ಕರಾವಳಿ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದ್ವೇಷ ಪೂರಿತ ಅವಹೇಳನ ಪ್ರಕರಣ; ಮಹಿಳೆ ವಿರುದ್ಧ ಎಫ್ ಐ ಆರ್

ಮಂಗಳೂರಿನ ಸ್ಟೇಟ್‌ಬ್ಯಾಂಕ್ ಸಮೀಪ ನಡೆದಿದ್ದ ಬೀದಿ ಬದಿ ವ್ಯಾಪಾರಿಯ ಮೇಲಿನ ಅವಹೇಳನಕಾರಿ ವರ್ತನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಸಂಬಂಧ ಇದೀಗ ಮಹಿಳೆಯೊಬ್ಬರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮ, ಭಾಷೆ ಹಾಗೂ ಇತರ ಗುರುತುಗಳ ಆಧಾರದ ಮೇಲೆ ದ್ವೇಷ ಮತ್ತು ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಮಾತುಕತೆ ನಡೆಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಗರದ ಸ್ಟೇಟ್‌ಬ್ಯಾಂಕ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಬೀದಿ ಬದಿ […]

ಅಪಘಾತ ತಡೆಗಟ್ಟಲು ಮಂಗಳೂರು ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಬಿಕರ್ನಕಟ್ಟೆ-ಸಾಣೂರು 169 ರಾಷ್ಟ್ರೀಯ ಹೆದ್ದಾರಿಗೆ ಹೆಚ್ಚುವರಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ. ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು ವಿರುದ್ದ ದಿಕ್ಕಿನಲ್ಲಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪುವ ಹಾಗೂ ಗಂಭೀರವಾಗಿ ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದಾಗಿದೆ. ಇದೇ […]

ರಾಜ್ಯ

ರಾಜ್ಯದಲ್ಲಿ ಡಿಕೆಶಿ ಪರ್ವ; ಜಿಲ್ಲೆಯಲ್ಲಿ ಇನಾಯತ್ ಆಲಿ ಪರ್ವ; ನಂಬಿಕಸ್ಥ ಬಂಟನಿಗೆ ‘ಪವರ್’ ನಿರೀಕ್ಷೆ.!

ಕೊನೆಗೂ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಪಕ್ಷ ನಿಷ್ಠೆ ಡಿಕೆ ಶಿವಕುಮಾರ್ ಅವರನ್ನು ಕೈ ಹಿಡಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರಲು ದಿನ ಮುಹೂರ್ತ ಆಗಿದೆ. ರಾಜಕಾರಣದಲ್ಲಿ ಕನಕಪುರದ ಬಂಡೆಯಾಗಿ ಕಾಂಗ್ರೆಸ್ ಪಕ್ಷಕ್ಕೆ ಚೈತನ್ಯ ತುಂಬಿ ಸೋಲುವ ಹಾದಿಯಲ್ಲಿದ್ದ ಪಕ್ಷವನ್ನು ಫೀನಿಕ್ಸ್ ನಂತೆ ಎದ್ದೇಳುವಂತೆ ಮಾಡಿದ ಸಮರ್ಥ ಸೇನಾನಿ ಆಗಿದ್ದಾರೆ ಡಿಕೆ ಶಿವಕುಮಾರ್. ಡಿಕೆಶಿ ಗೆ ಜಿಲ್ಲೆಯಲ್ಲಿ ಹಲವಾರು ಆಪ್ತರು ಇರಬಹುದು. ಆದರೆ ಅದರಲ್ಲಿ ಡಿಕೆಶಿ ಪಾಳೆಯದಲ್ಲಿ ನಂಬಿಕಸ್ಥ ಬಂಟನಾಗಿ ಗುರುತಿಸಿಕೊಂಡವರು ಇನಾಯತ್ ಆಲಿ. ತನ್ನ […]

‘ಕರ್ನಾಟಕ ಅಸೋಷಿಯೇಷನ್ ಆಫ್ ಸ್ಮಾಲ್ ಅಂಡ್ ಮೀಡಿಯಂ ನ್ಯೂಸ್ ಪೇಪರ್ಸ್’ (KASMN) ಅಸ್ತಿತ್ವಕ್ಕೆ

ರಾಜ್ಯಾಧ್ಯಕ್ಷರಾಗಿ ಷಡಾಕ್ಷರಪ್ಪ ಜಿ.ಆರ್., ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಹೆಬ್ಬಾರ್ ಆಯ್ಕೆ ಬೆಂಗಳೂರು: ರಾಜ್ಯದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರು ಮತ್ತು ಪ್ರಕಾಶಕರನ್ನು ಒಳಗೊಂಡ ‘ಕರ್ನಾಟಕ ಅಸೋಷಿಯೇಷನ್ ಆಫ್ ಸ್ಮಾಲ್ ಅಂಡ್ ಮೀಡಿಯಂ ನ್ಯೂಸ್ ಪೇಪರ್ಸ್’ (KASMN) (ಕರ್ನಾಟಕ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಘ) ಅಸ್ತಿತ್ವಕ್ಕೆ ಬಂದಿದ್ದು, ಸಂಘದ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಸುದ್ದಿಸಾರ ದಿನಪತ್ರಿಕೆಯ ಪ್ರಕಾಶಕ ಷಡಾಕ್ಷರಪ್ಪ ಜಿ.ಆರ್. ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರು ಜಯನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಹೊನ್ನಾವರದ (ಉತ್ತರ ಕನ್ನಡ ಜಿಲ್ಲೆ) […]

ರಾಷ್ಟ್ರೀಯ

ರೆಡಿಯಾಗುತ್ತಿದೆ ಅಮಿತ ಯುದ್ದ ಸೂತ್ತ; ರಾಜ್ಯ ಬಿಜೆಪಿ ಅಣಿಯಾಗಬೇಕು, ಅಮಿತ್ ಶಾ ಸುಪಾರಿ

ಚನ್ನಿ-ವೀಡಿಗೆ ಡಿಕೆಶಿ ಫೆವಿಕಾಲ್.?, ಒಗ್ಗಟ್ಟಿನ‌ ಮಹತ್ವ ವಿವರಿಸಿದ ಡಿಕೆಶಿ ✍️. ಆರ್.ಟಿ.ವಿಠ್ಟಲಮೂರ್ತಿ ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕೇರಳಕ್ಕೆ ಹೋಗಿದ್ದರು. ಹೀಗೆ‌ ಹೋದವರು ವಿ.ಡಿ.ಸತೀಶನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಾದ ನಂತರ ಸಮಾರಂಭಕ್ಕೆ ದಿಲ್ಲಿಯಿಂದ ಬಂದಿದ್ದ ಹಿರಿಯ ನಾಯಕರೊಬ್ಬರ ಜತೆ ಅವರು ಒನ್ ಟು ಒನ್ ಮಾತನಾಡಿದ್ದಾರೆ.ಹೀಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಬಗ್ಗೆ ಪ್ರಸ್ತಾಪಿಸಿ: ‘ಸಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ […]

ರಾಜ್ಯಸಭೆಗೆ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಲು ವರಿಷ್ಠರಿಗೆ ರಾಜ್ಯ ನಾಯಕರ ಶಿಫಾರಸು

ವಿಧಾನ ಪರಿಷತ್ತಿಗೆ ಬಿಜೆಪಿಗೆ 2 ಸ್ಥಾನ, ಆಕಾಂಕ್ಷಿಗಳ ದಂಡು.! ರಾಜ್ಯಸಭೆಯ ಸ್ಥಾನಗಳಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಬೇಕು ಎಂದು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್‌ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಮ್ಮುಖದಲ್ಲಿ ಪ್ರಮುಖರ ಸಭೆ ಗುರುವಾರ ನಡೆಯಿತು. ಸದಾನಂದ ಗೌಡ ಅವರು ಬಿಜೆಪಿ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!