಳನ್ನು ಮುಂದಿಟ್ಟು ಮಂಕು ಮರುಳು ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಒಟ್ಟು […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

error: Content is protected !!