ಕರಾವಳಿ

ಮಾದಕವಸ್ತು ಸಾಗಾಟ ಜಾಲ ಪತ್ತೆ; ಮಾದಕ ವಸ್ತು MDMA, ಕೊಕೇನ್ ಸಹಿತ ಕೊಟ್ಯಾಂತರ ರೂ. ಮೌಲ್ಯದ ಸೊತ್ತುಗಳ ವಶ.

ಹಾಸನದಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ದಿನಾಂಕ 16.08.2026 ರಂದು ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು KA-01-MA-1284 ನೋಂದಣಿಯ ಕಾರೊಂದನ್ನು ತಡೆದು, ಕಾರಿನ ಚಾಲಕನ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆತನು ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ. ನಂತರ ಪೊಲೀಸರು ಕಾರನ್ನು ತಪಾಸಣೆ ನಡೆಸಿ ವಾಹನದೊಳಗಡೆ ಇದ್ದ 538.63 ಗ್ರಾಂ MDMA […]

ಈ ಮಣ್ಣಿನ ಮೂಲನಿವಾಸಿಗಳ ಆಚರಣೆ, ಸಂಸ್ಕೃತಿ, ಧಾರ್ಮಿಕತೆಯನ್ನು ನಾಶ ಮಾಡುವ ಕಸ್ತೂರಿ ರಂಗನ್ ವರದಿಯು ಅವೈಜ್ಞಾನಿಕ ಒಪ್ಪಲು ಸಾಧ್ಯವಿಲ್ಲ: ರಕ್ಷತ್ ಶಿವರಾಂ

ಜಾತಿ ಧರ್ಮವನ್ನು ಹೊರಗಿಟ್ಟು ಜನವಿರೋಧಿ ವರದಿಯ ವಿರುದ್ಧ ಸೌಹಾರ್ದ ಹೋರಾಟದ ಅಗತ್ಯವಿದೆ: ಮಹಮ್ಮದ್ ಸರ್ವಾಣಿ ಪಶ್ಚಿಮ ಘಟ್ಟ ಸೇರಿದಂತೆ ಅರಣ್ಯ ಸಂರಕ್ಷಣೆಯನ್ನು ಸ್ವಾಗತಿಸುತ್ತಾ ಜನರ ಬದುಕನ್ನು ನಾಶಪಡಿಸುವ ಕಸ್ತೂರಿರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಅದರ ವಿರುದ್ಧ ಜನಜಾಗೃತಿ ಮೂಡಿಸುವ ಜೊತೆಗೆ ತೀವ್ರ ಸ್ವರೂಪದ ಹೋರಾಟಕ್ಕೆ ಜನರು ಮುಂದಾಗಬೇಕು ಎಂದು ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ತಾಲೂಕು ಸಂಚಾಲಕ ರಕ್ಷಿತ್ ಶಿವರಾಂ ಕರೆ ನೀಡಿದರು. ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೆರಿಯ ಗ್ರಾಮ ಸಮಿತಿ ವತಿಯಿಂದ […]

ರಾಜ್ಯ

ಮೇಜರ್ ಸರ್ಜರಿಯ ಸುಳಿವು ಕೊಟ್ಟರು‌ ನಿತಿನ್; ಡಲ್ಲಾಯಿತು ಜಮೀರ್ ಪವರ್

ಹತ್ತಿರವಾಗುತ್ತಿದೆ ಸರ್ಜರಿ ಡೇಟು, ಯೋಗೀಶ್ವರ್ ವಿಥ್ ಪುಲಿಕೇಶಿ ✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಕಾಂಗ್ರೆಸ್ ವರಿಷ್ಟರು ವೀಕ್ಷಕರೊಬ್ಬರನ್ನು ಕರ್ನಾಟಕಕ್ಕೆ ಕಳಿಸಿದ್ದಾರೆ. ಹೀಗೆ ವರಿಷ್ಟರ ಸೂಚನೆಯಂತೆ ಬಂದ ಆ ವೀಕ್ಷಕರು ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಪಕ್ಷದ ಬೆಳವಣಿಗೆಗಳ ಬಗ್ಗೆ ಆ ವೀಕ್ಷಕರು ತಮ್ಮ ಅಭಿಪ್ರಾಯ ಕೇಳಿದಾಗ ವೀರಪ್ಪ ಮೊಯ್ಲಿ ನೋವಿನಿಂದ ಮಾತನಾಡಿದರಂತೆ.ಕಾರಣ? ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಆ ಜಾಗಕ್ಕೆ ಬಂದರಲ್ಲ? […]

ಸರ್ಕಾರಿ ಜಾಗಗಳಲ್ಲಿ ನಡೆಸುವ ಸಭೆ-ಸಮಾರಂಭಗಳಿಗೆ ಪರೋಕ್ಷವಾಗಿ ಬ್ರೇಕ್; ಪೂರ್ವಾನುಮತಿ ಕಡ್ಡಾಯ

ರಾಜ್ಯದಲ್ಲಿನ ಶಾಲೆಗಳು, ಕಾಲೇಜುಗಳು ಹಾಗೂ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಗಳ ಆವರಣದಲ್ಲಿ ಖಾಸಗಿ ಸಂಘ-ಸಂಸ್ಥೆಗಳು ಅಥವಾ ಸಂಘಟನೆಗಳು ಯಾವುದೇ ರೀತಿಯ ಚಟುವಟಿಕೆ ಅಥವಾ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಇನ್ಮುಂದೆ ಕಾನೂನುಬದ್ಧವಾಗಿ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರೂಪಿಸಲಾಗಿರುವ ‘ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ದೊರೆತಿದೆ. ಸರ್ಕಾರದ ಈ ನೂತನ ಕಾಯ್ದೆಯು ಆರ್‌ಎಸ್‌ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸರ್ಕಾರಿ […]

ರಾಷ್ಟ್ರೀಯ

ಅಪಘಾತದಲ್ಲಿ ಪೋಷಕರು ಮೃತಪಟ್ಟರೆ, ವಿವಾಹಿತ, ಉದ್ಯೋಗಿ ಮಕ್ಕಳು ಕೂಡ ಪರಿಹಾರ ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್

ಅಪಘಾತದಲ್ಲಿ ಪೋಷಕರು ಮೃತಪಟ್ಟ ಸಂದರ್ಭದಲ್ಲಿ, ಅವರ ವಯಸ್ಕ, ವಿವಾಹಿತ ಹಾಗೂ ಲಾಭದಾಯಕ ಉದ್ಯೋಗದಲ್ಲಿರುವ ಮಕ್ಕಳು ಕೂಡ ಪರಿಹಾರ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವಲಂಬನೆಯ ಪ್ರಮಾಣಕ್ಕೆ ಅನುಗುಣವಾಗಿ ಈ ಮಕ್ಕಳೂ ಪರಿಹಾರಕ್ಕಾಗಿ ಕಾನೂನುಬದ್ಧವಾಗಿ ಅರ್ಹರು ಎಂದು ನ್ಯಾಯಮೂರ್ತಿಗಳಾದ ಎನ್. ಕೋಟೀಶ್ವರ್ ಸಿಂಗ್ ಮತ್ತು ಎನ್.ವಿ. ಅಂಜಾರಿಯ ಅವರ ಪೀಠವು ತೀರ್ಪು ನೀಡಿದೆ. ಕಾನೂನುಬದ್ಧ ಪ್ರತಿನಿಧಿ ಎಂಬುದನ್ನು ಮೋಟಾರು ವಾಹನ ಕಾಯ್ದೆಯಲ್ಲಿ ವ್ಯಾಖ್ಯಾನಿಸಿಲ್ಲವಾದರೂ, ಮೃತ ವ್ಯಕ್ತಿಯ ಆಸ್ತಿಯನ್ನು ಕಾನೂನುಬದ್ಧವಾಗಿ ಪ್ರತಿನಿಧಿಸುವವರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರು […]

ಕುಖ್ಯಾತ ಡ್ರಗ್ಸ್ ಕಿಂಗ್ ಪಿನ್ ವೀರೇಂದ್ರ ಸಿಂಗ್ ಬಸೋಯಾ ಯುಎಇಯಿಂದ ಭಾರತಕ್ಕೆ ಹಸ್ತಾಂತರ: NCB ವಶಕ್ಕೆ

13,000 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪ್ರಕರಣದಲ್ಲಿ ಬೇಕಾಗಿದ್ದ ಡ್ರಗ್ ಕಿಂಗ್‌ಪಿನ್‌ನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. 2023 ರಲ್ಲಿ, ತನ್ನ ಮಗನ ಮದುವೆಯ ಒಂದು ದಿನದ ನಂತರ, ವೀರೇಂದ್ರ ಬಸೋಯಾ ದೇಶ ಬಿಟ್ಟು ಪಲಾಯನ ಮಾಡಿದ್ದ. ಮಾದಕವಸ್ತು ಕಿಂಗ್ ಪಿನ್ ವೀರೇಂದ್ರ ಸಿಂಗ್ ಬಸೋಯಾನನ್ನು ಯುಎಇಯಿಂದ ಭಾರತಕ್ಕೆ ಕರೆತರಲಾಗಿದ್ದು, ಮಾದಕವಸ್ತು ನಿಯಂತ್ರಣ ಬ್ಯೂರೋ ಎನ್‌ಸಿಬಿ ಆತನನ್ನು ವಶಕ್ಕೆ ಪಡೆದಿದೆ. ಎನ್‌ಸಿಬಿ ಕೋರಿಕೆಯ ಮೇರೆಗೆ ಇಂಟರ್‌ಪೋಲ್ ರೆಡ್ ನೋಟಿಸ್ ಹೊರಡಿಸಿದ ನಂತರ ಜೂನ್‌ ತಿಂಗಳಲ್ಲಿ ಬಸೋಯಾನನ್ನು ಯುಎಇಯಲ್ಲಿ ಬಂಧಿಸಲಾಯಿತು. […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

error: Content is protected !!