ಕರಾವಳಿ

ಸಾವಿನ ಹೆದ್ದಾರಿ ಆಗುತ್ತಿದೆ ಬಿಕರ್ನಕಟ್ಟೆ -ಸಾಣೂರು ರಾಷ್ಟ್ರೀಯ ಹೆದ್ದಾರಿ

ಡಿಬಿಎಲ್ ಗುತ್ತಿಗೆದಾರರ ಘೋರ ನಿರ್ಲಕ್ಷ್ಯಕ್ಕೆ ಬಲಿಯಾಗುತ್ತಿದೆ ಅಮಾಯಕ ಜೀವಗಳು.. ಕೈಕಂಬ, ಗಂಜಿಮಠ, ಎಡಪದವಿನಲ್ಲಿ ಮೃತ್ಯು ಕೂಪ.! ದಿನಾಲೂ ಸಾಯುವವರಿಗೆ ಅಳುವವರೇ ಇಲ್ಲ ಅನ್ನುವಂತಾಗಿದೆ ಡಿಬಿಎಲ್ ಸಂಸ್ಥೆಯವರು ನಡೆಸುತ್ತಿರುವ ಹೆದ್ದಾರಿ ಕಾಮಗಾರಿ. ಬಿಕರ್ನಕಟ್ಟೆ -ಸಾಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುವವರು ಭಯಬೀತಿಯಿಂದಲೇ ಸಂಚರಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ರಸ್ತೆಯಲ್ಲಿ ನಡೆಯುತ್ತಿರುವ ಸರಣಿ ಅಪಘಾತವೇ ಇದಕ್ಕೆಲ್ಲ ಕಾರಣ. ಯಾವಾಗ ಮೃತ್ಯು ಕೂಪ ಎರಗುತ್ತಿದೆ ಅನ್ನುವುದನ್ನು ಹೇಳಲು ಸಾಧ್ಯವಿಲ್ಲ. ಡಿಬಿಎಲ್ ಗುತ್ತಿಗೆದಾರರ ಘೋರ ನಿರ್ಲಕ್ಷ್ಯಕ್ಕೆ ಹಲವು ಅಮಾಯಕ ಜೀವಗಳು ಬಲಿಯಾಗಿವೆ. ಬಹುಶಃ ದಕ್ಷಿಣ […]

ಬೆಳ್ತಂಗಡಿ: ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶರು, ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪರವರು ಅದಿತ್ಯವಾರ ಸಂಜೆ ಭೇಟಿ ನೀಡಿ ವೀಕ್ಷಿಸಿದರು. ಕಳೆದ ಬುಧವಾರ ಲಾಯಿಲ ಪರಿಶಿಷ್ಟ ಜಾತಿ, ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ವ್ಯಾಪಕ ಚರ್ಚೆ, ಮಾಧ್ಯಮಗಳ ವರದಿಯ ನಂತರ ಶುಕ್ರವಾರ ಅಧಿಕಾರಿಗಳ ದಂಡು ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಇದೀಗ […]

ರಾಜ್ಯ

ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ದರೆ, ಎರಡನೇ ಮದುವೆ ಊರ್ಜಿತವಲ್ಲ: ಹೈಕೋರ್ಟ್

ಮುಸ್ಲಿಂ ವೈಯಕ್ತಿಕ ಕಾನೂನು ಆ ಸಮುದಾಯದ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ವಿವಾಹ ಮಾಡಿಕೊಳ್ಳಲು ಅವಕಾಶ ನೀಡುತ್ತದೆ. ಮುಸ್ಲಿಂ ವ್ಯಕ್ತಿಯ ಎರಡನೇ ಪತ್ನಿ ಬಳ್ಳಾರಿಯ ಮೀನಾಕುಮಾರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಧಾರವಾಡ ಪೀಠದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ಏಕಸದಸ್ಯ ಪೀಠ ಮುಸ್ಲಿಮರ ಮದುವೆ ಸಂಬಂಧ ಈ ಆದೇಶ ನೀಡಿದೆ. ಹೈಕೋರ್ಟ್​ನಲ್ಲಿ ನಡೆದ ಅರ್ಜಿ ವಿಚಾರಣೆ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ‘ಮುಸ್ಲಿಂ ವೈಯಕ್ತಿಕ ಕಾನೂನು ಪುರುಷರು ಬಹು ವಿವಾಹ ಮಾಡಿಕೊಳ್ಳಲು ಅವಕಾಶ ನೀಡಿದೆ, ಆದರೂ ವೈಯಕ್ತಿಕ […]

ನಕಲಿ ಪಿಎಚ್ ಡಿ ಪ್ರಮಾಣ ಪತ್ರ ಪ್ರಕರಣ: 249 ಅತಿಥಿ ಉಪನ್ಯಾಸಕರು ಸೇವೆಯಿಂದ ವಜಾ; ಕಪ್ಪು ಪಟ್ಟಿಗೆ ಸೇರಿಸುವಂತೆ ಸರಕಾರದ ಆದೇಶ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. 2025-26ನೇ ಶೈಕ್ಷಣಿಕ ವರ್ಷದ ನೇಮಕಾತಿ ವೇಳೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಲಾಗಿತ್ತು. […]

ರಾಷ್ಟ್ರೀಯ

ಸೈಬರ್ ಅಪರಾಧಿಗಳಿಗೆ ನಕಲಿ ಬ್ಯಾಂಕಿಂಗ್ ಅಪ್ಲಿಕೇಶನ್‌ ಮತ್ತು ಮಾಲ್‌ವೇರ್ ತುಂಬಿದ APK ಫೈಲ್‌ ಪೂರೈಕೆ, 17 ವರ್ಷದ ಪೋರ ಡೆವಲಪರ್‌ನ ಬಂಧನ

ದೇಶಾದ್ಯಂತ ಸೈಬರ್ ಕ್ರಿಮಿನಲ್ ಗಳಿಗೆ ನಕಲಿ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಮತ್ತು ಮಾಲ್‌ವೇರ್ ತುಂಬಿದ APK ಫೈಲ್‌ಗಳನ್ನು ರಚಿಸಿ ಪೂರೈಸಿದ ಆರೋಪದ ಮೇಲೆ ಗುಜರಾತ್‌ನ ಸೂರತ್ ಸೈಬರ್ ಕ್ರೈಮ್ ಸೆಲ್ ಉತ್ತರ ಪ್ರದೇಶದ ಕಾನ್ಪುರದ 17 ವರ್ಷದ ಡೆವಲಪರ್‌ನನ್ನು ಬಂಧಿಸಲಾಗಿದೆ. ಆರೋಪಿಯು 11 ನೇ ತರಗತಿಯವರೆಗೆ ಮಾತ್ರ ಅಧ್ಯಯನ ಮಾಡಿದ್ದರೂ, ದೊಡ್ಡ ಪ್ರಮಾಣದ ಸೈಬರ್ ವಂಚನೆ ಕಾರ್ಯಾಚರಣೆಗಳಲ್ಲಿ ಬಳಸಲಾಗುತ್ತಿದ್ದ ಅತ್ಯಾಧುನಿಕ ಸಾಧನಗಳನ್ನು ಅಭಿವೃದ್ಧಿಪಡಿಸಲು ಕೃತಕ ಬುದ್ಧಿಮತ್ತೆ ಮತ್ತು ಟೆಲಿಗ್ರಾಮ್ ಅನ್ನು ಬಳಸಿದ್ದಾನೆ. ಬಂಧಿತನನ್ನು ರೋಹಿತ್ ವೀರೇಂದ್ರ ಸಿಂಗ್ ಶಕ್ಯಾ […]

ಸಿಜೆಪಿ ಜೊತೆ ಮಾತುಕತೆಗೆ ಮುಂದಾದ ಕೇಂದ್ರ ಸರಕಾರ; ಸಚಿವ ಜೆ.ಪಿ. ನಡ್ಡಾ ಜೊತೆ ಮಾತುಕತೆ

ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ಪ್ರಶ್ನಿಸಿ ಕಾಕ್ರೋಜ್​ ಜನತಾ ಪಾರ್ಟಿಯ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದು ಸಂಸತ್ ಚಲೋ ಎಂಬ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ. ಈ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ ಇರದ ಕಾರಣ ಕೆಲ ಕಡೆಗಳಲ್ಲಿ ಲಾಠಿ ಚಾರ್ಜ್​ ಕೂಡ ಆಗಿದೆ ಎಂದು ವರದಿಯಾಗಿದೆ. ಇದರ ನಡುವೆ ಪ್ರತಿಭಟನೆಯ ತೀವ್ರತೆಯನ್ನು ಅರಿತ ಕೇಂದ್ರ ಸರ್ಕಾರವು ಸಿಜೆಪಿಯೊಂದಿಗೆ ಮಾತುಕತೆಗೆ ಮುಂದಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಕಾಕ್ರೋಚ್ ಜನತಾ ಪಕ್ಷದ ಪ್ರತಿನಿಧಿಗಳು […]

ಅಂತಾರಾಷ್ಟ್ರೀಯ

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

error: Content is protected !!