ಕರಾವಳಿ

ಎಚ್ಚರ..ಭೀಕರ ಭೂ ಕುಸಿತಕ್ಕೆ ಕಾರಣವಾಗುತ್ತಿದೆ ಮಾನವ ನಿರ್ಮಿತ ಅಜಾಗರೂಕತೆ..!

ಕರಾವಳಿ ಭಾಗದಲ್ಲಿ ಗುಡ್ಡ, ಬೆಟ್ಟಗಳ ನಾಶ ಕರಾವಳಿಯ ಭೌಗೋಳಿಕತೆಯ ಮೇಲೂ ಪರಿಣಾಮ ಬೀರಲಿದೆ. ಮುಂದಕ್ಕೆ ಇದು ಮಾನವ ನಿರ್ಮಿತ ದುರಂತವಾಗಲಿದೆ.! ದುರಂತಗಳು ಯಾವಾಗಲೂ ದುರದೃಷ್ಟಕರವೇ. ಸಾವು ನೋವು ಮತ್ತು ವರ್ಷಗಳ ಕಠಿಣ ದುಡಿಮೆಯ ಮೂಲಕ ಸೃಷ್ಟಿಯಾದ ಸೊತ್ತಿನ ನಾಶಕ್ಕೆ ಇವು ಕಾರಣವಾಗುತ್ತವೆ. ದಿಢೀರ್‌ ಮತ್ತು ನಾವು ಊಹಿಸದೇ ಇದ್ದ ಸ್ಥಳದಲ್ಲಿ ಘಟಿಸುತ್ತವೆ. ಭೂಕಂಪ, ಪ್ರವಾಹ, ಭೂಕುಸಿತ, ಚಂಡಮಾರುತ, ಅತಿವೃಷ್ಟಿ, ಸುನಾಮಿಯಂತಹ ದುರಂತಗಳು ಇತಿಹಾಸ ಪೂರ್ವದಿಂದಲೂ ಇದ್ದೇ ಇದ್ದವು. ಇವು ನೈಸರ್ಗಿಕ ಪ್ರಕೋಪಗಳು. ಮನುಷ್ಯ ಕೈಗಾರಿಕೆಯನ್ನು ಶೋಧಿಸುವುದರೊಂದಿಗೆ ಮಾನವ […]

ಮಂಗಳೂರು: ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ; ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬೆಳ್ತಂಗಡಿ ತಾಲೂಕು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜೂನ್ 28 ರಂದು ಭೇಟಿ ಮಾಡಿ ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು, ಲೋಡರ್ಸ್, ಕ್ಲೀನರ್ಸ ಗಳಿಗೆ ನೇರ ಪಾವತಿ ಮಾಡಬೇಕು, ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೌಕರ್ಯ ಒದಗಿಸಬೇಕು, ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಯಗಳನ್ನು ಸಂಜೀವಿನಿ […]

ರಾಜ್ಯ

ಜುಲಾಯಿ ಒಂದರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿಗಳು ಜುಲಾಯಿ ಒಂದರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಪ್ರತಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ […]

ಜುಲೈ ಹತ್ತಕ್ಕೆ ಪುಲ್ ಆಗಲಿದೆ ಡಿಕೆ ಫ್ಲೈಟು; ಬಿಜೆಪಿಯಲ್ಲಿ ಸಡನ್ ಆಪರೇಷನ್.?, ಡಿಕೆ ಲಿಂಗಾಯತ ಲೀಡರ್ ಆಗ್ತಾರಾ.?

“ಖುದಾ ಕೀ ಕಸಂ, ನಾನು ನಿಮಗೆ ದ್ರೋಹ ಬಗೆದಿಲ್ಲ’ ಜಮೀರ್ ಅಹ್ಮದ್ ಕನ್ವಿನ್ಸು ✍️. ಆರ್.ಟಿ.ವಿಠ್ಠಲಮೂರ್ತಿ ಜುಲೈ ಹತ್ತರ ಹೊತ್ತಿಗೆ ರಾಜ್ಯ ಸಚಿವ ಸಂಪುಟ ವಿಸ್ರರಣೆಯಾಗಲಿದೆ. ಆ ಮೂಲಕ ಟೇಕಾಫ್ ಆಗಿರುವ ಡಿಕೆ-26 ಫ್ಲೈಟು ಫುಲ್ಲಾಗಲಿದೆ. ಅಂದ ಹಾಗೆ ಜುಲೈ ಮಧ್ಯ ಭಾಗದಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವ ಲೆಕ್ಕಾಚಾರ ಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿದ್ದು, ಈ ವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ಡೇಟು ಫಿಕ್ಸಾಗಲಿದೆ. ಹೀಗೆ ಅಧಿವೇಶನದ ಡೇಟು ಫಿಕ್ಸಾದ ನಂತರ ಲಿಮಿಟೆಡ್ ಸಂಪುಟದೊಂದಿಗೆ ಅಧಿವೇಶನ […]

ರಾಷ್ಟ್ರೀಯ

ಪಾರ್ಕಿಂಗ್‌ ದೀಪ, ಸೂಚನಾ ಫಲಕ ಇಲ್ಲದೆ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಮಾತ್ರಕ್ಕೆ, ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ, ಆತನೇ ತಪ್ಪಿತಸ್ಥ ಎಂಬ ವಾದವನ್ನು ಒಪ್ಪಲಾಗದು: ಸುಪ್ರೀಂ ಕೋರ್ಟ್

ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ಪಾರ್ಕಿಂಗ್‌ ದೀಪ, ಪ್ರತಿಫಲಕ ಅಥವಾ ಸೂಚನಾ ಫಲಕಗಳಿಲ್ಲದೆ ನಿಲುಗಡೆ ಮಾಡಲಾದ ಟ್ರಕ್‌ಗೆ ಕಾರು ಚಾಲಕನೊಬ್ಬ ಹಿಂದಿನಿಂದ ಡಿಕ್ಕಿ ಹೊಡೆದರೆ, ಆ ಅಪಘಾತಕ್ಕೆ ಟ್ರಕ್ ಚಾಲಕ ಮತ್ತು ಅದರ ಮಾಲೀಕರೇ ಪ್ರಾಥಮಿಕ ಹೊಣೆಗಾರರಾಗುತ್ತಾರೆ. ಇದರಲ್ಲಿ ಕಾರು ಚಾಲಕನ ತಪ್ಪೇನೂ ಇಲ್ಲ’ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೆಹಲಿಯಲ್ಲಿ 2013ರಲ್ಲಿ 20 ವರ್ಷದ ಚಾರ್ಟರ್ಡ್‌ ಅಕೌಂಟೆನ್ಸಿ ವಿದ್ಯಾರ್ಥಿಯೊಬ್ಬನ ಸಾವಿಗೆ ಕಾರಣವಾಗಿದ್ದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಓರಿಯಂಟಲ್‌ ಇನ್ಶುರೆನ್ಸ್‌ ಕಂಪನಿ ಸಲ್ಲಿಸಿದ್ದ […]

ಪ್ರೀತಿಯ ನಾಟಕವಾಡಿ, ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ; ಆರೋಪ ಸಾಬೀತು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹೈದರಾಬಾದ್‌ಗೆ ಕರೆದೊಯ್ದು ಹಲವಾರು ದಿನಗಳ ಕಾಲ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ಸೇಡಂ ತಾಲ್ಲೂಕಿನ ನಿವಾಸಿ ನವೀನ್ ಕುಮಾರ್ ದಸ್ತಪ್ಪ ದುದ್ಯಾಲ ಎಂಬಾತನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 55 ಸಾವಿರ ರೂ. ದಂಡ ವಿಧಿಸಿದೆ. 2025ರ ಮಾರ್ಚ್ 30ರಂದು ಬಾಲಕಿಗೆ ಕರೆ ಮಾಡಿ ಮಾತನಾಡುವುದಿದೆ ಎಂದು ಕರೆಸಿಕೊಂಡು ಪ್ರೀತಿಸುವುದಾಗಿ ಹೇಳಿ ಪಾಳು ಬಿದ್ದ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಜುಲೈ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!