ಕರಾವಳಿ

ಬಂಟ್ವಾಳ ಪುರಸಭೆಗೆ ಖಡಕ್ ಚೀಫ್ ಆಫೀಸರ್: ದಿನಗೂಲಿ ನೌಕರರಿಗೆ ಗೇಟ್ ಪಾಸ್

ಬಂಟ್ವಾಳ ಪುರಸಭೆಯಲ್ಲಿ ದಿನಗೂಲಿ ನೌಕರರ ಕಾರುಬಾರು ಎಂಬ ಶೀರ್ಷಿಕೆಯಡಿಯಲ್ಲಿ ಸೃಷ್ಟಿ 238 ರಲ್ಲಿ ಸಮಗ್ರ ವರದಿಯನ್ನು ಪ್ರಕಟಿಸಿತ್ತು. ಬಂಟ್ವಾಳ ಪುರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡಲು ಮೂಲ ಕಾರಣವೇ ದಿನಗೂಲಿ ನೌಕರರು. ಇವರನ್ನು ಹದ್ದುಬಸ್ತಿನಲ್ಲಿಡಬೇಕಾದ ಅಧಿಕಾರಿ ವರ್ಗ ಇವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ದಿನಗೂಲಿ ನೌಕರರ ಅಂಧಾ ದರ್ಬಾರ್ ಮೇಳೈಸುತ್ತಿದೆ. ಬಂಟ್ವಾಳ ಪುರಸಭೆ ಒಳಹೊಕ್ಕರೆ ಯಾವೊಂದು ಕೆಲಸವೂ ಸಲೀಸಾಗಿ ನಡೆಯುತ್ತಿಲ್ಲ. ಇಲ್ಲಿ ಖಾತಾ, ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಲೈಸೆನ್ಸ್ ಯಾವ ಕೆಲಸವೂ ಇಲ್ಲಿ ನಡೆಯುತ್ತಿಲ್ಲ. ಜನಸಾಮಾನ್ಯರ […]

ನಿಷೇದಿತ ಮಾದಕವಸ್ತು ಮಾರಾಟ ಪ್ರಕರಣದ ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ

ಬೆಳ್ತಂಗಡಿ ಉಜಿರೆ ರಥಬೀದಿ ಎಂಬಲ್ಲಿ, ದಿನಾಂಕ: 08-03-2009 ರಂದು ಅಂದಾಜು 50 ಸಾವಿರ ರೂ. ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09 ರಂತೆ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಟಿ.ಇ ಜೋಸೆಫ್ ಎಂಬಾತನಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಾಧೀಶರು ದಿನಾಂಕ 10-04- 2026 ರಂದು ಟಿ.ಇ ಜೋಸೆಫ್ ಎಂಬವರನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ […]

ರಾಜ್ಯ

ರಾಜ್ಯ ಕಾಂಗ್ರೆಸ್ ನಲ್ಲಿ ಡಿಕೆಶಿ ಯದ್ದೇ ಪ್ರಾಬಲ್ಯ.! ಸಿದ್ದು ಆಪ್ತ ಮುಸ್ಲಿಂ ನಾಯಕರ ಖೇಲ್ ಖತಂ..!

ಸ್ಪೀಕರ್ ಖಾದರ್ ಸೈಡ್ ಲೈನಿಗೆ ನಡೆಯುತ್ತಿದೆ ಭರ್ಜರಿ ತಯಾರಿ.! ಏನಿದು ಹೊಸ ಬೆಳವಣಿಗೆ.? ಇಲ್ಲಿದೆ ಡೀಟೈಲ್ಸ್ ದಾವಣಗೆರೆ ಉಪಚುನಾವಣೆ ರಾಜ್ಯ ಹಾಗೂ ದೇಶದಾದ್ಯಂತ ಭಾರೀ ಸುದ್ದಿ ಮಾಡಿದೆ. ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಮುಸ್ಲಿಮರನ್ನು ಕಡೆಗಣಿಸಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವುದು ಒಂದು ಕಡೆಯಾದರೆ, ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಕುಟುಂಬದ ಕುಡಿಯನ್ನು ಮಣ್ಣು ಮುಕ್ಕಿಸಲು ಕಾಂಗ್ರೆಸ್ ಪಕ್ಷದಲ್ಲಿರುವ ಮುಸ್ಲಿಂ ನಾಯಕರ ಗುಂಪೊಂದು ಪ್ರಯತ್ನಿಸಿದ್ದು, ಅದಕ್ಕೆ ಪ್ರತಿಯಾಗಿ ಪಕ್ಷ ವಿರೋಧಿ ಚಟುವಟಿಕೆಯ ಕಾರಣವೊಡ್ಡಿ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮ್ಮದ್ […]

ಸಚಿವ ಜಮೀರ್ ಅಹ್ಮದ್ ಅವರ ಹೆಸರನ್ನು ಹಾಳು ಮಾಡಲು ಸಂಚು, ಮುಸ್ಲಿಮರನ್ನು ಕೆಣಕಿದರೆ ಕಾಂಗ್ರೆಸಿಗೆ ತಕ್ಕ ಪಾಠ

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸೀಟು ಬರುವುದು ಕೂಡ ಕಷ್ಟ: ವಿಶ್ವ ಮುಸ್ಲಿಂ ಪರಿಷತ್ ದಾವಣಗೆರೆ ಉಪ ಚುನಾವಣೆಯ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಕೆಯಾದ ವರದಿಯಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಹೆಸರನ್ನು ಹಾಳು ಮಾಡಲು ಸಂಚು ನಡೆಯುತ್ತಿದೆ. ಒಂದು ವೇಳೆ ಜಮೀರ್ ಅಹ್ಮದ್ ಅವರ ತಲೆದಂಡ ಮಾಡಿದರೆ ಅಥವಾ ಅವರನ್ನು ಕೆಣಕಿದರೆ, 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸೀಟು ಬರುವುದು ಕೂಡ ಕಷ್ಟವಾಗಲಿದೆ’ ವಿಶ್ವ ಮುಸ್ಲಿಂ ಪರಿಷತ್ ಎಚ್ಚರಿಕೆ ರವಾನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ […]

ರಾಷ್ಟ್ರೀಯ

ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಸಜ್ಜು; ಲೋಕಸಭೆಯಲ್ಲಿರುವ 543 ಸದಸ್ಯರ ಬಲವನ್ನು 850ಕ್ಕೆ ಏರಿಸಲು ಸರ್ಕಾರ ಪ್ರಸ್ತಾವನೆ

ಭಾರತೀಯ ಸಂಸದೀಯ ಇತಿಹಾಸದಲ್ಲೇ ಅತ್ಯಂತ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಪ್ರಸ್ತುತ ಲೋಕಸಭೆಯಲ್ಲಿರುವ 543 ಸದಸ್ಯರ ಬಲವನ್ನು ಬರೋಬ್ಬರಿ 850ಕ್ಕೆ ಏರಿಸಲು ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ದಶಕಗಳಿಂದ ಬಾಕಿ ಉಳಿದಿರುವ ‘ಮಹಿಳಾ ಮೀಸಲಾತಿ’ ಕಾನೂನನ್ನು ಜಾರಿಗೊಳಿಸಲು ಮತ್ತು ಹೊಸ ಕ್ಷೇತ್ರ ಪುನರ್ ವಿಂಗಡಣೆಗೆ ಹಾದಿ ಸುಗಮಗೊಳಿಸಲು ಮೋದಿ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯಂತೆ ಲೋಕಸಭೆಯ ಒಟ್ಟು ಬಲ 850 ಆಗಲಿದೆ. ಇದರಲ್ಲಿ 815 ಸ್ಥಾನಗಳನ್ನು ವಿವಿಧ ರಾಜ್ಯಗಳಿಗೆ […]

ಗೊಂದಲದ ಗೂಡಾದ ಬೆಳ್ತಂಗಡಿ ಅಂಬೇಡ್ಕರ್ ಜಯಂತಿ: ದಿನಕ್ಕೊಬ್ಬ ಮುಖ್ಯ ಭಾಷಣಕಾರರ ಬದಲಾವಣೆ

ಪ್ರತಿವರ್ಷದಂತೆ ನಡೆಯುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಈ ವರ್ಷ ಗೊಂದಲದ ಗೂಡಾಗಿ ಪರಿಣಮಿಸಿದೆ. ದಿನಕ್ಕೊಬ್ಬರಂತೆ ಮುಖ್ಯ ಭಾಷಣಕಾರರು ಬದಲಾವಣೆಗೊಂಡು ಇದೀಗ ಕೊನೆಗಳಿಗೆಯಲ್ಲಿಯೂ ಬದಲಾವಣೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಇತ್ತೀಚೆಗೆ ದಲಿತ ನಾಯಕರ ಸಭೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ದಲಿತ ನಾಯಕರು ಸರ್ವಾನುಮತದಿಂದ ಹಿರಿಯ ತುಳು ಸಾಹಿತಿ ಆತ್ರಾಡಿ ಅಮೃತ ಶೆಟ್ಟಿಯವರ ಹೆಸರನ್ನು ಸೂಚಿಸಿದರು. ಆದರೆ […]

ಅಂತಾರಾಷ್ಟ್ರೀಯ

ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ

ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]

ಮೂಲಸೌಕರ್ಯದ ಮೇಲಿನ ದಾಳಿಗೆ ಇರಾನ್ ಆಕ್ರೋಶ; ಇಂತಹ ದಾಳಿ ನಡೆದರೆ ನಿಮ್ಮ ಮಿತ್ರ ರಾಷ್ಟ್ರಗಳನ್ನು ಸಂಪೂರ್ಣ ನಾಶ ಮಾಡದೆ ಬಿಡುವುದಿಲ್ಲ: ಇರಾನ್ ಎಚ್ಚರಿಕೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ “ಅನಿಯಂತ್ರಿತ ಪ್ರತಿದಾಳಿ” ನಡೆಸುವುದಾಗಿ ಇರಾನ್ ಸ್ಪಷ್ಟ ಎಚ್ಚರಿಕೆ ನೀಡಿದೆ. ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿ ನಡೆಸಿದರೆ ಗಲ್ಫ್ ಪ್ರದೇಶದ ತೈಲ ಹಾಗೂ ಅನಿಲ ವಲಯವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಇಸ್ರೇಲ್’ಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ […]

error: Content is protected !!