ಕರಾವಳಿ

ಉಪ್ಪಿನಂಗಡಿ: ದರೋಡೆ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ಪ್ರಕಟ:

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, 2023 ರಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ರಂತೆ ಪ್ರಕರಣ ದಾಖಲಾಗಿತ್ತು. ದರೋಡೆ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳನ್ನು ಬಂಧಿಸಿ, ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸದ್ರಿ ಪ್ರಕರಣದ ವಿಚಾರಣೆ ನಡೆಸಿದ […]

ಮಳಲಿಯ ಮರಳು ಕಳ್ಳರು.. ಖಡಕ್ ಪೊಲೀಸ್ ಆಫೀಸರ್ಸ್ ಇದ್ದರೂ ಫಲ್ಗುಣಿಯನ್ನೇ ಮುಂಡಾಮೋಚಿದ ದಂಧೆಕೋರರು.!

ಅಧಿಕಾರಿಗಳು ಚಾಪೆ ಕೆಳಗೆ ನುಸುಳಿದರೆ, ದಂಧೆಕೋರರು ರಂಗೋಲಿ ಕೆಳಗೆ ನುಸುಳುತ್ತಾರೆ ಎನ್ನುವುದು ಹಳೆ ಗಾದೆ. ಆದರೆ, ಮಂಗಳೂರಿನ ಮಟ್ಟಿಗೆ ಆ ಗಾದೆಯೇ ಉಲ್ಟಾ. ದಂಧೆಕೋರರಿಗೆ ಅದೇ ವರದಾನ.! ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಡಕ್ ಪೊಲೀಸ್ ಆಫೀಸರ್ಸ್ ಎಂಟ್ರಿಯ ನಂತರ ಇಲ್ಲಿನ ಕ್ಲಬ್, ಮಸಾಜ್ ಎಲ್ಲವೂ ಬಾಗಿಲು ಹಾಕಿಕೊಂಡಿರುವುದೇನೂ ನಿಜ. ಆದರೆ ಅಕ್ರಮ ಮರಳುಗಾರಿಕೆಗೆ ಮಾತ್ರ ಸಂಪೂರ್ಣ ಬ್ರೇಕ್ ಬಿದ್ದಿಲ್ಲ ಅನ್ನುವುದು ಅಷ್ಟೇ ನಿಜ. ನಿನ್ನೆಯಷ್ಟೇ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಿಮಠದ ಮಳಲಿಯ ಮೊಗರು ಗ್ರಾಮದಲ್ಲಿ ಅಕ್ರಮವಾಗಿ […]

ರಾಜ್ಯ

ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಸರ್ಕಾರದ ಅಧಿಕೃತ ಸುತ್ತೋಲೆ

ದೈನಂದಿನ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ರಾಜ್ಯದ ಗ್ರಾಮೀಣ ಭಾಗದ ಜನರ ಜೀವನಮಟ್ಟವನ್ನು ಸುಧಾರಿಸಲು ಮತ್ತು ನಗರ ಪ್ರದೇಶದ ಮಾದರಿಯಲ್ಲೇ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಒದಗಿಸಬೇಕಾದ 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇ. 61.43 ರಷ್ಟು ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಅವರಿಗೆ ದೈನಂದಿನ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು […]

ಟೇಕ್ ಆಫ್ ಆಗುತ್ತಿದೆ ‘ಡಿಕೆ’ ಫ್ಲೈಟ್; ರಾಹುಲ್ ಗಾಂಧಿ ಚೀಟಿ ರಹಸ್ಯ.!, ಅಹಿಂದ ಪಿಲ್ಲರುಗಳೇ ಇಲ್ಲ

ಸಂಪುಟಕ್ಕೆ ಸೇರುವವರು ಯಾರು?; ಸ್ಪೀಕರ್ ಹುದ್ದೆಗೆ ಹೆಚ್ಕೆ ಇಲ್ಲವೇ ದಿನೇಶ್? ✍️.ಅರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದಿದ್ದ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಒಂದು ಚೀಟಿ ಹೊರತೆಗೆದರಂತೆ. ಅವರೇನು ಮಾಡುತ್ತಾರೆ ಅಂತ ಮುಖ್ಯಮಂತ್ರಿಗಳು ನೋಡುತ್ತಿದ್ದಂತೆಯೇ ಅವರ ಕೈಗೆ ರಾಹುಲ್ ಗಾಂಧಿ ಈ ಚೀಟಿಯನ್ನು ಕೊಟ್ಟಿದ್ದಾರೆ. ಅವರು ಕೊಟ್ಟ ಚೀಟಿಯನ್ನು ಡಿ.ಕೆ.ಶಿವಕುಮಾರ್ ಅವರು ಬಿಚ್ಚಿ ನೋಡಿದರೆ ಅದರಲ್ಲಿ ಕೃಷ್ಣ ಭೈರೇಗೌಡರ ಹೆಸರು ಕಾಣಿಸಿದೆ.ಅದನ್ನು ಅವರು ನೋಡುತ್ತಿದ್ದಂತೆಯೇ ರಾಹುಲ್ ಗಾಂಧಿ […]

ರಾಷ್ಟ್ರೀಯ

ಜೈಪುರ: ಲಂಚ ಪ್ರಕರಣ; ಜೈಪುರದ ಭ್ರಷ್ಟಾಚಾರ ನಿಗ್ರಹ ದಳದ (ACB) ಬಲೆಗೆ ಬಿದ್ದ ಬೆಂಗಳೂರು ಪೊಲೀಸರು

ರಾಜಸ್ಥಾನದ ಜೈಪುರದಲ್ಲಿ ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಯೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ದೂರುದಾರರೊಬ್ಬರಿಂದ 40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯ ಮೂವರು ಪೊಲೀಸರು ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿತಾ ಹಾಗೂ ಮುಖ್ಯ ಪೇದೆಗಳಾದ ಯತೀಶ್ ಕುಮಾರ್ ಮತ್ತು ಉಳುವಪ್ಪ ಎಂದು ಗುರುತಿಸಲಾಗಿದೆ. ಕರ್ತವ್ಯದ ನಿಮಿತ್ತ ಜೈಪುರಕ್ಕೆ ತೆರಳಿದ್ದ ಈ ಮೂವರು ಪೊಲೀಸ್ ಅಧಿಕಾರಿಗಳು ಅಲ್ಲಿಯೇ […]

ಪೊಲೀಸರ ಒಂದು ಸಣ್ಣ ಎಡವಟ್ಟು, ಜೈಲು ಪಾಲಾಗಿ, ಶಿಕ್ಷೆ ಅನುಭವಿಸಿದ ಅಮಾಯಕ

ಜೈಲಲ್ಲೇ ಕೂತು ಕಾನೂನು ಪುಸ್ತಕ ಓದಿ, ಹೈಕೋರ್ಟಲ್ಲಿ ತನ್ನ ಪರ ತಾನೇ ವಾದ ಮಾಡಿ ಗೆದ್ದ ಶೆಟ್ಟಿ ಪೊಲೀಸರ ಒಂದು ಸಣ್ಣ ಎಡವಟ್ಟಿನ ಬೇಜವಾಬ್ದಾರಿ, ನಿರ್ಲಕ್ಷತನದಿಂದ ಒಬ್ಬ ಅಮಾಯಕನ ಬದುಕನ್ನೇ ಹೇಗೆ ನರಕ ಮಾಡಬಹುದು ಅನ್ನೋದಕ್ಕೆ ಈ ಘಟನೆ ಒಂದು ಜೀವಂತ ಉದಾಹರಣೆ. ಹೆಸರಿನ ಸಾಮ್ಯತೆ ಇದೆ ಅನ್ನೋ ಒಂದೇ ಒಂದು ಕಾರಣಕ್ಕೆ ಪೊಲೀಸರು ಮಾಡಿದ ಮಹಾ ಎಡವಟ್ಟಿನಿಂದಾಗಿ, ಒಬ್ಬ ವ್ಯಕ್ತಿ ತನ್ನ ಯೌವನದ ಪ್ರಮುಖ ಏಳು ವರ್ಷಗಳನ್ನು ಜೈಲಿನ ಕತ್ತಲ ಕೋಣೆಯಲ್ಲಿ ಕಳೆಯಬೇಕಾಗಿ ಬಂತು. ಜೈಲಿನಿಂದ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!