ಕರಾವಳಿ

ಸುರತ್ಕಲ್: ಮಹಿಳೆಯ ಕೊಲೆಗೈದು, 24 ಪವನ್ ಚಿನ್ನದ ಒಡವೆ ದೋಚಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಸರಿ-ಸುಮಾರು ಹನ್ನೆರಡು ವರ್ಷಗಳ ಹಿಂದೆ (2014 ರಲ್ಲಿ ) ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ‘ಕಲ’ದ ಬಳಿಯ ನಿವಾಸಿ ಶ್ರೀಮತಿ ಸುಮತಿ ಪ್ರಭು ಎಂಬವರ ಕುತ್ತಿಗೆಗೆ ಚೂರಿಯಿಂದ ಕೊಯ್ದು, ಕೊಲೆ ಮಾಡಿ ಮೈಮೇಲಿದ್ದ ಸರಿ-ಸುಮಾರು 3 ಲಕ್ಷದ 80 ಸಾವಿರ ರೂಪಾಯಿ ಬೆಲೆ ಬಾಳುವ, 24 ಪವನ್ ತೂಕದ ಚಿನ್ನದ ಒಡವೆಗಳನ್ನು ದೋಚಿದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ 44/2014 ರಂತೆ ಪ್ರಕರಣನ್ನು ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ಪ್ರಕರಣದ ಆರೋಪಿಗಳಾದ ಶಿವರಾಮ್, ಭರತ್ ಪುರ ಜಿಲ್ಲೆ, ರಾಜಸ್ಥಾನ. […]

ಶಾಸಕ ಭರತ್ ಶೆಟ್ಟಿಯವರನ್ನು ಮಂಜೇಶ್ವರ ಚುನಾವಣಾ ಉಸ್ತುವಾರಿಯನ್ನಾಗಿಸಿ ಕೈ ಸುಟ್ಟುಕೊಂಡ ಬಿಜೆಪಿ.!

ಹೀನಾಯವಾಗಿ ಸೋತ ಬಿಜೆಪಿ; ಸ್ಥಳೀಯ ಬಿಜೆಪಿ ನಾಯಕರೊಳಗೆ ಭುಗಿಲೆದ್ದ ಆಕ್ರೋಶ. ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅನುಭವಿಸಿದ ಹೀನಾಯ ಸೋಲಿನ ಬಳಿಕ ಪಕ್ಷದೊಳಗೆ ವ್ಯಾಪಕ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ. ಚುನಾವಣಾ ಉಸ್ತುವಾರಿಯಾಗಿ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿಯವರನ್ನು ನೇಮಕ ಮಾಡಿರುವ ನಿರ್ಧಾರವೇ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಇದು ಈಗ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸ್ಥಳೀಯ ಮಟ್ಟದಲ್ಲಿ ಕ್ರೈಸ್ತ ಮತದಾರರು ಬಿಜೆಪಿಯಿಂದ ದೂರ ಸರಿದಿರುವುದು ಸೋಲಿನ ಪ್ರಮುಖ ಕಾರಣವೆಂದು ವಿಶ್ಲೇಷಣೆಗಳು ಸೂಚಿಸುತ್ತಿವೆ. ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದ […]

ರಾಜ್ಯ

ಗ್ರಾಮ ಪಂಚಾಯತ್ ಗಳ ಸದಸ್ಯತ್ವ ನಿಗದಿ; 2026 ಮೇ 8ರ ವರೆಗೆ ಸಾರ್ವಜನಿಕ ಆಕ್ಷೇಪಣೆಗೆ ಅವಧಿ ವಿಸ್ತರಣೆ.

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತ್ ಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ 2026ರ ಮೇ 08 ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಆನ್ ಲೈನ್ ಮೂಲಕ ತಮ್ಮ ಮನವಿಗಳನ್ನು https://rdpr.karnataka.gov.in/rdc/public/ ಈ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, […]

ಮದಕರಿ ನಾಯಕ ಫ್ರಂಟ್ ಲೈನಿಗೆ ಬಂದಿದ್ದೇಕೆ.?, ಇದು ವಿಜಯೇಂದ್ರ ವೈಭವಂ

ರಾಹುಲ್ ಅಪ್ ಸೆಟ್; ಸಧ್ಯದಲ್ಲೇ ಎಐಸಿಸಿಗೆ ಮೇಜರ್ ಸರ್ಜರಿ ✍️. ಆರ್.ಟಿ.ವಿಠ್ಠಲಮೂರ್ತಿ ಮೇ ಒಂಭತ್ತರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರೋತ್ಸವ ದಿಲ್ಲಿಯ ಕಾಂಗ್ರೆಸ್ ನಾಯಕರಿಗೆ ಆತಂಕ ಮೂಡಿಸಿದೆ. ಕಾರಣ? ಈ ಉತ್ಸವ ಕರ್ನಾಟಕದ ಜಾತಿ ರಾಜಕೀಯದ ಚಿತ್ರವನ್ನು ಬದಲಿಸಲಿದೆ ಎಂಬ ಮಾಹಿತಿ. ಅಂದ ಹಾಗೆ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಅಭಿನಂದಿಸುವ ಈ ಉತ್ಸವ ಕೇವಲ ಬಲ ಪ್ರದರ್ಶನದ ಉದ್ದೇಶವನ್ನಷ್ಟೇ ಹೊಂದಿದ್ದರೆ ಅದು ಕಾಂಗ್ರೆಸ್ ನಾಯಕರಿಗೆ ಅಷ್ಟೇನೂ ಆತಂಕ ಮೂಡಿಸುತ್ತಿರಲಿಲ್ಲ. ಆದರೆ ಈ ಉತ್ಸವದ ತಯಾರಿ ಹೇಗೆ ನಡೆದಿದೆ […]

ರಾಷ್ಟ್ರೀಯ

30 ಮಂದಿ ಐಪಿಎಸ್‌ ಯೇತರ ಅಧಿಕಾರಿಗಳಿಗೆ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಡ್ತಿಗೆ ಹೈಕೋರ್ಟ್ ಆದೇಶ

ರಾಜ್ಯ ಪೊಲೀಸ್‌ ಸೇವೆಯಲ್ಲಿದ್ದ 30 ಐಪಿಎಸ್‌ ಯೇತರ ಅಧಿಕಾರಿಗಳಿಗೆ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಡ್ತಿ ನೀಡಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.ಎಸ್‌ಪಿ ಹುದ್ದೆಗೆ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ 2025ರ ಆಗಸ್ಟ್ 20ರಂದು ನೀಡಿರುವ ಆದೇಶ ರದ್ದುಗೊಳಿಸುವಂತೆ ಕೋರಿ ರಾಜ್ಯ ಗೃಹ ಇಲಾಖೆ ಸಲ್ಲಿಸಿದ್ದ ರಿಟ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಕೆಎಸ್‌ಎಟಿ ಆದೇಶವನ್ನು ಮಾರ್ಪಾಡು ಮಾಡಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಪೀಠ, […]

ಇರಾನ್ ಹ್ಯಾಕರ್ಸ್ ಗಳಿಂದ ಸೈಬರ್ ದಾಳಿ; ಅಮೆರಿಕನ್ ಮರೀನ್ ಸೈನಿಕರ ವೈಯಕ್ತಿಕ ಮಾಹಿತಿ ಹ್ಯಾಕ್ ಮಾಡಿ ಸೋರಿಕೆ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಕೇವಲ ಸಮರಭೂಮಿಗೆ ಸೀಮಿತವಾಗಿಲ್ಲ, ಅದು ಡಿಜಿಟಲ್ ಲೋಕಕ್ಕೂ ಹಬ್ಬಿದೆ. ಇರಾನ್ ಬೆಂಬಲಿತ ಹ್ಯಾಕರ್ ಗುಂಪೊಂದು ಪಶ್ಚಿಮ ಏಷ್ಯಾದಲ್ಲಿ ನಿಯೋಜನೆಗೊಂಡಿರುವ 2,000ಕ್ಕೂ ಹೆಚ್ಚು ಅಮೆರಿಕನ್ ಮರೀನ್ ಸೈನಿಕರ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡಿ ಸೋರಿಕೆ ಮಾಡಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ದಿ ವಾಲ್ ಸ್ಟ್ರೀಟ್ ಜರ್ನಲ್ ಈ ಕುರಿತು ವರದಿ ಮಾಡಿದ್ದು, ಅಮೆರಿಕದ ರಕ್ಷಣಾ ಇಲಾಖೆ ಈ ಗಂಭೀರ ಭದ್ರತಾ ಲೋಪದ ಬಗ್ಗೆ ತನಿಖೆ ಆರಂಭಿಸಿದೆ. ಈ ದಾಳಿಯ ಹಿಂದೆ […]

ಅಂತಾರಾಷ್ಟ್ರೀಯ

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ

ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]

error: Content is protected !!