ಕರಾವಳಿ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಿ: ಸರಕಾರಕ್ಕೆ ಸಿಪಿಐಎಂ ಆಗ್ರಹ

ಜಿಲ್ಲೆಯಾದ್ಯಂತ ಹೋರಾಟ ವಿಸ್ತರಣೆ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಾಗು ಪ್ರತಿಭಟನಾ ಸಭೆ ನಡೆಸಿತು. ಡಾ. ಬಿ ಆರ್ ಅಂಬೆಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು, ಮೆರವಣಿಗೆಯ ಉದ್ದಕ್ಕೂ ಆರೋಗ್ಯ ಸಚಿವರೂ ಆಗಿರುವ ಉಸ್ತುವಾರಿ ಸಚಿವ […]

ನಕಲಿ ಪಾಸ್‌ಪೋರ್ಟ್ ಸೃಷ್ಟಿಸಿ, ವಿದೇಶಕ್ಕೆ ಕಳುಹಿಸುವ ವಂಚನಾ ಜಾಲವೊಂದನ್ನು ಬೇಧಿಸಿದ ಮಂಗಳೂರು ನಗರದ ಸಿ.ಎಸ್.ಬಿ. ಪೊಲೀಸರು

ಬೇರೊಬ್ಬರ ಗುರುತಿನ ದಾಖಲೆ ಪತ್ರ ಗಳನ್ನು ದುರುಪಯೋಗಪಡಿಸಿ, ನಕಲಿ ಪಾಸ್ ಪೋರ್ಟ್ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ನಿವಾಸಿ ಪ್ರೀತಾ ಡಿ ಸೋಜಾ, ಪ್ರೇಮ್ ಡಿ ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಎಸ್ ಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋಧ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೊಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. ಈ […]

ರಾಜ್ಯ

ವಚನಾನಂದ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ; ಪೋಕ್ಸೋ ಪ್ರಕರಣ ದಾಖಲು

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರ ವಿರುದ್ಧ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ತಾಯಿ ಮೇ 7ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ನೀಡಿದ್ದರು. ಘಟನೆ ನಡೆದ ಸ್ಥಳ ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಬರುವುದರಿಂದ, ಅಲ್ಲಿ ಮೊದಲು ‘ಜೀರೋ ಎಫ್‌ಐಆರ್’ ದಾಖಲಿಸಿ ನಂತರ ಹರಿಹರಕ್ಕೆ ಪ್ರಕರಣವನ್ನು ವರ್ಗಾಯಿಸಲಾಯಿತು. ಮೇ 8ರಂದು ಹರಿಹರ ಪೊಲೀಸರು ಪೋಕ್ಸೋ […]

ಸಿದ್ದು ಸಂದೇಶ ರಾಹುಲ್ ಕಿವಿಗೆ ತಲುಪಿತು; ಬಿಜೆಪಿ ವರಿಷ್ಟರ ಪ್ಲಾನು; ಆರೆಸ್ಸೆಸ್ ಕರ್ನಾಟಕದಲ್ಲಿ ರಂಗಪ್ರವೇಶ

ಕರ್ನಾಟಕದಲ್ಲಿ SIR ನಡೆದರೆ, ರಾಜ್ಯ ಕಾಂಗ್ರೆಸ್ 1994 ರ ಪರಿಸ್ಥಿತಿಗೆ ✍️. ಆರ್.ಟಿ.ವಿಠ್ಠಲಮೂರ್ತಿ ತೃಣಮೂಲ ಕಾಂಗ್ರೆಸ್ ನ ಅಧಿನಾಯಕಿ ಮಮತಾ ಬ್ಯಾನರ್ಜಿ ಕುಸಿದು ಬಿದ್ದ ರೀತಿಯಿಂದ ದಿಲ್ಲಿಯ ಕಾಂಗ್ರೆಸ್ ವರಿಷ್ಟರಿಗೆ ಚಿಂತೆ ಸುರುವಾಗಿದೆ. ಅಷ್ಟೇ ಅಲ್ಲ, ಈ ಚಿಂತೆಯ ಪರಿಣಾಮವಾಗಿ ಅವರೀಗ ಕರ್ನಾಟಕದ ಮೇಲೆ ಕಣ್ಣು ನೆಟ್ಟಿದ್ದಾರೆ. ಅಂದ ಹಾಗೆ ಪಶ್ಚಿಮ ಬಂಗಾಳವನ್ನು ಅಭೇದ್ಯ ಕೋಟೆಯನ್ನಾಗಿ ಮಾಡಿಕೊಂಡಿದ್ದ ಮಮತಾ ಬ್ಯಾನರ್ಜಿ ಇತ್ತೀಚಿನ ಚುನಾವಣೆಯಲ್ಲಿ ಕುಸಿದು ಬಿದ್ದರು. ಬಿಜೆಪಿಯ ಮಾರಕ ಧಾಳಿಯ ಎದುರು ಅವರ ತೃಣಮೂಲ ಕಾಂಗ್ರೆಸ್‌ ಪಕ್ಷ […]

ರಾಷ್ಟ್ರೀಯ

ಟೋಲ್ ಪ್ಲಾಜಾಗಳು ಸಂಪೂರ್ಣ ಕ್ಯಾನ್ಸಲ್; ‘ಮಲ್ಟಿ-ಲೇನ್ ಫ್ರೀ ಫ್ಲೋ’ (MLFF) ಎಂಬ ಆಧುನಿಕ ವ್ಯವಸ್ಥೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರು ಇನ್ನು ಮುಂದೆ ಟೋಲ್ ಪ್ಲಾಜಾಗಳ ಬಳಿ ವಾಹನ ನಿಲ್ಲಿಸಿ ಹಣ ಪಾವತಿಸುವ ದಿನಗಳು ಅಂತ್ಯವಾಗಲಿವೆ. ಕೇಂದ್ರ ರಸ್ತೆ ಸಾರಿಗೆ ಸಚಿವರು ದೇಶಾದ್ಯಂತ ಹೊಸ ತಂತ್ರಜ್ಞಾನ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಘೋಷಿಸಿದ್ದಾರೆ. 2026ರ ಅಂತ್ಯದೊಳಗೆ ಪ್ರಸ್ತುತ ಇರುವ ಭೌತಿಕ ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಗುರಿ ಸರ್ಕಾರ ಹೊಂದಿದೆ. ಈಗಿನ ಟೋಲ್ ಬೂತ್‌ಗಳ ಬದಲಿಗೆ ‘ಮಲ್ಟಿ-ಲೇನ್ ಫ್ರೀ ಫ್ಲೋ’ (MLFF) ಎಂಬ ಆಧುನಿಕ ವ್ಯವಸ್ಥೆ ಜಾರಿಗೆ ಬರಲಿದೆ. […]

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರಿಂದ ಮೇ 25, 26 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರ ಘೋಷಣೆ

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೌಕರರು ಮೇ 25 ಮತ್ತು 26 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋಷಿಸಿದ್ದಾರೆ. 1947 ರ ಕೈಗಾರಿಕಾ ವಿವಾದ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವರ್ಕ್‌ಮೆನ್ ವರ್ಗದ ನೌಕರರು ಆಂದೋಲನದಲ್ಲಿ ಭಾಗವಹಿಸುತ್ತಾರೆ ಎಂದು ಆಲ್ ಇಂಡಿಯಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರದ ಪರಿಣಾಮವಾಗಿ ಎಲ್ಲಾ ಶಾಖೆಗಳಲ್ಲಿ ಬ್ಯಾಂಕಿಂಗ್ ಕಾರ್ಯಾಚರಣೆಗಳು ಪರಿಣಾಮ ಬೀರುವ ಸಾಧ್ಯತೆಯಿದೆ, ಮುಷ್ಕರದ ಪರಿಣಾಮ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!