ಕರಾವಳಿ
ಮಂಗಳೂರು: ನ್ಯಾಯವಾದಿ ಜೀಶನ್ ಅಲಿಗೆ ಜೀವ ಬೆದರಿಕೆ, ಹಲ್ಲೆಗೆ ಯತ್ನ; ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಈ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರು ಅಡ್ಡ ಗಟ್ಟಿ, ತಲವಾರು ಝಳಪಿಸಿ, ಹಲ್ಲೆಗೆ ಯತ್ನಿಸಿದ್ದ ಆರೋಪಿ ರಿಯಾಜ್ ಮಂಗಳೂರು: ತನ್ನ ಕಕ್ಷಿದಾರೆಯ ಗಂಡನಾದ ಆರೋಪಿ ರಿಯಾಜ್ ಅವರು ಕಳೆದ 9 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಕುರಿತು ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ನ್ಯಾಯವಾದಿ ಜೀಶನ್ ಅಲಿ ಅವರನ್ನು ಕಕ್ಷಿದಾರೆ ಭೇಟಿ ಮಾಡಿ ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ, ದಿನಾಂಕ 11-05-2026 ರಂದು ಸಂಜೆ ಸುಮಾರು 7 ಗಂಟೆಯ ವೇಳೆಗೆ, […]
ವಿಟ್ಲ ಠಾಣಾ ಪೊಲೀಸರ ಕಾರ್ಯಾಚರಣೆ; 34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಾರೊಂದರಲ್ಲಿ ಅಕ್ರಮವಾಗಿ ಪೆಟ್ರೋಲ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ನಿವಾಸಿ ಇಬ್ರಾಹಿಂ ಹಾಗೂ ಸಿದ್ದೀಕ್ ಎಂಬವರುಗಳ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. ಸಂ: 124/1992 ರಲ್ಲಿ ಪೆಟ್ರೋಲಿಯಂ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಸಿದ್ದೀಕ್ ಎಂಬಾತನು ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನನ್ನು ದಿನಾಂಕ: 11.05.2026 ರಂದು ರಾತ್ರಿ, ವಿಟ್ಲ ಠಾಣಾ ಪ್ರೊಬೇಶನರ್ ಪಿಎಸ್ಐ ಸಿದ್ದಪ್ಪ, ಎಎಸ್ಐ ಜಯರಾಮ್, ಸಿಬಂದಿಗಳಾದ ಗೋಪಾಲ್, ಯಂಕಪ್ಪ, ಶ್ರೀಶೈಲ್ ಜೋರಾಪುರ ರವರುಗಳ ತಂಡ ಕನ್ಯಾನ ಗ್ರಾಮದ ಕಬ್ಬಿನಮೂಲೆ […]
ರಾಜ್ಯ
ಸಿದ್ದು ಸಂದೇಶ ರಾಹುಲ್ ಕಿವಿಗೆ ತಲುಪಿತು; ಬಿಜೆಪಿ ವರಿಷ್ಟರ ಪ್ಲಾನು; ಆರೆಸ್ಸೆಸ್ ಕರ್ನಾಟಕದಲ್ಲಿ ರಂಗಪ್ರವೇಶ
ಕರ್ನಾಟಕದಲ್ಲಿ SIR ನಡೆದರೆ, ರಾಜ್ಯ ಕಾಂಗ್ರೆಸ್ 1994 ರ ಪರಿಸ್ಥಿತಿಗೆ ✍️. ಆರ್.ಟಿ.ವಿಠ್ಠಲಮೂರ್ತಿ ತೃಣಮೂಲ ಕಾಂಗ್ರೆಸ್ ನ ಅಧಿನಾಯಕಿ ಮಮತಾ ಬ್ಯಾನರ್ಜಿ ಕುಸಿದು ಬಿದ್ದ ರೀತಿಯಿಂದ ದಿಲ್ಲಿಯ ಕಾಂಗ್ರೆಸ್ ವರಿಷ್ಟರಿಗೆ ಚಿಂತೆ ಸುರುವಾಗಿದೆ. ಅಷ್ಟೇ ಅಲ್ಲ, ಈ ಚಿಂತೆಯ ಪರಿಣಾಮವಾಗಿ ಅವರೀಗ ಕರ್ನಾಟಕದ ಮೇಲೆ ಕಣ್ಣು ನೆಟ್ಟಿದ್ದಾರೆ. ಅಂದ ಹಾಗೆ ಪಶ್ಚಿಮ ಬಂಗಾಳವನ್ನು ಅಭೇದ್ಯ ಕೋಟೆಯನ್ನಾಗಿ ಮಾಡಿಕೊಂಡಿದ್ದ ಮಮತಾ ಬ್ಯಾನರ್ಜಿ ಇತ್ತೀಚಿನ ಚುನಾವಣೆಯಲ್ಲಿ ಕುಸಿದು ಬಿದ್ದರು. ಬಿಜೆಪಿಯ ಮಾರಕ ಧಾಳಿಯ ಎದುರು ಅವರ ತೃಣಮೂಲ ಕಾಂಗ್ರೆಸ್ ಪಕ್ಷ […]
ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಮಾಡಿದ ಅಪರಾಧ ಕೃತ್ಯಕ್ಕೆ ವಯಸ್ಕನಾದಾಗ ಬಂಧನ ಹೊರಡಿಸಲು ಅಧಿಕಾವಿಲ್ಲ: ಹೈಕೋರ್ಟ್
ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧಗಳನ್ನು ಆಧಾರವಾಗಿಟ್ಟುಕೊಂಡು ಗೂಂಡಾ ಕಾಯಿದೆಯಡಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಲು ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಬಂಧಿತರಾಗಿರುವ ಅಭಿಚೆರ್ಲಿ ಅಲಿಯಾಸ್ ಅಭಿ ಎಂಬುವವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಿದೆ. ತಮ್ಮ ಮಗನನ್ನು ಬಂಧಿಸಿರುವ ಆದೇಶವನ್ನು ಪ್ರಶ್ನಿಸಿ ಕೋಲಾರ ಜಿಲ್ಲೆಯ ಕೆಜಿಎಫ್ನ ಮೇರಿ ಉಷಾ ಎಂಬುವರು ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ತಾರಾ ವಿತಸ್ತ ಗಂಜು ಅವರಿದ್ದ […]
ರಾಷ್ಟ್ರೀಯ
ಟೋಲ್ ಪ್ಲಾಜಾಗಳು ಸಂಪೂರ್ಣ ಕ್ಯಾನ್ಸಲ್; ‘ಮಲ್ಟಿ-ಲೇನ್ ಫ್ರೀ ಫ್ಲೋ’ (MLFF) ಎಂಬ ಆಧುನಿಕ ವ್ಯವಸ್ಥೆ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರು ಇನ್ನು ಮುಂದೆ ಟೋಲ್ ಪ್ಲಾಜಾಗಳ ಬಳಿ ವಾಹನ ನಿಲ್ಲಿಸಿ ಹಣ ಪಾವತಿಸುವ ದಿನಗಳು ಅಂತ್ಯವಾಗಲಿವೆ. ಕೇಂದ್ರ ರಸ್ತೆ ಸಾರಿಗೆ ಸಚಿವರು ದೇಶಾದ್ಯಂತ ಹೊಸ ತಂತ್ರಜ್ಞಾನ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಘೋಷಿಸಿದ್ದಾರೆ. 2026ರ ಅಂತ್ಯದೊಳಗೆ ಪ್ರಸ್ತುತ ಇರುವ ಭೌತಿಕ ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಗುರಿ ಸರ್ಕಾರ ಹೊಂದಿದೆ. ಈಗಿನ ಟೋಲ್ ಬೂತ್ಗಳ ಬದಲಿಗೆ ‘ಮಲ್ಟಿ-ಲೇನ್ ಫ್ರೀ ಫ್ಲೋ’ (MLFF) ಎಂಬ ಆಧುನಿಕ ವ್ಯವಸ್ಥೆ ಜಾರಿಗೆ ಬರಲಿದೆ. […]
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರಿಂದ ಮೇ 25, 26 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರ ಘೋಷಣೆ
ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೌಕರರು ಮೇ 25 ಮತ್ತು 26 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋಷಿಸಿದ್ದಾರೆ. 1947 ರ ಕೈಗಾರಿಕಾ ವಿವಾದ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವರ್ಕ್ಮೆನ್ ವರ್ಗದ ನೌಕರರು ಆಂದೋಲನದಲ್ಲಿ ಭಾಗವಹಿಸುತ್ತಾರೆ ಎಂದು ಆಲ್ ಇಂಡಿಯಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರದ ಪರಿಣಾಮವಾಗಿ ಎಲ್ಲಾ ಶಾಖೆಗಳಲ್ಲಿ ಬ್ಯಾಂಕಿಂಗ್ ಕಾರ್ಯಾಚರಣೆಗಳು ಪರಿಣಾಮ ಬೀರುವ ಸಾಧ್ಯತೆಯಿದೆ, ಮುಷ್ಕರದ ಪರಿಣಾಮ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
