ಕರಾವಳಿ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.
ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ. ಫರಾಜ್ @ ಮೊಹಮ್ಮದ್ ಫರಾಜ್, ಮದನಿನಗರ ದೇರಳಕಟ್ಟೆ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡು ನಂತರ ವಿಚಾರಣೆಗೆ […]
ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟಿನ ಸಹಯೋಗದಲ್ಲಿ, ನೀಡಲಿರುವ ಪುಸ್ತಕ ಪ್ರಶಸ್ತಿಗೆ ನಾಟಕ ವಿಮರ್ಶಾಕೃತಿಗಳಿಗೆ ಆಹ್ವಾನ
ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ. ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ಅಂಬಾತನಯ ಮುದ್ರಾಡಿಯವರ ಹೆಸರಿನ ಪುಸ್ತಕ ಪ್ರಶಸ್ತಿಯನ್ನು ಕಳೆದ ಎರಡು ವರ್ಷಗಳಿಂದ ನೀಡುತ್ತಾ ಬಂದಿದೆ. ‘ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಯೋಗದ ಉಡುಪಿ ರಂಗಭೂಮಿ ಪುರಸ್ಕಾರ’ ಎಂದು ಕರೆಯಲ್ಪಡುವ ಈ ಪುಸ್ತಕ ಪ್ರಶಸ್ತಿಯು ಪ್ರತಿವರ್ಷ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನಗೊಳ್ಳಲಿದ್ದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ಹದಿನೈದು ಸಾವಿರ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿರುತ್ತದೆ […]
ರಾಜ್ಯ
ಹಿರಿಯ ಕಲಾವಿದ ಲಿಯಾಕತ್ ಆಲಿ ನಿಧನ; ಕ.ಸಾ.ಪ ವತಿಯಿಂದ ಶ್ರದ್ಧಾಂಜಲಿ ಸಭೆ.
ಮಡಿಕೇರಿಯ ಹಿಲ್ ರೋಡ್ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ (69) ಇಂದು ಬೆಳಗಿನ ಜಾವ 3 ಗಂಟೆಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಜಿಲ್ಲೆಯ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿ ಇಂದು (15.03.2026) ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ ಸಭೆ ನಡೆಯಿತು. ಕೊಡಗಿನ ಹಿರಿಯ ಕಲಾವಿದರಾದ ಇವರು ಉತ್ತಮ ಗಾಯಕರಾಗಿದ್ದರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ವಿಶೇಷ ಅಹ್ವಾನಿತ […]
ಪಕ್ಷದ ನಿಷ್ಠಾವಂತ ನಾಯಕರನ್ನು ರಾಜ್ಯಸಭೆಗೆ ಕಳುಹಿಸಲು ರಾಜ್ಯ ಬಿಜೆಪಿ ನಾಯಕರ ಚಿಂತನೆ.
ಮೋದಿ – ಅಮಿತ್ ಷಾ ಮಟ್ಟದಲ್ಲಿ ಗೌಡರ ಆಯ್ಕೆಯ ಬಗ್ಗೆ ಬೇರೆಯದೇ ಲೆಕ್ಕಾಚಾರ ಮಾಜಿ ಪ್ರಧಾನಿ ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಕುರಿತು ದೆಹಲಿಯ ಬಿಜೆಪಿ ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಆದರೆ, ಈ ಪ್ರಸ್ತಾವನೆಗೆ ರಾಜ್ಯ ಬಿಜೆಪಿ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಮೈತ್ರಿ ಪಕ್ಷದ ನಾಯಕರಿಗಿಂತ ಸ್ವಂತ ಪಕ್ಷದ ನಾಯಕರಿಗೇ ಈ ಸ್ಥಾನವನ್ನು ಬಿಟ್ಟುಕೊಡುವುದು ಸೂಕ್ತ ಎಂಬ […]
ರಾಷ್ಟ್ರೀಯ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರೀ ಶಾಕ್ ನೀಡಲಿದೆ ಟಿಸಿಎಂ; ಬಿಗಿಯಾದ ಸ್ಪರ್ಧೆಯ ಭವಿಷ್ಯ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 294 ಸ್ಥಾನಗಳ ಹೋರಾಟದಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದೆ ಮತ್ತು ಬಿಜೆಪಿ ಹಿಂದಿದೆ ಎಂದು ಸಮೀಕ್ಷೆಯು ಭವಿಷ್ಯ ನುಡಿದಿದೆ. ಮ್ಯಾಟ್ರಿಜ್-ಐಎಎನ್ಎಸ್ ನಡೆಸಿದ ಅಭಿಪ್ರಾಯ ಸಮೀಕ್ಷೆಯು ಪಶ್ಚಿಮ ಬಂಗಾಳದಲ್ಲಿ ಬಿಗಿಯಾದ ಸ್ಪರ್ಧೆಯ ಭವಿಷ್ಯ ನುಡಿದಿದೆ. 294 ಸ್ಥಾನಗಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕಿಂತ ಹೆಚ್ಚಿನ ಮುನ್ನಡೆಯನ್ನು ಕಾಯ್ದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಸಮೀಕ್ಷೆಯ ಪ್ರಕಾರ, ಆಡಳಿತ ಪಕ್ಷವು ಮತ ಹಂಚಿಕೆ ಮತ್ತು ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆ ಸಾಧಿಸುವ ನಿರೀಕ್ಷೆಯಿದೆ, […]
ಇತಿಹಾಸದ ಅತ್ಯಂತ ಮಹತ್ವದ ತೀರ್ಪು; ಮನುಷ್ಯನಿಗೆ ಬದುಕುವ ಹಕ್ಕು ಇರುವಂತೆ, ಘನತೆಯಿಂದ ಸಾಯುವುದು ಮೂಲಭೂತ ಹಕ್ಕು”: ಸುಪ್ರೀಂ ಕೋರ್ಟ್
ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಅತ್ಯಂತ ಮಹತ್ವದ ತೀರ್ಪು. ಕಳೆದ ಹನ್ನೆರಡು ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಉತ್ತರ ಪ್ರದೇಶದ 32 ವರ್ಷದ ಯುವಕನಿಗೆ ‘ದಯಾಮರಣ’ ನೀಡಲು ಸುಪ್ರೀಂ ಕೋರ್ಟ್ ಬುಧವಾರದಂದು ಐತಿಹಾಸಿಕ ಆದೇಶ ಹೊರಡಿಸಿದೆ. ಇದು ಭಾರತದಲ್ಲಿ ಅಧಿಕೃತವಾಗಿ ದಯಾಮರಣಕ್ಕೆ ಅನುಮತಿ ನೀಡಿದ ಮೊದಲ ಪ್ರಕರಣವಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಈ ಯುವಕ, 12 ವರ್ಷಗಳ ಹಿಂದೆ ಕಟ್ಟಡವೊಂದರಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು. ಅಂದಿನಿಂದ ಆತ ಸಂಪೂರ್ಣವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕೇವಲ ಯಂತ್ರೋಪಕರಣಗಳ ಸಹಾಯದಿಂದ ಜೀವ ಹಿಡಿದಿದ್ದನು. […]
ಅಂತಾರಾಷ್ಟ್ರೀಯ
ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ
ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]
ಮೂಲಸೌಕರ್ಯದ ಮೇಲಿನ ದಾಳಿಗೆ ಇರಾನ್ ಆಕ್ರೋಶ; ಇಂತಹ ದಾಳಿ ನಡೆದರೆ ನಿಮ್ಮ ಮಿತ್ರ ರಾಷ್ಟ್ರಗಳನ್ನು ಸಂಪೂರ್ಣ ನಾಶ ಮಾಡದೆ ಬಿಡುವುದಿಲ್ಲ: ಇರಾನ್ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ “ಅನಿಯಂತ್ರಿತ ಪ್ರತಿದಾಳಿ” ನಡೆಸುವುದಾಗಿ ಇರಾನ್ ಸ್ಪಷ್ಟ ಎಚ್ಚರಿಕೆ ನೀಡಿದೆ. ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿ ನಡೆಸಿದರೆ ಗಲ್ಫ್ ಪ್ರದೇಶದ ತೈಲ ಹಾಗೂ ಅನಿಲ ವಲಯವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಇಸ್ರೇಲ್’ಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ […]
