ಕರಾವಳಿ
ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಸರೆ ಮುಸ್ಲಿಂ ಸಮುದಾಯ; ಮುಸ್ಲಿಂ ಸಮುದಾಯಕ್ಕೆ ಜಿಲ್ಲಾಧ್ಯಕ್ಷ ಹುದ್ದೆ ಮರೀಚಿಕೆಯೇ..?
ರಾಜ್ಯದಲ್ಲಿ ಮುಸ್ಲಿಂ ಉಪಮುಖ್ಯಮಂತ್ರಿ ಬೇಕು ಅನ್ನುವ ಕೂಗು ಹಾಗೊಮ್ಮೆ ಈಗೊಮ್ಮೆ ಎದ್ದೇಳುತ್ತಿದೆ. ಆದರೆ ಮುಸ್ಲಿಂ ಮುಖ್ಯಮಂತ್ರಿ ಅನ್ನುವುದು ಕನಸಾಗಿಯೇ ಉಳಿಯಲಿದೆ. ಇನ್ನು ಜಿಲ್ಲೆಯ ಅಧ್ಯಕ್ಷ ಹುದ್ದೆಗೆ ಮುಸ್ಲಿಂ ಸಮುದಾಯ ಏರಲು ಸಾಧ್ಯವಾಗದೇ ಇರುವುದು ದೊಡ್ಡ ದುರಂತ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಸರೆ ಮುಸ್ಲಿಂ ಸಮುದಾಯ. ವಿಧಾನಸಭಾ ಚುನಾವಣೆ ಇರಲಿ, ಲೋಕಸಭಾ ಚುನಾವಣೆ ಇರಲಿ ಮುಸ್ಲಿಂ ಸಮುದಾಯದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹೋಲ್ಸೇಲ್ ಆಗಿ ಬೀಳುತ್ತಿದೆ. ಮುಸ್ಲಿಂ ಸಮುದಾಯ ಕೈಕೊಟ್ಟರೆ ಇಲ್ಲಿ ಕಾಂಗ್ರೆಸ್ ಪಕ್ಷ […]
ದಕ್ಷಿಣ ಕನ್ನಡ, ಉಡುಪಿ ಕಾಂಗ್ರೆಸ್ ಗದ್ದುಗೆ ಗುದ್ದಾಟ.!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರೀಶ್ ಕುಮಾರ್ ಬದಲಾವಣೆ ಪಕ್ಕಾ ಆಗಿದ್ದು, ಕಾರ್ಯಕರ್ತರು ಕೂಡಾ ಇದನ್ನೇ ಬಯಸಿದ್ದರು . ಹರೀಶ್ ಕುಮಾರ್ ನಂತರ ಯಾರು ಅನ್ನುವ ಪ್ರಶ್ನೆ ಇದೀಗ ಎದ್ದಿದೆ. ಬರೋಬ್ಬರಿ 50 ಕ್ಕಿಂತಲೂ ಅಧಿಕ ಮಂದಿ ಆಕಾಂಕ್ಷಿಗಳು ಅಧ್ಯಕ್ಷ ಹುದ್ದೆಯ ರೇಸ್ನಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ಗತಕಾಲದ ವೈಭವ ಮರಳಿ ಪಡೆಯಬೇಕಾದರೆ ಯಂಗ್ ಅಂಡ್ ಡೈನಾಮಿಕ್ ನಾಯಕರು ಜಿಲ್ಲಾಧ್ಯಕ್ಷರಾಗಿ ಬರಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದಿಂದಲೂ ಗಟ್ಟಿಯಾಗಿದ್ದು, ಬಿಜೆಪಿ ಜೊತೆ ಅಡ್ಜಸ್ಟ್ ಮೆಂಟ್ […]
ರಾಜ್ಯ
ಪೋಷಕರ ಸೇವೆ ಮಗ-ಮಗಳ ಹೊಣೆ, ಸೊಸೆಯದ್ದಲ್ಲ; ತವರು ಮನೆಗೆ ಹೋಗಲು ಅನುಮತಿ ಬೇಕಿಲ್ಲ, ಮದುವೆ ಅಂದರೆ ಗುಲಾಮಗಿರಿ ಅಲ್ಲ: ಹೈಕೋರ್ಟ್
ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಆಕೆಯ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ ಮನೆಗೆಲಸ ಮಾಡಲು ಮತ್ತು ಪತಿಯ ಪೋಷಕರನ್ನು ನೋಡಿಕೊಳ್ಳಲು ಇರುವವಳು ಎಂದು ಭಾವಿಸುವುದು ತಪ್ಪು. ಪತಿ ಸೇರಿದಂತೆ ಮನೆಯ ಯಾರೂ ಕೂಡ ಮಹಿಳೆಗೆ ಇಂತಹ ಕೆಲಸಗಳನ್ನು ಮಾಡುವಂತೆ ಬಲವಂತ ಮಾಡುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಚಿಲ್ಲಾಕೂರ್ ಸುಮಲತಾ ಅವರ ಪೀಠವು ಒಂದು ಮಹತ್ವದ ಅಂಶವನ್ನು ಉಲ್ಲೇಖಿಸಿದೆ. ವೃದ್ಧ ಪೋಷಕರನ್ನು ನೋಡಿಕೊಳ್ಳುವುದು […]
ನಕಲಿ ಔಷಧ ಮಾರಾಟ ಪ್ರಕರಣಕ್ಕೆ ಮಹತ್ವದ ತಿರುವು; ವಿದೇಶದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು
ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ ನಕಲಿ ಹಾಗೂ ಕಳಪೆ ಔಷಧ ಮಾರಾಟ ಪ್ರಕರಣಕ್ಕೆ ಈಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಬೆಂಗಳೂರಿನಲ್ಲಿ ನಡೆದ ಔಷಧ ದಂಧೆಯ ಹಿಂದೆ ವಿದೇಶಿ ಸಂಪರ್ಕವಿರುವುದು ತನಿಖೆಯಲ್ಲಿ ಬಯಲಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ಎನ್ನಲಾದ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಬಳಸುವ ಔಷಧಗಳು ಪಶ್ಚಿಮ ಏಷ್ಯಾದ ಕೆಲವು ದೇಶಗಳಲ್ಲಿ […]
ರಾಷ್ಟ್ರೀಯ
ಡೇತ್ ನೋಟಲ್ಲಿ ದೋಷಿತನಾದ ಮಾತ್ರಕ್ಕೆ ಪ್ರಚೋದನೆಯ ಅಪರಾಧವಾಗಲ್ಲ
FIR ದಾಖಲಿಸಿದ ಮಾತ್ರಕ್ಕೆ ಆತ್ಮಹತ್ಯೆಗೆ ಕುಮ್ಮಕ್ಕು ಎನ್ನಲಾಗದು: ಸುಪ್ರೀಂ ಕೋರ್ಟ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದ ಮಾತ್ರಕ್ಕೆ ಆತನನ್ನು ಕ್ರಿಮಿನಲ್ ಅಪರಾಧಕ್ಕೆ ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನಿನಡಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ದೃಢ ಹಕ್ಕನ್ನು ಹೊಂದಿದ್ದಾರೆ ಎಂದು ಅದು ಒತ್ತಿ ಹೇಳಿದೆ. ಯಾರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೋ ಅವರು ನಂತರ ಆತ್ಮಹತ್ಯೆ ಮಾಡಿಕೊಂಡರು ಎಂಬ ಕಾರಣಕ್ಕೆ […]
ಪೋಷಕರನ್ನು ನೋಡಿಕೊಳ್ಳದಿದ್ದರೆ ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರು ಖಾಲಿ ಮಾಡಬೇಕು
ಹಿರಿಯ ನಾಗರಿಕರ ರಕ್ಷಣೆ, ಭದ್ರತೆ ಮತ್ತು ಗೌರವಯುತ ಜೀವನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿದ್ದಲ್ಲಿ, ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರನ್ನು ತೆರವುಗೊಳಿಸಲು ‘ತಂದೆ-ತಾಯಿ ಮತ್ತು ಹಿರಿಯ ನಾಗರಿಕರ ಪೋಷಣೆ ಹಾಗೂ ಕಲ್ಯಾಣ ಕಾಯ್ದೆ- 2007’ ರಡಿಯಲ್ಲಿ ರಚಿಸಲಾದ ನ್ಯಾಯಾಧಿಕರಣಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು, ಪುತ್ರ ಮತ್ತು ಸೊಸೆಯನ್ನು ಮನೆಯಿಂದ ತೆರವುಗೊಳಿಸುವಂತೆ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು […]
ಅಂತಾರಾಷ್ಟ್ರೀಯ
ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ
ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
