ಕರಾವಳಿ
ವೃದ್ಧೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಮಂಗಳೂರು ನಗರ ಪೊಲೀಸರು
ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 76 ವರ್ಷದ ವೃದ್ಧ ಮಹಿಳೆಯನ್ನು ಬೆದರಿಸಿ ದರೋಡೆ ನಡೆಸಿದ ಪ್ರಕರಣ ಆಗಸ್ಟ್ 3 ರಂದು ನಡೆದಿತ್ತು. ವೃದ್ಧ ಮಹಿಳೆ ಮನೆಯಲ್ಲಿದ್ದ ಸಂದರ್ಭ ಮಧ್ಯಾಹ್ನದ ಹೊತ್ತಿಗೆ ಮನೆಗೆ ಬಂದಿದ್ದ ಆಗುಂತಕರು ಏಕಾಏಕಿ ಮನೆಯ ಬಾಗಿಲನ್ನು ಬಡಿದಿದ್ದು ಈ ಸಂದರ್ಭ ಪರಿಚಯದವರು ಇರಬೇಕೆಂದು ಮನೆಯ ಬಾಗಿಲು ತೆರೆದ ಸಂದರ್ಭಮನೆಯ ಮೆಟ್ಟಿಲಿನ ಬಳಿ ಇಬ್ಬರು ವ್ಯಕ್ತಿಗಳು ನಿಂತುಕೊಂಡಿದ್ದು, ಮನೆ ಬಾಗಿಲನ್ನು ತೆಗೆದು ಅವರನ್ನು ವಿಚಾರಿಸುತ್ತಿದ್ದಾಗಲೇ ಮನೆ ಬಾಡಿಗೆಗೆ ಎಂದು ಮಾತನಾಡುತ್ತಾ ಆರೋಪಿಗಳು ಬಾಗಿಲನ್ನು ಬಲವಂತವಾಗಿ ದೂಡಿ, […]
ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಜೀವ ಬೆದರಿಕೆ ಪ್ರಕರಣ: ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತನಿದೆ 20 ವರ್ಷಗಳ ಕಠಿಣ ಸಜೆ ಹಾಗೂ ದಂಡ
ಮಂಗಳೂರು ತಾಲೂಕಿನ ಕುಂಜತ್ತಬೈಲು ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತ 2024ನೇ ಇಸವಿಯ ಫೆಬ್ರವರಿ ತಿಂಗಳಿನಿಂದ ನೊಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯ ಮನವೊಲಿಸಿ, ನೊಂದ ಅಪ್ರಾಪ್ತ ಬಾಲಕಿ ವಾಸವಾಗಿದ್ದ ಶಕ್ತಿ ನಗರದ ಮನೆಯಲ್ಲಿ 2024 ನೇ ಇಸವಿಯ ಸೆಪ್ಟೆಂಬರ್ ತಿಂಗಳಿನಲ್ಲಿ ಹಾಗೂ ಅಳಪೆ ಗ್ರಾಮದ ಕೆಂಬಾರು ಕೆ.ಇ.ಬಿ. ಮುಂಭಾಗವಿರುವ ಮನೆಯೊಂದಲ್ಲಿ ಹಲವಾರು ಬಾರಿ ಪದೇ ಪದೇ ಅತ್ಯಾಚಾರ ನಡೆಸಿದ್ದು, ಮಾತ್ರವಲ್ಲದೆ ಬಾಲಕಿ ಸ್ನಾನ ಗೃಹದಲ್ಲಿ ನಗ್ನ ಸ್ಥಿತಿಯಲ್ಲಿ ಸ್ನಾನ ಮಾಡುತ್ತಿರುವ ಸಮಯದಲ್ಲಿ ಆರೋಪಿ […]
ರಾಜ್ಯ
ವಿಜಯೇಂದ್ರ ಅವರ ರಿಯಲ್ ಪ್ರಾಬ್ಲಮ್ಮು; ಡಾ.ಮಹದೇವಪ್ಪ ಜಪಿಸಿದ ಮಂತ್ರ
✍️. ಆರ್.ಟಿ.ವಿಠ್ಠಲಮೂರ್ತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೆಲ ದಿನಗಳ ಹಿಂದೆ ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್.ಡಿ.ಕುಮಾತಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಉಭಯ ಪಕ್ಷಗಳ ಮಧ್ಯೆ ಸಮನ್ವಯ ಸಾಧಿಸುವ ಕುರಿತು ಉತ್ಸಾಹ ತೋರಿಸಿದ್ದಾರೆ. ‘ಸಾರ್, ಇದುವರೆಗೆ ಸಮನ್ವಯದ ಕೊರತೆಯಿಂದ ನಾವು ಒಗ್ಗೂಡಿ ಹೋರಾಟ ಮಾಡಲು ಸಾಧ್ಯವಾಗಿಲ್ಲ. ಆದರೆ ಇನ್ನು ಮುಂದೆ ಇಂತಹ ಸಮಸ್ಯೆ ಆಗಬಾರದು.ಹೀಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಕ್ಷಗಳು ಒಗ್ಗೂಡಿ ಹೋರಾಟ ನಡೆಸಬೇಕು. ಅಂದ ಹಾಗೆ ಇದುವರೆಗೆ […]
ಲಾಭಾಂಶ ನೀಡುವುದಾಗಿ ನಂಬಿಸಿ ನೂರಾರು ಜನರಿಗೆ ಲಕ್ಷಾಂತರ ರೂ. ವಂಚನೆ; ದಂಪತಿಗಳ ಬಂಧನ
ತಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ನೂರಾರು ಜನರಿಗೆ ಲಕ್ಷಾಂತರ ರೂ. ವಂಚಿಸಿದ್ದ ದಂಪತಿಯನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲದ ಕಿರಣ್ ಕುಮಾರ್ ಹಾಗೂ ಆರತಿ ಬಂಧಿತರಾಗಿದ್ದು, ತಪ್ಪಿಸಿಕೊಂಡಿರುವ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆದಿದೆ. ಚಿಕ್ಕಜಾಲದಲ್ಲಿ ‘ಕಾಳಿಕಾ ಎಂಟರ್ ಪ್ರೈಸಸ್’ ಹೆಸರಿನ ಸಂಸ್ಥೆಯನ್ನು ಸ್ಥಾಪಿಸಿ, ತಮ್ಮ ಕಂಪನಿ ಮೂಲಕ ಮನೆಯಲ್ಲೇ ಕುಳಿತು ಲಕ್ಷ ಲಕ್ಷ ಸಂಪಾದಿಸಬಹುದು ಎಂದು ದಂಪತಿ ಜಾಹೀರಾತು ಪ್ರಕಟಿಸಿದ್ದರು. ಅಲ್ಲದೆ ಈ ಬಗ್ಗೆ ಚಿಕ್ಕಜಾಲ ಹಾಗೂ […]
ರಾಷ್ಟ್ರೀಯ
ಪೂರ್ಣ ಹಣ ಪಾವತಿಸದಿದ್ದರೂ ನೋಂದಾವಣಿಯಾದ ಕ್ರಯ ಪತ್ರ ಅಸಿಂಧುವಾಗಲ್ಲ, ಕ್ರಯಪತ್ರವನ್ನೇ ಅನೂರ್ಜಿತಗೊಳಿಸುವಂತೆ ಕೋರಲು ಬರುವುದಿಲ್ಲ: ಸು. ಕೋ
ಕ್ರಯಪತ್ರವನ್ನು ನೋಂದಾಯಿಸುವ ಸಮಯದಲ್ಲಿ, ಖರೀದಿ ಮಾಡುವ ಸ್ವತ್ತಿನ ಮೌಲ್ಯದ ಸಂಪೂರ್ಣ ಮೊತ್ತವನ್ನು ಪಾವತಿಸಲೇಬೇಕು ಎಂದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸ್ವತ್ತನ್ನು ವರ್ಗಾಯಿಸಲು ಪಕ್ಷಗಾರರು ಬಯಸಿದಲ್ಲಿ, ಪಾವತಿಸಬೇಕಾದ ಒಟ್ಟು ಮೊತ್ತದಲ್ಲಿ ಒಂದು ಭಾಗ ಬಾಕಿ ಇದ್ದ ಹೊರತಾಗಿಯೂ, ದಸ್ತಾವೇಜು ನೋಂದಣಿ ಮತ್ತು ಕಾರ್ಯಗತಗೊಳಿಸುವ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆಯೇ ಮಾಲೀಕತ್ವದ ವರ್ಗಾವಣೆಯು ಪೂರ್ಣಗೊಳ್ಳುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಬಾಕಿ ಮೊತ್ತವನ್ನು ಪಾವತಿಸಿಲ್ಲ ಎಂದ ಮಾತ್ರಕ್ಕೆ ನೋಂದಣಿಯಾದ ಕ್ರಯಪತ್ರ ಅಸಿಂಧುವಾಗುವುದಿಲ್ಲ. ಇಂಥ ಸಂದರ್ಭಗಳಲ್ಲಿ, ಬಾಕಿ ಮೊತ್ತ ವಸೂಲಿಗಾಗಿ ಮಾರಾಟಗಾರರು ದಾವೆ ಹೂಡಬಹುದೇ […]
ಪಾಕಿಸ್ತಾನದ ‘ಹನಿ ಟ್ರ್ಯಾಪ್’ ಜಾಲಕ್ಕೆ ಬಿದ್ದು, ದೇಶದ ರಕ್ಷಣಾ ಮಾಹಿತಿ ಹಂಚಿಕೊಂಡ ಭಾರತೀಯ ವಾಯುಸೇನೆ IAF ಅಧಿಕಾರಿ
ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಬ್ಬರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಭಾರತೀಯ ವಾಯುಪಡೆಯ ರಕ್ಷಣಾ ಸಂಬಂಧಿತ ಅತ್ಯಂತ ಸೂಕ್ಷ್ಮ ಹಾಗೂ ಕಾರ್ಯತಂತ್ರದ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆ(IAF)ಯ ವಿಂಗ್ ಕಮಾಂಡರ್ ಹುದ್ದೆಯ ಅಧಿಕಾರಿಯೊಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಧಿಕೃತ ರಹಸ್ಯ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೇ 30 ರಂದು ಅವರನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡ ನಂತರ ಜುಲೈ 30 ರಂದು ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ […]
ಅಂತಾರಾಷ್ಟ್ರೀಯ
ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ
ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
