ಕರಾವಳಿ

ಯುವ ಸಮೂಹದ ಭವಿಷ್ಯ, ಸಾಮಾಜಿಕ ಕಾಳಜಿ ಬೆಳೆಸುವುದರಲ್ಲಿ ಪುತ್ತೂರು ಕಮ್ಯೂನಿಟಿ ಸೆಂಟರ್ ಸೇವೆ ಅನನ್ಯ: ಜಿಲಾನಿ ಎಚ್. ಮೊಖಾಷಿ

ಕಮ್ಯೂನಿಟಿ ಸೆಂಟರ್ ನ ಪದ್ದತಿ ಮತ್ತು ನೀತಿಗಳು ರಾಜ್ಯದ ಪ್ರತಿಯೊಂದು ಸಂಘ ಸಂಸ್ಥೆಗಳಿಗೂ ಮಾದರಿಯಾಗಿದೆ. ವಿಧ್ಯಾರ್ಥಿಗಳಿಗೆ ಶೈಕ್ಷಣೈಕ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಅವರನ್ನು ಸಮಾಜಮುಖಿ ಕೆಲಸದಲ್ಲಿ ತೊಡಗಿಸುವ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ ಜಿಲಾನಿ H ಮೊಖಾಷಿ ಅವರು ಅಭಿಪ್ರಾಯ ಪಟ್ಟರು. ಇತ್ತಿಚೆಗೆ ಅವರು ಮಂಗಳೂರಿನಲ್ಲಿ ಇರುವ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆ ಪರಿಶೀಲಿಸಿದರು. ಪುತ್ತೂರು ಎಂಬ ತಾಲೂಕು ಮಟ್ಟದಲ್ಲಿ ಆರಂಭವಾದ […]

ಬಿಜೆಪಿಯಲ್ಲಿ ಬಂಟರಿಗೆ ಬ್ರೇಕ್; ಬಿಲ್ಲವ ಪಾರಮ್ಯಕ್ಕೆ ವೇದಿಕೆ ಸಜ್ಜು

ಹೀಗೊಂದು ಮಾತು ಕರಾವಳಿಯ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಭಾರೀ ಜೋರಾಗಿ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಬ್ಯಾರಿಗಳದ್ದೇ ದೊಡ್ಡ ಪ್ರಭಾವವಿದೆ. ಬಿಲ್ಲವ ಮತದಾರರು ಬಿಜೆಪಿ ಜೊತೆ ಗುರುತಿಸಿಕೊಂಡರೆ, ಬ್ಯಾರಿ ಮತದಾರರು ಕಾಂಗ್ರೆಸ್ ಜೊತೆಯಲ್ಲಿದ್ದಾರೆ. ವಿಚಿತ್ರವೆಂದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ, ಬ್ಯಾರಿಗಳ ಪ್ರಭಾವ ಜಾಸ್ತಿಯಿದ್ದರೂ ಅಧಿಕಾರ ಮಾತ್ರ ಬಂಟರ ಕೈಯಲ್ಲಿ. ಅದು ಕಾಂಗ್ರೆಸ್, ಬಿಜೆಪಿಯಾಗಲಿ ಕರಾವಳಿ ರಾಜಕಾರಣವನ್ನು ಆಳುತ್ತಿರುವುದು ಬಂಟರು ಮಾತ್ರ. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ಬಿಲ್ಲವರಿಗೆ ಚೊಂಬು ಕೊಟ್ಟು ಬಂಟರು ಅಧಿಕಾರಕ್ಕೆ ಏರುತ್ತಿದ್ದಾರೆ […]

ರಾಜ್ಯ

ರಾಜ್ಯದ ಜನತೆಗೆ ವಿದ್ಯುತ್ ಬರೆ.! ಮೇ ತಿಂಗಳಿನಿಂದಲೇ ಹೊಸ ದರ ಜಾರಿ, 91 ಪೈಸೆ ಹೆಚ್ಚಳ

ವಿದ್ಯುತ್ ಸರಬರಾಜು ನಿಗಮವು ಗೃಹ ಬಳಕೆದಾರರಿಗೆ ಪ್ರತಿ ಯೂನಿಟ್‌ಗೆ 91 ಪೈಸೆ ದರ ಹೆಚ್ಚಳ ಮಾಡಿದ್ದು, ಮೇ ತಿಂಗಳಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಈಗಾಗಲೇ ಏಪ್ರಿಲ್ ತಿಂಗಳಿನಿಂದ ಪ್ರತಿ ಯೂನಿಟ್‌ಗೆ 35 ಪೈಸೆ ಏರಿಕೆ ಮಾಡಲಾಗಿತ್ತು.ಪ್ರಸ್ತುತ ಮೇ ತಿಂಗಳಿನಿಂದ ‘ಟ್ರೂ ಅಪ್ ಚಾರ್ಜ್’ ಹೆಸರಿನಲ್ಲಿ ಹೆಚ್ಚುವರಿಯಾಗಿ 56 ಪೈಸೆ ದರ ವಿಧಿಸಲಾಗುತ್ತಿದೆ. ಒಟ್ಟಾರೆಯಾಗಿ ಗ್ರಾಹಕರು ಪ್ರತಿ ಯೂನಿಟ್‌ಗೆ 91 ಪೈಸೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಗೃಹ ಬಳಕೆದಾರರಿಗಿಂತಲೂ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ಈ ಬೆಲೆ […]

ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ; ಸಿದ್ದು ಪಟ್ಟ ಭದ್ರ.?

ರಾಜ್ಯದ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿರುವ ಡಿ.ಕೆ. ಶಿವಕುಮಾರ್‌ ಅವರು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರ ಭೇಟಿಗೆ ಕಸರತ್ತು ನಡೆಸಿದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಲ ಪ್ರದರ್ಶನದ ತಂತ್ರ ಹೆಣೆದಿದ್ದಾರೆ. ಸಿಎಂ ಹಾಗೂ ಡಿಸಿಎಂ ನಡುವಿನ ನಾಯಕತ್ವ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೊಂದಲಗಳಿಗೆ ತೆರೆ ಎಳೆಯುವಂತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ. ಹೀಗಾಗಿ ನಾಯಕತ್ವ […]

ರಾಷ್ಟ್ರೀಯ

ಇರಾನ್ ಹ್ಯಾಕರ್ಸ್ ಗಳಿಂದ ಸೈಬರ್ ದಾಳಿ; ಅಮೆರಿಕನ್ ಮರೀನ್ ಸೈನಿಕರ ವೈಯಕ್ತಿಕ ಮಾಹಿತಿ ಹ್ಯಾಕ್ ಮಾಡಿ ಸೋರಿಕೆ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಕೇವಲ ಸಮರಭೂಮಿಗೆ ಸೀಮಿತವಾಗಿಲ್ಲ, ಅದು ಡಿಜಿಟಲ್ ಲೋಕಕ್ಕೂ ಹಬ್ಬಿದೆ. ಇರಾನ್ ಬೆಂಬಲಿತ ಹ್ಯಾಕರ್ ಗುಂಪೊಂದು ಪಶ್ಚಿಮ ಏಷ್ಯಾದಲ್ಲಿ ನಿಯೋಜನೆಗೊಂಡಿರುವ 2,000ಕ್ಕೂ ಹೆಚ್ಚು ಅಮೆರಿಕನ್ ಮರೀನ್ ಸೈನಿಕರ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡಿ ಸೋರಿಕೆ ಮಾಡಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ದಿ ವಾಲ್ ಸ್ಟ್ರೀಟ್ ಜರ್ನಲ್ ಈ ಕುರಿತು ವರದಿ ಮಾಡಿದ್ದು, ಅಮೆರಿಕದ ರಕ್ಷಣಾ ಇಲಾಖೆ ಈ ಗಂಭೀರ ಭದ್ರತಾ ಲೋಪದ ಬಗ್ಗೆ ತನಿಖೆ ಆರಂಭಿಸಿದೆ. ಈ ದಾಳಿಯ ಹಿಂದೆ […]

ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿರುವ ಘಟನೆ; ಇವಳೇ ನನ್ನ ಸಹೋದರಿ, ಮೃತ ಪಟ್ಟಿರುವುದಕ್ಕೆ ಇದೇ ಸಾಕ್ಷಿ.!

ತನ್ನ ಮೃತ ತಂಗಿಯ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಪಡೆಯಲು ಸಾವಿನ ಪುರಾವೆಯಾಗಿ ಆಕೆಯ ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿರುವ ಘಟನೆ ಒಡಿಶಾದ ಕೆಂಜಿಹಾರ್ ಜಿಲ್ಲೆಯಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ತಂಗಿಯ ಮರಣದ ನಂತರ ಆಕೆಯ ಖಾತೆಯಲ್ಲಿದ್ದ ಹಣ ಬಿಡಿಸಿಕೊಳ್ಳಲು ಬ್ಯಾಂಕಿಗೆ ಅಲೆದಾಡುತ್ತಿದ್ದರು. ಬ್ಯಾಂಕ್ ಅಧಿಕಾರಿಗಳು ಮರಣ ಪ್ರಮಾಣಪತ್ರ ಸೇರಿದಂತೆ ಸೂಕ್ತ ದಾಖಲೆಗಳನ್ನು ಕೇಳಿದ್ದರು ಎನ್ನಲಾಗಿದೆ. ಇದರಿಂದ ಹತಾಶರಾದ ವ್ಯಕ್ತಿ, ಹೂತುಹಾಕಿದ್ದ ತಂಗಿಯ ಶವವನ್ನು ಹೊರತೆಗೆದು, ಅದರ ಅಸ್ಥಿಪಂಜರವನ್ನೇ ಚೀಲದಲ್ಲಿ ಹಾಕಿಕೊಂಡು ಬ್ಯಾಂಕಿಗೆ ಬಂದಿದ್ದಾರೆ. ಜಿತು […]

ಅಂತಾರಾಷ್ಟ್ರೀಯ

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ

ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]

error: Content is protected !!