ಕರಾವಳಿ
ಬಂಟ್ವಾಳ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಬೃಹತ್ ಪ್ರಮಾಣದ MDMA ವಶ, ಮಾಲು ಸಹಿತ ಆರೋಪಿಗಳ ಬಂಧನ
ಬಂಟ್ವಾಳ ಪೊಲೀಸರು ಮಾದಕ ವಸ್ತುಗಳ ವಿರೋಧಿ ಅಭಿಯಾನದ ಭಾಗವಾಗಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿರುತ್ತಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ವಿಶೇಷ ಪೊಲೀಸ್ ತಂಡವು, ಅಕ್ರಮವಾಗಿ ಅಮಲು ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾರಕ MDMA ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಹೊರರಾಜ್ಯದಿಂದ ನಿಷೇಧಿತ ಡ್ರಗ್ಸ್ ತಂದು ಸ್ಥಳೀಯ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಯುವಜನತೆಗೆ ಪೂರೈಸುವ ಜಾಲದಲ್ಲಿ ತೊಡಗಿದ್ದರು ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ […]
ಪುತ್ತೂರು ಕಮ್ಯೂನಿಟಿ ಸೆಂಟರ್ ನ ಸುಮಾರು 108 ವಿದ್ಯಾರ್ಥಿಗಳು ಈ ಬಾರಿ ನೀಟ್ ಪರೀಕ್ಷೆ ಬರೆಯುತ್ತಿದ್ದಾರೆ
ಬೆಂಗಳೂರು ಫಾಲ್ಕನ್ ಕಾಲೇಜು, ಬೀದರ್ ಶಾಹೀನ್, ಶೆಪರ್ಡ್ ಶಾಹೀನ್ ಬೆಂಗಳೂರು, ಬರಕ ಕಾಲೇಜು, ಆಕಾಶ್, ಅಲೆನ್, ಬ್ರಿಲಿಯಂಟ್ ಪಾಲ, ಎಕ್ಸೆಲ್, ಎಕ್ಸ್ಪರ್ಟ್ ಮುಂತಾದ ಹೆಸರಾಂತ ಇಂಟಿಗ್ರೇಟೆಡ್ ಪಿಯು ಕಾಲೇಜು ಮತ್ತು ಲಾಂಗ್ ಟರ್ಮ್ ನೀಟ್ ಕೋಚಿಂಗ್ ಸೆಂಟರ್ ನಲ್ಲಿ ಈ ವಿದ್ಯಾರ್ಥಿಗಳು ತರಬೇತಿ ಪಡೆದವರು. ಕಳೆದ ನಾಲ್ಕು ವಾರ್ಷಿಕ ಅವಧಿಯಲ್ಲಿ ಸೆಂಟರ್ ಮೂಲಕ 229 ವಿದ್ಯಾರ್ಥಿಗಳು ನೀಟ್ ಬರೆದಿದ್ದರು. ಅವರಲ್ಲಿ 79 ವಿದ್ಯಾರ್ಥಿಗಳು MBBS, 25 ವಿದ್ಯಾರ್ಥಿಗಳು BDS, 26 ವಿದ್ಯಾರ್ಥಿಗಳು BAMS ಸೇರಿದಂತೆ ವಿವಿಧ ಮೆಡಿಕಲ್ […]
ರಾಜ್ಯ
ಮದಕರಿ ನಾಯಕ ಫ್ರಂಟ್ ಲೈನಿಗೆ ಬಂದಿದ್ದೇಕೆ.?, ಇದು ವಿಜಯೇಂದ್ರ ವೈಭವಂ
ರಾಹುಲ್ ಅಪ್ ಸೆಟ್; ಸಧ್ಯದಲ್ಲೇ ಎಐಸಿಸಿಗೆ ಮೇಜರ್ ಸರ್ಜರಿ ✍️. ಆರ್.ಟಿ.ವಿಠ್ಠಲಮೂರ್ತಿ ಮೇ ಒಂಭತ್ತರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರೋತ್ಸವ ದಿಲ್ಲಿಯ ಕಾಂಗ್ರೆಸ್ ನಾಯಕರಿಗೆ ಆತಂಕ ಮೂಡಿಸಿದೆ. ಕಾರಣ? ಈ ಉತ್ಸವ ಕರ್ನಾಟಕದ ಜಾತಿ ರಾಜಕೀಯದ ಚಿತ್ರವನ್ನು ಬದಲಿಸಲಿದೆ ಎಂಬ ಮಾಹಿತಿ. ಅಂದ ಹಾಗೆ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಅಭಿನಂದಿಸುವ ಈ ಉತ್ಸವ ಕೇವಲ ಬಲ ಪ್ರದರ್ಶನದ ಉದ್ದೇಶವನ್ನಷ್ಟೇ ಹೊಂದಿದ್ದರೆ ಅದು ಕಾಂಗ್ರೆಸ್ ನಾಯಕರಿಗೆ ಅಷ್ಟೇನೂ ಆತಂಕ ಮೂಡಿಸುತ್ತಿರಲಿಲ್ಲ. ಆದರೆ ಈ ಉತ್ಸವದ ತಯಾರಿ ಹೇಗೆ ನಡೆದಿದೆ […]
ರಾಜ್ಯದ ಜನತೆಗೆ ವಿದ್ಯುತ್ ಬರೆ.! ಮೇ ತಿಂಗಳಿನಿಂದಲೇ ಹೊಸ ದರ ಜಾರಿ, 91 ಪೈಸೆ ಹೆಚ್ಚಳ
ವಿದ್ಯುತ್ ಸರಬರಾಜು ನಿಗಮವು ಗೃಹ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 91 ಪೈಸೆ ದರ ಹೆಚ್ಚಳ ಮಾಡಿದ್ದು, ಮೇ ತಿಂಗಳಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಈಗಾಗಲೇ ಏಪ್ರಿಲ್ ತಿಂಗಳಿನಿಂದ ಪ್ರತಿ ಯೂನಿಟ್ಗೆ 35 ಪೈಸೆ ಏರಿಕೆ ಮಾಡಲಾಗಿತ್ತು.ಪ್ರಸ್ತುತ ಮೇ ತಿಂಗಳಿನಿಂದ ‘ಟ್ರೂ ಅಪ್ ಚಾರ್ಜ್’ ಹೆಸರಿನಲ್ಲಿ ಹೆಚ್ಚುವರಿಯಾಗಿ 56 ಪೈಸೆ ದರ ವಿಧಿಸಲಾಗುತ್ತಿದೆ. ಒಟ್ಟಾರೆಯಾಗಿ ಗ್ರಾಹಕರು ಪ್ರತಿ ಯೂನಿಟ್ಗೆ 91 ಪೈಸೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಗೃಹ ಬಳಕೆದಾರರಿಗಿಂತಲೂ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ಈ ಬೆಲೆ […]
ರಾಷ್ಟ್ರೀಯ
30 ಮಂದಿ ಐಪಿಎಸ್ ಯೇತರ ಅಧಿಕಾರಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಡ್ತಿಗೆ ಹೈಕೋರ್ಟ್ ಆದೇಶ
ರಾಜ್ಯ ಪೊಲೀಸ್ ಸೇವೆಯಲ್ಲಿದ್ದ 30 ಐಪಿಎಸ್ ಯೇತರ ಅಧಿಕಾರಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಡ್ತಿ ನೀಡಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.ಎಸ್ಪಿ ಹುದ್ದೆಗೆ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ 2025ರ ಆಗಸ್ಟ್ 20ರಂದು ನೀಡಿರುವ ಆದೇಶ ರದ್ದುಗೊಳಿಸುವಂತೆ ಕೋರಿ ರಾಜ್ಯ ಗೃಹ ಇಲಾಖೆ ಸಲ್ಲಿಸಿದ್ದ ರಿಟ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಕೆಎಸ್ಎಟಿ ಆದೇಶವನ್ನು ಮಾರ್ಪಾಡು ಮಾಡಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಪೀಠ, […]
ಇರಾನ್ ಹ್ಯಾಕರ್ಸ್ ಗಳಿಂದ ಸೈಬರ್ ದಾಳಿ; ಅಮೆರಿಕನ್ ಮರೀನ್ ಸೈನಿಕರ ವೈಯಕ್ತಿಕ ಮಾಹಿತಿ ಹ್ಯಾಕ್ ಮಾಡಿ ಸೋರಿಕೆ
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಕೇವಲ ಸಮರಭೂಮಿಗೆ ಸೀಮಿತವಾಗಿಲ್ಲ, ಅದು ಡಿಜಿಟಲ್ ಲೋಕಕ್ಕೂ ಹಬ್ಬಿದೆ. ಇರಾನ್ ಬೆಂಬಲಿತ ಹ್ಯಾಕರ್ ಗುಂಪೊಂದು ಪಶ್ಚಿಮ ಏಷ್ಯಾದಲ್ಲಿ ನಿಯೋಜನೆಗೊಂಡಿರುವ 2,000ಕ್ಕೂ ಹೆಚ್ಚು ಅಮೆರಿಕನ್ ಮರೀನ್ ಸೈನಿಕರ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡಿ ಸೋರಿಕೆ ಮಾಡಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ದಿ ವಾಲ್ ಸ್ಟ್ರೀಟ್ ಜರ್ನಲ್ ಈ ಕುರಿತು ವರದಿ ಮಾಡಿದ್ದು, ಅಮೆರಿಕದ ರಕ್ಷಣಾ ಇಲಾಖೆ ಈ ಗಂಭೀರ ಭದ್ರತಾ ಲೋಪದ ಬಗ್ಗೆ ತನಿಖೆ ಆರಂಭಿಸಿದೆ. ಈ ದಾಳಿಯ ಹಿಂದೆ […]
ಅಂತಾರಾಷ್ಟ್ರೀಯ
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ
ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]
