ಕರಾವಳಿ
ಉಪ್ಪಿನಂಗಡಿ: ಅಕ್ರಮವಾಗಿ ಶೇಖರಿಸಿಟ್ಟಿದ್ದ ಡೀಸೆಲ್ ಪತ್ತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಳ್ತಂಗಡಿ ಉಪ-ವಿಭಾಗದ ಡಿವೈಎಸ್ಪಿ ರೋಹಿಣಿ. ಸಿ. ಕೆ ರವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ, ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟಿದ ಡೀಸೆಲನ್ನು ಉಪ್ಪಿನಂಗಡಿ ವೃತ್ತ ನಿರೀಕ್ಷರು ಮತ್ತು ಉಪ್ಪಿನಂಗಡಿ ಠಾಣಾಧಿಕಾರಿಗಳು ಸ್ಥಳಕ್ಕೆ ತೆರಳಿ, ಜಗದೀಶ್ ಎಂಬಾತನ ಮನೆಯ ಸಮೀಪದ ಶೆಡ್ ತಪಾಸಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ ಸರಿ-ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಗಳು ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ […]
ಬಂಟ್ವಾಳ: ಚಿನ್ನಾಭರಣ ಕಳವು ಪ್ರಕರಣ: ಅಂತರ್ ರಾಜ್ಯ ಕಳ್ಳನ ಬಂಧನ, 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ವಶ.
ಬಂಟ್ವಾಳ: ಬಸ್ಸಿನಲ್ಲಿಟ್ಟಿದ್ದ ಬ್ಯಾಗ್ ನಿಂದ ಸರಿ ಸುಮಾರು 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ. ಕ್ರ ಸಂ:132/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತನಾದ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ ಎಂಬಾತನನ್ನು ಬಂಟ್ವಾಳ ಪೊಲೀಸರು ದಸ್ತಗಿರಿ ಮಾಡಿ, ಆರೋಪಿತನಿಂದ ಕಳ್ಳತನ ಮಾಡಿದ ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ-ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ […]
ರಾಜ್ಯ
ಮುತ್ಯಾನಿಗಿ ಸದ್ಯಕ್ಕೆ ಜೈಲೇ ಗತಿ; ಮುತ್ಯಾ ಮತ್ತು ಆತನ ಭಕ್ತರಿಗೆ ನ್ಯಾಯಾಲಯದ ತೀರ್ಪು ಶಾಕ್ ನೀಡಿದೆ
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದ ತೀರ್ಪು ನಿರಾಶೆ ತಂದಿದೆ. ಕಳೆದ ಕೆಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಮುತ್ಯಾ, ತನ್ನ ಬಿಡುಗಡೆಗಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಮುತ್ಯಾ ಸದ್ಯಕ್ಕೆ ಜೈಲಿನಲ್ಲೇ ಉಳಿಯುವಂತಾಗಿದೆ.ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ […]
ದೇವೇಗೌಡ್ರು ಮತ್ತೆ ರಾಜ್ಯಸಭೆಗೆ ಹೋಗುತ್ತಾರೆ. ಕೈಗೆ ಯಡಿಯೂರಪ್ಪ ಟಾನಿಕ್?
ರಾಜೀನಾಮೆಗೆ ರೆಡಿ ಅನ್ನಲಿದ್ದಾರೆ; ಸಿದ್ದರಾಮಯ್ಯ ಪಾಳಯದಿಂದ ಟಫ್ ಸಂದೇಶಗಳು ✍️. ಆರ್.ಟಿ.ವಿಠ್ಠಲಮೂರ್ತಿ ದಿಲ್ಲಿಯ ಬಿಜೆಪಿ ಪಾಳಯದಿಂದ ಕೇಳಿ ಬಂದ ಸುದ್ದಿ ರಾಜ್ಯ ಬಿಜೆಪಿಯ ನಾಯಕರಲ್ಲಿ ವಿಸ್ಮಯ ಮೂಡಿಸಿದೆ. ಅವರಿಗೆ ತಲುಪಿರುವ ಸುದ್ದಿಯ ಪ್ರಕಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟರಾದ ಹೆಚ್.ಡಿ.ದೇವೇಗೌಡರು ಪುನ: ರಾಜ್ಯಸಭೆಗೆ ಹೋಗಲಿದ್ದಾರೆ.ಹೀಗೆ ದೇವೇಗೌಡರು ಮರಳಿ ರಾಜ್ಯಸಭೆಗೆ ಹೋದರೆ ರಾಜ್ಯ ಬಿಜೆಪಿ ನಾಯಕರಿಗೇಕೆ ವಿಸ್ಮಯ ಎಂದರೆ ಅವರನ್ನು ಮರಳಿ ರಾಜ್ಯಸಭೆಗೆ ಕಳಿಸುವ ವಿಷಯದಲ್ಲಿ ಖುದ್ದು ನರೇಂದ್ರ ಮೋದಿಯವರೇ ಉತ್ಸುಕತೆ ತೋರಿಸಿರುವುದು. ಈ ವರ್ಷದ ಜೂನ್ ಹೊತ್ತಿಗೆ […]
ರಾಷ್ಟ್ರೀಯ
ರಿಸರ್ವ್ ಬ್ಯಾಂಕ್ 2026 ರ ಕರಡು ತಿದ್ದುಪಡಿ; ಸೈಬರ್ ವಂಚಕರಿಗೆ ಇನ್ನು ಸುಲಭವಲ್ಲ. RBI ಹೊಸ ರೂಲ್ಸ್
ರಿಸರ್ವ್ ಬ್ಯಾಂಕ್ 2026 ರ ಕರಡು ಮೂರನೇ ಹೊಸ ತಿದ್ದುಪಡಿ ನಿರ್ದೇಶನಗಳನ್ನು ಬಿಡುಗಡೆ ಮಾಡಿದೆ, ಇದು ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ವಹಿವಾಟುಗಳಲ್ಲಿ ವಂಚನೆಯನ್ನು ಎದುರಿಸುತ್ತಿರುವ ಗ್ರಾಹಕರಿಗೆ ಬಲವಾದ ಸುರಕ್ಷತಾ ಕ್ರಮಗಳನ್ನು ಪ್ರಸ್ತಾಪಿಸುತ್ತದೆ. ಇದು ಪ್ರಾಥಮಿಕವಾಗಿ ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಡೆಬಿಟ್, ಕ್ರೆಡಿಟ್ ಕಾರ್ಡ್ ವಹಿವಾಟುಗಳು ಮತ್ತು ATM ವಹಿವಾಟುಗಳು ಸೇರಿದಂತೆ ಡಿಜಿಟಲ್ ಬ್ಯಾಂಕಿಂಗ್ ವಹಿವಾಟುಗಳಲ್ಲಿನ ವಂಚನೆಯಿಂದ ಬ್ಯಾಂಕ್ ಗ್ರಾಹಕರನ್ನು ರಕ್ಷಿಸುತ್ತದೆ. ಕರಡು ನಿರ್ದೇಶನಗಳು ಜುಲೈ ಒಂದು 2026 ಅಥವಾ ನಂತರ ನಡೆಸಿದ ವಹಿವಾಟುಗಳಿಗೆ ಅನ್ವಯಿಸುತ್ತವೆ. ಸಣ್ಣ ಮಟ್ಟದ […]
ನರೇಂದ್ರ ಮೋದಿಯವರು ಕಟ್ಟಿರುವ ಬಿಜೆಪಿ ಕೋಟೆಗೆ ಮುಂದಿನ ಅಧಿಪತಿ ಯಾರು.? ನಮೋ ಸಾಮ್ರಾಜ್ಯದ ಉತ್ತರಾಧಿಕಾರಿ ಪಟ್ಟ ಯಾರಿಗೆ.?
ನರೇಂದ್ರ ಮೋದಿಯವರು ಕಟ್ಟಿರುವ ಬಿಜೆಪಿ ಕೋಟೆಗೆ ಮುಂದಿನ ಅಧಿಪತಿ ಯಾರು.? ನಮೋ ಸಾಮ್ರಾಜ್ಯದ ಉತ್ತರಾಧಿಕಾರಿ ಪಟ್ಟ ಯಾರಿಗೆ ಸಿಗಲಿದೆ.? ಎಂಬ ಚರ್ಚೆ ಈಗ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ. ಮೋದಿ ಉತ್ತರಾಧಿಕಾರಿಯ ರೇಸ್ನಲ್ಲಿ ಅತೀ ಹೆಚ್ಚು ಕೇಳಿ ಬರುತ್ತಿರುವ ಹೆಸರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರದ್ದು. ನಂತರ ಬಿಜೆಪಿಯ ಸಾರಥ್ಯ ವಹಿಸುವ ಸಾಮರ್ಥ್ಯವಿರುವ ಮತ್ತೊಬ್ಬ ಪ್ರಭಾವಿ ನಾಯಕ ಅಮಿತ್ ಶಾ. ಮೋದಿಯವರ ‘ಬಲಗೈ ಬಂಟ’ ಎಂದೇ ಕರೆಸಿಕೊಳ್ಳುವ ಅಮಿತ್ ಶಾ ಕೂಡ ರೇಸ್ ನಲ್ಲಿ ಇದ್ದಾರೆ. […]
ಅಂತಾರಾಷ್ಟ್ರೀಯ
ದುಬೈ: ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ನೆರವು, ತುರ್ತು ಸಹಕಾರಕ್ಕಾಗಿ ಸರ್ಕಾರಕ್ಕೆ ಮನವಿ.
ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವು, ಯುಎಇಯಲ್ಲಿ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಲು ಹಾಗೂ ಇಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಿಸಲು ಮತ್ತು ಕರ್ನಾಟಕ ಸರ್ಕಾರದೊಂದಿಗೆ ಹಂಚಿಕೊಳ್ಳಲು ಝೂಮ್ ಸಭೆಯನ್ನು ಆಯೋಜಿಸಿತು. ಯುಎಇಯಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಸುರಕ್ಷಿತವಾಗಿದ್ದು, ಇಲ್ಲಿನ ಸರ್ಕಾರ ಎಲ್ಲ ಅನಿವಾಸಿಗಳ ಸುರಕ್ಷತೆಯನ್ನು ಸಮರ್ಪಕವಾಗಿ ಕಾಪಾಡುತ್ತಿದೆ, ಯಾವುದೇ ಆತಂಕಕ್ಕೆ ಒಳಗಾಗದೆ, ಅನಧಿಕೃತ ಅಥವಾ ಅಪಪ್ರಚಾರದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಳ್ಳಬಾರದು […]
ಪವಿತ್ರ ರಂಜಾನ್ ತಿಂಗಳಲ್ಲಿ ಕರುಣೆ ತೋರಿದ ಆಡಳಿತಗಾರರು: ಶಾರ್ಜಾ, ಅಜ್ಮಾನ್ ಜೈಲಿನ 872 ಕೈದಿಗಳಿಗೆ ಬಿಡುಗಡೆ ಭಾಗ್ಯ
ರಂಝಾನ್ ತಿಂಗಳು ಅನ್ನುವುದು ಕ್ಷಮೆಯ ತಿಂಗಳು. ದೇವನ ಸಂಪ್ರೀತಿ ಪಡೆಯಲು ಹಪಹಪಿಸುವ ಪಾವನ ಮಾಸವಾಗಿದೆ ರಂಝಾನ್ ತಿಂಗಳು. ಇಂತಹ ಪವಿತ್ರ ಮಾಸದಲ್ಲಿ ಶಾರ್ಜಾ ಮತ್ತು ಅಜ್ಮಾನ್ ಜೈಲಿನಲ್ಲಿರುವ ಖೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಉತ್ತಮ ಸನ್ನಡತೆ, ಸ್ವಭಾವ ಹೊಂದಿರುವ ವಿವಿಧ ಅಪರಾಧಗಳಿಗೆ ಜೈಲು ಶಿಕ್ಷೆ ಅನುಭವಿಸುತ್ತಿರುವ 872 ಖೈದಿಗಳಿಗೆ ಕ್ಷಮಾದಾನ ದೊರೆತಿದೆ. ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಶಾರ್ಜಾ ಆಡಳಿತಗಾರ ಶೇಖ್ ಡಾ. ಸುಲ್ತಾನ್ ಬಿನ್ ಮೊಹಮ್ಮದ್ ಅಲ್ ಖಾಸಿಮಿ ಅವರು ಶಾರ್ಜಾದಲ್ಲಿ 738 ಕೈದಿಗಳನ್ನು ಬಿಡುಗಡೆ […]
