ಕರಾವಳಿ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ವಂಚನೆ ಪ್ರಕರಣದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ ಬಂಧನ.

ಮಂಗಳೂರು ನಗರ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಸ್ಯಾಮ್ ಪೀಟರ್ @ ಡ್ಯಾನಿ ತಾರಕನ್ @ ಆಂಟನಿ, ಮರಿಯಾ ಕಾಟೇಜ್, ಕವನಾಡು, ಕೊಲ್ಲಂ, ಆಲಪ್ಪಿ, ಕೋಯಿಲಾಡ್, ಅಲಪ್ಪಿ ರೋಡ್, ಕೇರಳ. ಪ್ರಸ್ತುತ ವಿಳಾಸ: Chanakayapuri, Lucknow, Manas […]

ಸಹಕಾರಿ ದಿಗ್ಗಜ ದಿವಂಗತ ಎಚ್. ನಾರಾಯಣ ಸನಿಲ್ ಹೆಸರಲ್ಲಿ ಮರಣೋತ್ತರ ಸಹಾಯ ನಿಧಿ ಸ್ಥಾಪಿಸಿದ ಪ್ರಿಯದರ್ಶಿನಿ ಕೋ.ಅಪರೇಟಿವ್ ಸೊಸೈಟಿ

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ವಾರ್ಷಿಕ ಮಹಾಸಬೆಯಲ್ಲಿ ಘೋಷಿಸಿದಂತೆ, ಸಹಕಾರಿ ದಿಗ್ಗಜ ದಿವಂಗತ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿಯನ್ನು ಸ್ಥಾಪನೆ ಮಾಡಿದ್ದು, ಈ ನಿಧಿಯ ಅನ್ವಯ ಸೊಸೈಟಿಯಲ್ಲಿ ಸದಸ್ಯರಾಗಿದ್ದ ವ್ಯಕ್ತಿಗಳು ಮರಣ ಹೊಂದಿದ್ದಲ್ಲಿ ಅವರ ವಾರಿಸುದಾರರಿಗೆ ಮೃತರ ಶವ ಸಂಸ್ಕಾರ ಬಾಬ್ತು 10 ಸಾವಿರ ರೂಪಾಯಿ ಮೊತ್ತವನ್ನು ಸಹಾಯ ರೂಪವಾಗಿ ನೀಡಲಾಗುವುದು. ಎಂದು ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ ಬರ್ನಾಡ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಹಳೆಯಂಗಡಿಯ ಎಚ್ ನಾರಾಯಣ […]

ರಾಜ್ಯ

ಪೊಲೀಸ್ ಇಲಾಖೆಯಲ್ಲಿ ಡೀಲ್ ಮಾಸ್ಟರ್.. ಇಲಾಖೆಯೊಳಗಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಹೊರತಂದ ಆಡಿಯೋ.!

ಖಡಕ್ ಗೃಹ ಮಂತ್ರಿ ಇದ್ದರೂ ಪೋಸ್ಟಿಂಗ್ ಗೆ ನಡೆಯುತ್ತೆ ಡೀಲಿಂಗ್.. ಆಡಿಯೋ ಬಿಚ್ಚಿಟ್ಟ ಸತ್ಯ! ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಬ್ರಹ್ಮಾಂಡ ಗಾತ್ರದ ಭ್ರಷ್ಟಾಚಾರ ನಡೆಯುತ್ತಿದೆ ಅನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಪೊಲೀಸ್ ಇಲಾಖೆಯಲ್ಲೂ ಭ್ರಷ್ಟಾಚಾರ ಮೇಳೈಸುತ್ತಿದೆ ಅನ್ನುವ ಸುದ್ದಿ ಇದ್ದರೂ ಅದಕ್ಕೆ ಪುಷ್ಟಿ ನೀಡುವಂತ ಆಡಿಯೋ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪೊಲೀಸ್ ಠಾಣೆಯ ಪ್ರಮುಖ ಹುದ್ದೆ ಹಾಗೂ ಪೋಸ್ಟಿಂಗ್ ಪಡೆಯಲು ದುಡ್ಡೇ ಪ್ರಮುಖ ಮಾನದಂಡವಾಗುತ್ತಿದೆ ಅನ್ನುವ ಸುದ್ದಿ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಹಳಿಯಾಳದ ಹಿಂದಿನ […]

‘ನಾಗೇಂದ್ರ’ ಬಿಜೆಪಿಗೆ ಕ್ರೆಡಿಟ್ಟು, ಕಾಂಗ್ರೆಸ್ಸಿಗೆ ಕ್ಯಾಶು’

✍️ ಆರ್.ಟಿ.ವಿಠ್ಠಲಮೂರ್ತಿ ಸಚಿವ ನಾಗೇಂದ್ರ ರಾಜೀನಾಮೆ‌ ಎಪಿಸೋಡಿನ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಮುಗಿಬೀಳಲು ಸಿಎಂ ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ.ಅಂದ ಹಾಗೆ ವಾಲ್ಮೀಕಿ ಹಗರಣದ ಹೆಸರಿನಲ್ಲಿ ಸಚಿವ ನಾಗೇಂದ್ತ ಅವರ ವಿರುದ್ಧ ಬಿಜೆಪಿ ತಿರುಗಿ ಬಿತ್ತಲ್ಲ? ಹೀಗೆ ಅ ತಿರುಗಿ ಬಿದ್ದರೂ ಕಾಂಗ್ರೆಸ್ ಅದನ್ನು ನಿರಾಯಾಸವಾಗಿ ಎದುರಿಸಬಹುದಿತ್ತು.ಯಾಕೆಂದರೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಎಂತೆಂತಹ ಹಗರಣಗಳ ಆರೋಪ ಬಂದು ರಣ ರಾದ್ಧಾಂತವಾದರೂ ಸಿದ್ದು-ಡಿಕೆಶಿ ನೇತೃತ್ವದ ಕಾಂಗ್ರೆಸ್ಸು ಅದಕ್ಕೆ ಕ್ಯಾರೇ ಎನ್ನಲಿಲ್ಲ. ಅದು ಸಿದ್ದರಾಮಯ್ಯ ವಿರುದ್ದದ ಮೂಡಾ […]

ರಾಷ್ಟ್ರೀಯ

2029 ಕ್ಕೆ ದೇಶದಲ್ಲಿ ಜೆನ್ ಝೀ ಗಳದ್ದೇ ಕಾರುಬಾರು.. ಜೆನ್ ಝೀ ಗಳ ಹೃದಯ ಗೆದ್ದವರಿಗೆ ಗದ್ದುಗೆ ಫಿಕ್ಸ್!

ಹಿಂದೂ -ಮುಸ್ಲಿಂ ಖೇಲ್ ಖತಂ.. ಜೆನ್ ಝೀ -ಮಿಲೇನಿಯಲ್ಸ್ ತೀರ್ಪೆ ಫೈನಲ್ 2029 ಕ್ಕೆ ಚುನಾವಣೆಯ ಇಶ್ಯೂ ಯಾವುದೆಂದರೆ ಒಳ್ಳೆಯ ಗುಣಮಟ್ಟದ ಶಿಕ್ಷಣ, ಉಜ್ವಲ ಭವಿಷ್ಯಕ್ಕಾಗಿ ಯುವಜನತೆಗೆ ಉದ್ಯೋಗ, ಪರಿಸರದ ಬಗ್ಗೆ ಕಾಳಜಿ, ಆರೋಗ್ಯಕರ ಜೀವನ, ಬೆಲೆ ಏರಿಕೆಗೆ ಕಡಿವಾಣ, ಸ್ವಾಭಿಮಾನದ ಬದುಕು ಇದೇ ಮುಖ್ಯ ಅಸ್ತ್ರ ವಾಗುವ ಸಾಧ್ಯತೆಗಳಿವೆ. ದೇಶದೆಲ್ಲೆಡೆ ಜೆನ್ ಝೀ ಗಳ ಸಂಖ್ಯೆ ಗಣನೀಯ ಮಟ್ಟದಲ್ಲಿರುವುದರಿಂದ ಈ ತಲೆಮಾರನ್ನು ರಾಜಕಾರಣಿಗಳು ಭಾವನಾತ್ಮಕ ಅಂಶಗಳನ್ನು ಮುಂದಿಟ್ಟು ಮಂಕು ಮರುಳು ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಒಟ್ಟು […]

ಡೇತ್ ನೋಟಲ್ಲಿ ದೋಷಿತನಾದ ಮಾತ್ರಕ್ಕೆ ಪ್ರಚೋದನೆಯ ಅಪರಾಧವಾಗಲ್ಲ

FIR ದಾಖಲಿಸಿದ ಮಾತ್ರಕ್ಕೆ ಆತ್ಮಹತ್ಯೆಗೆ ಕುಮ್ಮಕ್ಕು ಎನ್ನಲಾಗದು: ಸುಪ್ರೀಂ ಕೋರ್ಟ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದ ಮಾತ್ರಕ್ಕೆ ಆತನನ್ನು ಕ್ರಿಮಿನಲ್ ಅಪರಾಧಕ್ಕೆ ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನಿನಡಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ದೃಢ ಹಕ್ಕನ್ನು ಹೊಂದಿದ್ದಾರೆ ಎಂದು ಅದು ಒತ್ತಿ ಹೇಳಿದೆ. ಯಾರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೋ ಅವರು ನಂತರ ಆತ್ಮಹತ್ಯೆ ಮಾಡಿಕೊಂಡರು ಎಂಬ ಕಾರಣಕ್ಕೆ […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

error: Content is protected !!