ಕರಾವಳಿ
ಅಕ್ರಮ ಗೋಹತ್ಯಾ ಪ್ರಕರಣ: ಮನೆ, ಕೊಟ್ಟಿಗೆ, ಕೃತ್ಯ ನಡೆದ ಸ್ಥಳದ ಜಪ್ತಿ
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಕ್ರಮ ಗೋಹತ್ಯಾ ಪ್ರಕರಣದ ಅಪರಾಧ ಸಂಖ್ಯೆ: 68/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿಯಲ್ಲಿ ಅಕ್ರಮ ಗೋಹತ್ಯೆಯ ಕೃತ್ಯ ನಡೆದ ಸ್ಥಳವಾದ ಬಂಟ್ವಾಳ, ಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಎಂಬಲ್ಲಿರುವ ಆರೋಪಿ ಮುಸ್ತಫಾ ಎಂಬವರ ಮನೆ ಹಾಗೂ ದನದ ಕೊಟ್ಟಿಗೆಗಳನ್ನು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020’ ರಂತೆ ಪೊಲೀಸರು ಜಪ್ತಿ ಮಾಡಿ, ಮುಂದಿನ ಕ್ರಮಕ್ಕಾಗಿ ಮಾನ್ಯ ಉಪ ವಿಭಾಗೀಯ ದಂಡಾಧಿಕಾರಿಗಳು, […]
ಮಂಗಳೂರು: ಬಜಪೆಯ ಪಟಾಕಿ ಅಂಗಡಿಗೆ ನುಗ್ಗಿ, ದಾಂಧಲೆಗೈದು ಹಫ್ತಾ ವಸೂಲಿ ಪ್ರಕರಣ; KCOCA ಪ್ರಕರಣದ ಬಂಧಿತ ಆರೋಪಿಗಳಿಗೆ ಜಾಮೀನು
ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪಟಾಕಿ ಅಂಗಡಿಗೆ ನುಗ್ಗಿ, ದಾಂಧಲೆಗೈದ ಪ್ರಕರಣದಲ್ಲಿ ದಾಖಲಾಗಿದ್ದ KCOCA ಪ್ರಕರಣದ ಆರೋಪಿಗಳಾದ, ಪ್ರಶಾಂತ್ @ ಪಚ್ಚು, ಗಣೇಶ್ @ ಗಣಿ, ಅಶ್ವಿತ್ ಎಂಬವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ KCOCA ವಿಶೇಷ ನ್ಯಾಯಾಲಯ, ಮೈಸೂರು, ಈ ಮೂರೂ ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ದಿನಾಂಕ 22-10-2025 ರಂದು ಸಂಜೆ ಸುಮಾರು 4:00ರ ಸಮಯಕ್ಕೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜ್ಪೆ ಮಾರ್ಕೆಟ್ ಬಳಿ ಇರುವ ದಾಮೋದರ್ ಎಂಬವರ […]
ರಾಜ್ಯ
ಟೇಕ್ ಆಫ್ ಆಗುತ್ತಿದೆ ‘ಡಿಕೆ’ ಫ್ಲೈಟ್; ರಾಹುಲ್ ಗಾಂಧಿ ಚೀಟಿ ರಹಸ್ಯ.!, ಅಹಿಂದ ಪಿಲ್ಲರುಗಳೇ ಇಲ್ಲ
ಸಂಪುಟಕ್ಕೆ ಸೇರುವವರು ಯಾರು?; ಸ್ಪೀಕರ್ ಹುದ್ದೆಗೆ ಹೆಚ್ಕೆ ಇಲ್ಲವೇ ದಿನೇಶ್? ✍️.ಅರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದಿದ್ದ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಒಂದು ಚೀಟಿ ಹೊರತೆಗೆದರಂತೆ. ಅವರೇನು ಮಾಡುತ್ತಾರೆ ಅಂತ ಮುಖ್ಯಮಂತ್ರಿಗಳು ನೋಡುತ್ತಿದ್ದಂತೆಯೇ ಅವರ ಕೈಗೆ ರಾಹುಲ್ ಗಾಂಧಿ ಈ ಚೀಟಿಯನ್ನು ಕೊಟ್ಟಿದ್ದಾರೆ. ಅವರು ಕೊಟ್ಟ ಚೀಟಿಯನ್ನು ಡಿ.ಕೆ.ಶಿವಕುಮಾರ್ ಅವರು ಬಿಚ್ಚಿ ನೋಡಿದರೆ ಅದರಲ್ಲಿ ಕೃಷ್ಣ ಭೈರೇಗೌಡರ ಹೆಸರು ಕಾಣಿಸಿದೆ.ಅದನ್ನು ಅವರು ನೋಡುತ್ತಿದ್ದಂತೆಯೇ ರಾಹುಲ್ ಗಾಂಧಿ […]
ಕೋಕಾ ಪ್ರಕರಣ: ಬಂಧಿತ ಆರೋಪಿಗಳಿಗೆ ಮೈಸೂರಿನ KCOCA ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು
ಕೋಕಾ ಪ್ರಕರಣದಲ್ಲಿ ಬಂದಿತರಾಗಿದ್ದ ಶ್ಯಾಮ್ ಸುಂದರ್ ಶೆಟ್ಟಿ, ಸುವಿನ್ ಕಾಂಚನ್ @ ಮುನ್ನ ಹಾಗೂ ಅಕ್ಷಯ್ ಎಂಬುವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಮೈಸೂರಿನ KCOCA ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ದಿನಾಂಕ 01-01-2026 ರಂದು ಸಂಜೆ ಸುಮಾರು 5:30ರ ಸಮಯಕ್ಕೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಮಂತೂರು ಗ್ರಾಮದ ಅಂಗಾರಗುಡ್ಡೆ ಎಂಬಲ್ಲಿ ಸಹಜುದ್ದೀನ್ ಆತನ ತಂದೆಯೊಂದಿಗೆ ಜಗ್ಗು ಶೆಟ್ಟಿ ಎಂಬವರ ಕೊಟ್ಟಿಗೆಯಲ್ಲಿ ಸಾಕುತ್ತಿದ್ದ ಕಂಬಳದ ಕೋಣಗಳ ಚಕಾರಿ ಮಾಡುತ್ತಿರುವ […]
ರಾಷ್ಟ್ರೀಯ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ ಆರರಂದು ನೀಟ್ ಪರೀಕ್ಷೆ ಅವ್ಯವಸ್ಥೆ ವಿರುದ್ದ CJP ಯಿಂದ ಪ್ರತಿಭಟನೆ
ದೆಹಲಿ: ಪರೀಕ್ಷಾ ಸಂಬಂಧಿತ ಲೋಪದೋಷ, ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ 6 ರಂದು ಭಾರತಕ್ಕೆ ಮರಳುವುದಾಗಿ ಹಾಗೂ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕ ಅಭಿಜೀತ್ ದಿಪ್ಕೆ ಸೋಮವಾರ ಘೋಷಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪರೀಕ್ಷಾ ಸಂಬಂಧಿತ ಗೊಂದಲಗಳು ಮತ್ತು ವಿವಾದಗಳು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿವೆ ಮತ್ತು ಸರ್ಕಾರವು ಇದಕ್ಕೆ ಹೊಣೆಗಾರಿಕೆಯನ್ನು ಹೊರಬೇಕು ಎಂದು ಹೇಳುತ್ತಾ, ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಈ ಅಭಿಯಾನದಲ್ಲಿ […]
ರೆಡಿಯಾಗುತ್ತಿದೆ ಅಮಿತ ಯುದ್ದ ಸೂತ್ತ; ರಾಜ್ಯ ಬಿಜೆಪಿ ಅಣಿಯಾಗಬೇಕು, ಅಮಿತ್ ಶಾ ಸುಪಾರಿ
ಚನ್ನಿ-ವೀಡಿಗೆ ಡಿಕೆಶಿ ಫೆವಿಕಾಲ್.?, ಒಗ್ಗಟ್ಟಿನ ಮಹತ್ವ ವಿವರಿಸಿದ ಡಿಕೆಶಿ ✍️. ಆರ್.ಟಿ.ವಿಠ್ಟಲಮೂರ್ತಿ ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕೇರಳಕ್ಕೆ ಹೋಗಿದ್ದರು. ಹೀಗೆ ಹೋದವರು ವಿ.ಡಿ.ಸತೀಶನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಾದ ನಂತರ ಸಮಾರಂಭಕ್ಕೆ ದಿಲ್ಲಿಯಿಂದ ಬಂದಿದ್ದ ಹಿರಿಯ ನಾಯಕರೊಬ್ಬರ ಜತೆ ಅವರು ಒನ್ ಟು ಒನ್ ಮಾತನಾಡಿದ್ದಾರೆ.ಹೀಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಬಗ್ಗೆ ಪ್ರಸ್ತಾಪಿಸಿ: ‘ಸಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
