ಕರಾವಳಿ

ಮಂಗಳೂರು: ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ; ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬೆಳ್ತಂಗಡಿ ತಾಲೂಕು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜೂನ್ 28 ರಂದು ಭೇಟಿ ಮಾಡಿ ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು, ಲೋಡರ್ಸ್, ಕ್ಲೀನರ್ಸ ಗಳಿಗೆ ನೇರ ಪಾವತಿ ಮಾಡಬೇಕು, ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೌಕರ್ಯ ಒದಗಿಸಬೇಕು, ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಯಗಳನ್ನು ಸಂಜೀವಿನಿ […]

ಸುರತ್ಕಲ್ ಪೊಲೀಸರ ಕಾರ್ಯಾಚರಣೆ: ಮಹಿಳೆಯರ ಸರ ಸುಲಿಗೆ ಪ್ರಕರಣದ ಆರೋಪಿಯ ಬಂಧನ; ಚಿನ್ನಾಭರಣಗಳ ವಶ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಅಜಾದ್ ನಗರದ ಎರಡನೇ ಬ್ಲಾಕ್ ನಲ್ಲಿರುವ ಶ್ರೀಮತಿ ಜಾಹೀದ್ ಎಂಬವರು ತನ್ನ ಮನೆಯ ಬೆಡ್ ರೂಮಿನಲ್ಲಿ ಮಲಗಿದ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಿಟಿಕಿಯಿಂದ ಕೈ ಹಾಕಿ ಶ್ರೀಮತಿ ಜಾಹೀದಾರವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಲು ಯತ್ನಿಸಿದಾಗ, ಕರಿಮಣಿ ಸರ ತುಂಡಾಗಿ ಸುಮಾರು 20 ಸಾವಿರ ರೂ. ಮೌಲ್ಯದ ಕರಿಮಣಿ ಸರದ ತುಂಡನ್ನು ಆರೋಪಿಯು ಕಸಿದುಕೊಂಡು ಹೋಗಿದ್ದು, ಉಳಿದ ಕರಿಮಣಿ ಸರದ ತುಂಡು ಜಾಹಿದಾ ಅವರಲ್ಲೇ ಬಾಕಿಯಾಗಿದ್ದು, ಈ […]

ರಾಜ್ಯ

ಜುಲೈ ಹತ್ತಕ್ಕೆ ಪುಲ್ ಆಗಲಿದೆ ಡಿಕೆ ಫ್ಲೈಟು; ಬಿಜೆಪಿಯಲ್ಲಿ ಸಡನ್ ಆಪರೇಷನ್.?, ಡಿಕೆ ಲಿಂಗಾಯತ ಲೀಡರ್ ಆಗ್ತಾರಾ.?

“ಖುದಾ ಕೀ ಕಸಂ, ನಾನು ನಿಮಗೆ ದ್ರೋಹ ಬಗೆದಿಲ್ಲ’ ಜಮೀರ್ ಅಹ್ಮದ್ ಕನ್ವಿನ್ಸು ✍️. ಆರ್.ಟಿ.ವಿಠ್ಠಲಮೂರ್ತಿ ಜುಲೈ ಹತ್ತರ ಹೊತ್ತಿಗೆ ರಾಜ್ಯ ಸಚಿವ ಸಂಪುಟ ವಿಸ್ರರಣೆಯಾಗಲಿದೆ. ಆ ಮೂಲಕ ಟೇಕಾಫ್ ಆಗಿರುವ ಡಿಕೆ-26 ಫ್ಲೈಟು ಫುಲ್ಲಾಗಲಿದೆ. ಅಂದ ಹಾಗೆ ಜುಲೈ ಮಧ್ಯ ಭಾಗದಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವ ಲೆಕ್ಕಾಚಾರ ಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿದ್ದು, ಈ ವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ಡೇಟು ಫಿಕ್ಸಾಗಲಿದೆ. ಹೀಗೆ ಅಧಿವೇಶನದ ಡೇಟು ಫಿಕ್ಸಾದ ನಂತರ ಲಿಮಿಟೆಡ್ ಸಂಪುಟದೊಂದಿಗೆ ಅಧಿವೇಶನ […]

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ; ಅಕ್ಷೇಪಾರ್ಹ ಕಮೆಂಟ್ಸ್, ಆರೋಪಿಯ ಬಂಧನ .

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ:18-09-2025 ರಂದು ಅ.ಕ್ರ.ಸಂ:131/2025ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಬೆಂಗಳೂರು ವಿದ್ಯಮಾನ್ಯ ನಗರದ ನಿವಾಸಿ, ಆನಂದ.ಎ ಎಂಬಾತನನ್ನು ದಿನಾಂಕ: 27/06/2026 ರಂದು ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿ ಆನಂದ ಎಂಬಾತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ […]

ರಾಷ್ಟ್ರೀಯ

ಪಾರ್ಕಿಂಗ್‌ ದೀಪ, ಸೂಚನಾ ಫಲಕ ಇಲ್ಲದೆ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಮಾತ್ರಕ್ಕೆ, ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ, ಆತನೇ ತಪ್ಪಿತಸ್ಥ ಎಂಬ ವಾದವನ್ನು ಒಪ್ಪಲಾಗದು: ಸುಪ್ರೀಂ ಕೋರ್ಟ್

ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ಪಾರ್ಕಿಂಗ್‌ ದೀಪ, ಪ್ರತಿಫಲಕ ಅಥವಾ ಸೂಚನಾ ಫಲಕಗಳಿಲ್ಲದೆ ನಿಲುಗಡೆ ಮಾಡಲಾದ ಟ್ರಕ್‌ಗೆ ಕಾರು ಚಾಲಕನೊಬ್ಬ ಹಿಂದಿನಿಂದ ಡಿಕ್ಕಿ ಹೊಡೆದರೆ, ಆ ಅಪಘಾತಕ್ಕೆ ಟ್ರಕ್ ಚಾಲಕ ಮತ್ತು ಅದರ ಮಾಲೀಕರೇ ಪ್ರಾಥಮಿಕ ಹೊಣೆಗಾರರಾಗುತ್ತಾರೆ. ಇದರಲ್ಲಿ ಕಾರು ಚಾಲಕನ ತಪ್ಪೇನೂ ಇಲ್ಲ’ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೆಹಲಿಯಲ್ಲಿ 2013ರಲ್ಲಿ 20 ವರ್ಷದ ಚಾರ್ಟರ್ಡ್‌ ಅಕೌಂಟೆನ್ಸಿ ವಿದ್ಯಾರ್ಥಿಯೊಬ್ಬನ ಸಾವಿಗೆ ಕಾರಣವಾಗಿದ್ದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಓರಿಯಂಟಲ್‌ ಇನ್ಶುರೆನ್ಸ್‌ ಕಂಪನಿ ಸಲ್ಲಿಸಿದ್ದ […]

ಪ್ರೀತಿಯ ನಾಟಕವಾಡಿ, ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ; ಆರೋಪ ಸಾಬೀತು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹೈದರಾಬಾದ್‌ಗೆ ಕರೆದೊಯ್ದು ಹಲವಾರು ದಿನಗಳ ಕಾಲ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ಸೇಡಂ ತಾಲ್ಲೂಕಿನ ನಿವಾಸಿ ನವೀನ್ ಕುಮಾರ್ ದಸ್ತಪ್ಪ ದುದ್ಯಾಲ ಎಂಬಾತನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 55 ಸಾವಿರ ರೂ. ದಂಡ ವಿಧಿಸಿದೆ. 2025ರ ಮಾರ್ಚ್ 30ರಂದು ಬಾಲಕಿಗೆ ಕರೆ ಮಾಡಿ ಮಾತನಾಡುವುದಿದೆ ಎಂದು ಕರೆಸಿಕೊಂಡು ಪ್ರೀತಿಸುವುದಾಗಿ ಹೇಳಿ ಪಾಳು ಬಿದ್ದ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಜುಲೈ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

ಪಾರ್ಕಿಂಗ್‌ ದೀಪ, ಸೂಚನಾ ಫಲಕ ಇಲ್ಲದೆ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಮಾತ್ರಕ್ಕೆ, ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ, ಆತನೇ ತಪ್ಪಿತಸ್ಥ ಎಂಬ ವಾದವನ್ನು ಒಪ್ಪಲಾಗದು: ಸುಪ್ರೀಂ ಕೋರ್ಟ್

ಮಂಗಳೂರು: ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ; ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ

ಸುರತ್ಕಲ್ ಪೊಲೀಸರ ಕಾರ್ಯಾಚರಣೆ: ಮಹಿಳೆಯರ ಸರ ಸುಲಿಗೆ ಪ್ರಕರಣದ ಆರೋಪಿಯ ಬಂಧನ; ಚಿನ್ನಾಭರಣಗಳ ವಶ.

ಜುಲೈ ಹತ್ತಕ್ಕೆ ಪುಲ್ ಆಗಲಿದೆ ಡಿಕೆ ಫ್ಲೈಟು; ಬಿಜೆಪಿಯಲ್ಲಿ ಸಡನ್ ಆಪರೇಷನ್.?, ಡಿಕೆ ಲಿಂಗಾಯತ ಲೀಡರ್ ಆಗ್ತಾರಾ.?

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ; ಅಕ್ಷೇಪಾರ್ಹ ಕಮೆಂಟ್ಸ್, ಆರೋಪಿಯ ಬಂಧನ .

error: Content is protected !!