ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹಮದ್ ಮುಸ್ಲಿಯಾರ್ ವಫಾತ್

ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಯಾಗಿದ್ದ ತ್ವಾಖಾ ಅಹಮದ್ ಮುಸ್ಲಿಯಾರ್ ಇಂದು ಬೆಳಿಗ್ಗೆ ಮಂಗಳೂರಿನ ಖಾಸಾಗಿ ಅಸ್ಪತ್ರೆಯಲ್ಲಿ ವಫಾತಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಮೊಹಲ್ಲಾಗಳ ಖಾಝಿಯಾಗಿ ದೀರ್ಘ ಕಾಲದಿಂದ ಸೇವೆ ಸಲ್ಲಿಸಿದಾದರು. ತ್ವಾಕಾ ಉಸ್ತಾದ್ ಎಂದು ಜನಾನುರಾಯಿಯಾಗಿದ್ದರು. ಜಿಲ್ಲೆಯ ಖಾಝಿಯಾದ ನಂತರ ಸಮಸ್ತ ಪರ ಸಂಘಟನೆಗೆ ಜೀವ ತುಂಬಿದ್ದರು. ಅಗಾಧ ಪಾಂಡಿತ್ಯ ಹೊಂದಿದ್ದ ಅವರು ದಾರುನ್ನೂರು ಎಜ್ಯುಕೇಶನ್ ಸೆಂಟರ್ ಸ್ಥಾಪಕರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದರು. ತ್ವಾಖಾ […]

ಸಿಪಿಐಎಂ ಸದಸ್ಯ ಕಾಂಗ್ರೆಸ್ ಸೇರ್ಪಡೆ ಎಂಬ ಪ್ರಕಟಣೆ ಶುದ್ಧ ಸುಳ್ಳು; ಇನಾಯತ್ ಅಲಿಯವರದ್ದು ಮಕ್ಕಳಾಟಿಕೆಯ ರಾಜಕಾರಣ: ಸಿಪಿಐಎಂ ವ್ಯಂಗ್ಯ

’25 ವರ್ಷಗಳಿಂದ ಸಿಪಿಐಎಂ ನಲ್ಲಿದ್ದ ಜಯ ಪರಾರಿ ಎಂಬವರು ಗುರುಪುರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು” ಎಂಬ ಮಾಧ್ಯಮ ಪ್ರಕಟನೆಗೆ ಸಿಪಿಐಎಂ ಗುರುಪುರ ವಲಯ ಸಮಿತಿ ಅಚ್ಚರಿ ವ್ಯಕ್ತಪಡಿಸಿದೆ. ಇದು ಕಾಂಗ್ರೆಸ್ ಮುಖಂಡ ಇನಾಯತ್ ಅಲಿಯವರ ಮಕ್ಕಳಾಟಿಕೆ ರಾಜಕಾರಣಕ್ಕೆ ನಿದರ್ಶನ ಎಂದು ವ್ಯಂಗ್ಯವಾಡಿದೆ. ಜಯ ಪರಾರಿ ಎಂಬ ಹೆಸರಿನ ಯಾವುದೇ ವ್ಯಕ್ತಿ ಸಿಪಿಐಎಂ ಪಕ್ಷದ ಸದಸ್ಯರಾಗಿರಲಿಲ್ಲ, ಕಳೆದ ಎರಡೂವರೆ ದಶಕದ ಪಕ್ಷದ ಸದಸ್ಯರ ಪಟ್ಟಿಯಲ್ಲೂ ಅಂತಹ ಹೆಸರಿಲ್ಲ. ಸಿಪಿಐಎಂ ಪಕ್ಷದ ಸದಸ್ಯತ್ವ ಪಡೆಯಲು ಅದರದ್ದೇ […]

ರಾಜ್ಯ

ಕಿರುತೆರೆ ನಟಿಯ ವಂಚನೆ ಬಯಲು; ಶ್ರೀಮಂತ ಯುವಕರೇ ಈಕೆಯ ಟಾರ್ಗೆಟ್, ಹನಿಟ್ರ್ಯಾಪ್ ಶಂಕೆ, ನಟಿಯ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಉದ್ಯಮಿಗಳನ್ನು ಸಂಪರ್ಕಿಸಿ, ಆಭರಣ ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈಕೆಯ ಮಾಯದ ಮಾತುಗಳಿಗೆ ಮರುಳಾಗಿ ಲಕ್ಷ ರೂಪಾಯಿ ಕಳೆದುಕೊಂಡ ಯುವಕನೊಬ್ಬ ನೀಡಿದ ದೂರಿನ ಮೇರೆಗೆ ಈಕೆಯನ್ನು ಪೊಲೀಸರು ಬಂಧಿಸಿರುತ್ತಾರೆ. ಈಕೆ ಚಾಲಾಕಿ ವಂಚಕಿ. ತುಂಬಾ ಚಾಣಾಕ್ಷತನದಿಂದ ವಂಚನೆ ಮಾಡುತ್ತಿದ್ದಳು. ಇನ್‌ಸ್ಟಾಗ್ರಾಮ್, ಫೇಸ್‌ಬುಕ್‌ಗಳ ಮೂಲಕ ತಾನು ಸೀರಿಯಲ್ ನಟಿ ಎಂದು ಶ್ರೀಮಂತ ಯುವಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಳು. ಚಾಟಿಂಗ್ ಮೂಲಕ […]

ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ಮುತ್ತಜ್ಜನ ಕಾಲದ ಅಂತರಾಜ್ಯ ಸೇತುವೆಗಳು.

ತಡೆಬೇಲಿ ಹಾಗೂ ಹೊಸ ಸೇತುವೆಗೆ ಆಗ್ರಹಿಸಿ ಪೆರುವಾಯಿ ನಾಗರಿಕರಿಂದ ಪ್ರತಿಭಟನೆ ಪೆರುವಾಯಿ ಜಂಕ್ಷನ್ ಬಳಿಯಿಂದ 500 ಮೀಟರ್ ದೂರದಲ್ಲಿರುವ ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಪೇರಡ್ಕದಲ್ಲಿರುವ ಸೇತುವೆ ಹಾಗೂ ಪೆರುವಾಯಿ ಜಂಕ್ಷನ್ ನಿಂದ 150 ಮೀಟರ್ ದೂರದಲ್ಲಿರುವ ಪೆರುವಾಯಿ-ಮಾಣಿಲ ರಸ್ತೆಯಲ್ಲಿರುವ ಸೇತುವೆ ಈ ಭಾಗದ ಜನರ ಜೀವನಾಡಿಯಾಗಿದೆ. ಪ್ರತಿದಿನ ಸಾವಿರಾರು ವಾಹನಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು, ಕೃಷಿಕರು ಹಾಗೂ ಸಾರ್ವಜನಿಕರು ಈ ಮಾರ್ಗಗಳನ್ನು ಅವಲಂಬಿಸಿಕೊಂಡಿದ್ದಾರೆ. ಆದರೆ ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಈ ಸೇತುವೆಗಳು ಇಂದು […]

ರಾಷ್ಟ್ರೀಯ

ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ

ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು […]

ಆಭರಣ ವ್ಯಾಪಾರಿಯೊಬ್ಬರು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3.26 ಕೆ.ಜಿ ತೂಕದ ಬೆಳ್ಳಿಯ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದಾರೆ

ಅಯೋಧ್ಯೆಯಲ್ಲಿ ನಿರ್ಮಾಣವಾದ ಶ್ರೀರಾಮ ಮಂದಿರದಲ್ಲಿ ಕಾಣಿಕೆ ಹಣ ನಾಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಲಖನೌ ಮೂಲದ ಆಭರಣ ವ್ಯಾಪಾರಿಯೊಬ್ಬರು ತಾವು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3 ಕೆ.ಜಿ ತೂಕದ ಬೆಳ್ಳಿಯ ದೀಪದ ಸದ್ಯದ ಸ್ಥಿತಿ ಈಗ ಏನಾಗಿದೆಯೋ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಬೆಳ್ಳಿ ಗಟ್ಟಿ ಮತ್ತು ಆಭರಣ ವ್ಯಾಪಾರಿಗಳ ಸಂಘದ ಉತ್ತರ ಭಾರತ ಘಟಕದ ಅಧ್ಯ‌ಕ್ಷ ಅನುರಾಗ್ ರಸ್ತೋಗಿ ಈ ಆರೋಪ ಮಾಡಿದ್ದಾರೆ. ಅಯೋಧ್ಯೆಯಲ್ಲಿ 2020ರಲ್ಲಿ ನಡೆದ ಭೂಮಿಪೂಜೆಗೆ ಮುಂಚಿತವಾಗಿ ಸಂಘದ ‘ಐಬಿಜೆಎ’ ವತಿಯಿಂದ ದಾನ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!