ಕರಾವಳಿ
ಸರಕಾರಿ ಆಸ್ಪತ್ರೆ ಖಾಸಗೀಕರಣ ವಿರುದ್ಧದ ಹೋರಾಟಕ್ಕೆ ಬಜ್ಪೆಯಲ್ಲಿ ಸಿದ್ದತಾ ಸಭೆ. ಜುಲೈ 7 ರಂದು ಮಾನವ ಸರಪಳಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ರದ್ದುಗೊಳಿಸಬೇಕು, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಎಂಬ ಬೇಡಿಕೆಯ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ಆಸ್ಪತ್ರೆಗಳ ಮುಂಭಾಗ ಹೋರಾಟ, ಅಭಿಯಾನ ನಡೆಯುತ್ತಿದೆ. ಅದರ ಭಾಗವಾಗಿ ಬಜ್ಪೆ ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಸುವ ಕುರಿತು ಇಂದು ದಲಿತ ಸಂಘರ್ಷ ಸಮಿತಿಯ ಮುಂದಾಳತ್ವದಲ್ಲಿ “ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ” ಯ ಸಭೆ ನಡೆಯಿತು. ಸ್ಥಳೀಯ ಸಂಘಸಂಸ್ಥೆಗಳು, ಸಮಾನ ಮನಸ್ಕರು ಸಭೆಯಲ್ಲಿ ಭಾಗವಹಿಸಿದರು. ಮೇಲ್ಕಂಡ ಬೇಡಿಕೆಯ […]
ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಕಳ ನಿವಾಸಿ ಪ್ರಸಾದ್ ಬಂಧನ
ಎಲ್.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಏರ್ಲಂಪಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅ.ಕ್ರ 289/2016 ಕಲಂ 379 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿ ಪ್ರಸಾದ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಪ್ರಕರಣವನ್ನು ಎಲ್.ಪಿ.ಸಿ ಪ್ರಕರಣವಾಗಿ ಪರಿವರ್ತಿಸಿತ್ತು. ಈತನ ವಿರುದ್ಧ ಹಿರಿಯಡ್ಕ, ಕೋಣಾಜೆ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಮಂಗಳೂರು […]
ರಾಜ್ಯ
ರಾಜ್ಯದಲ್ಲಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ; ಸರ್ಕಾರ ಮಾರ್ಗಸೂಚಿ ಪ್ರಕಟ
ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಸಾಮಾನ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇಂಧನ ಇಲಾಖೆಯ ಅಪರ ಕಾರ್ಯದರ್ಶಿ ಈ ಕುರಿತು ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪಾಲಿಸಬೇಕಾದ ಕಾರ್ಯವಿಧಾನಗಳ ಆದೇಶವನ್ನು ರವಾನಿಸಿದ್ದಾರೆ. ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡು, ಈಗಾಗಲೇ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ವಸತಿ ಕಟ್ಟಡಗಳ ವಿವರಗಳನ್ನು ವಿದ್ಯುತ್ ಇಲಾಖೆ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ವಿದ್ಯುತ್ […]
ಕಿರುತೆರೆ ನಟಿಯ ವಂಚನೆ ಬಯಲು; ಶ್ರೀಮಂತ ಯುವಕರೇ ಈಕೆಯ ಟಾರ್ಗೆಟ್, ಹನಿಟ್ರ್ಯಾಪ್ ಶಂಕೆ, ನಟಿಯ ಬಂಧನ
ಸಾಮಾಜಿಕ ಜಾಲತಾಣಗಳ ಮೂಲಕ ಉದ್ಯಮಿಗಳನ್ನು ಸಂಪರ್ಕಿಸಿ, ಆಭರಣ ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈಕೆಯ ಮಾಯದ ಮಾತುಗಳಿಗೆ ಮರುಳಾಗಿ ಲಕ್ಷ ರೂಪಾಯಿ ಕಳೆದುಕೊಂಡ ಯುವಕನೊಬ್ಬ ನೀಡಿದ ದೂರಿನ ಮೇರೆಗೆ ಈಕೆಯನ್ನು ಪೊಲೀಸರು ಬಂಧಿಸಿರುತ್ತಾರೆ. ಈಕೆ ಚಾಲಾಕಿ ವಂಚಕಿ. ತುಂಬಾ ಚಾಣಾಕ್ಷತನದಿಂದ ವಂಚನೆ ಮಾಡುತ್ತಿದ್ದಳು. ಇನ್ಸ್ಟಾಗ್ರಾಮ್, ಫೇಸ್ಬುಕ್ಗಳ ಮೂಲಕ ತಾನು ಸೀರಿಯಲ್ ನಟಿ ಎಂದು ಶ್ರೀಮಂತ ಯುವಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಳು. ಚಾಟಿಂಗ್ ಮೂಲಕ […]
ರಾಷ್ಟ್ರೀಯ
ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ
ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು […]
ಆಭರಣ ವ್ಯಾಪಾರಿಯೊಬ್ಬರು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3.26 ಕೆ.ಜಿ ತೂಕದ ಬೆಳ್ಳಿಯ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದಾರೆ
ಅಯೋಧ್ಯೆಯಲ್ಲಿ ನಿರ್ಮಾಣವಾದ ಶ್ರೀರಾಮ ಮಂದಿರದಲ್ಲಿ ಕಾಣಿಕೆ ಹಣ ನಾಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಲಖನೌ ಮೂಲದ ಆಭರಣ ವ್ಯಾಪಾರಿಯೊಬ್ಬರು ತಾವು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3 ಕೆ.ಜಿ ತೂಕದ ಬೆಳ್ಳಿಯ ದೀಪದ ಸದ್ಯದ ಸ್ಥಿತಿ ಈಗ ಏನಾಗಿದೆಯೋ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಬೆಳ್ಳಿ ಗಟ್ಟಿ ಮತ್ತು ಆಭರಣ ವ್ಯಾಪಾರಿಗಳ ಸಂಘದ ಉತ್ತರ ಭಾರತ ಘಟಕದ ಅಧ್ಯಕ್ಷ ಅನುರಾಗ್ ರಸ್ತೋಗಿ ಈ ಆರೋಪ ಮಾಡಿದ್ದಾರೆ. ಅಯೋಧ್ಯೆಯಲ್ಲಿ 2020ರಲ್ಲಿ ನಡೆದ ಭೂಮಿಪೂಜೆಗೆ ಮುಂಚಿತವಾಗಿ ಸಂಘದ ‘ಐಬಿಜೆಎ’ ವತಿಯಿಂದ ದಾನ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
