ಕರಾವಳಿ

ಸುರತ್ಕಲ್: ಅಜ್ಞಾನಿ ಪೋಷಕ, ಮುಗ್ಧ ಮಗು, ಬಲಿಪಶು ಸಮಾಜ ‘ಖಳನಾಯಕ’ ಯಾರು.?

ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸಿದ ಮೂರು ಪ್ರಶ್ನೆಗಳು ಕಳೆದ ವಾರ ಮಂಜನಾಡಿಯ ಉರುಮಣೆ ಅಶ್ರಫ್ ಮಾಲಿಕಿ ಉಸ್ತಾದ್ ಸುಸೈಡ್ ಕೇಸ್ ಸಮುದಾಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿತ್ತು. ಅವರು ಆತ್ಮಹತ್ಯೆಗೈದರು ಅನ್ನುವ ಕಾರಣಕ್ಕಾಗಿ ಅಲ್ಲ. ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮುದಾಯದೊಳಗಡೆ ವ್ಯಾಪಕ ಚರ್ಚೆಗೆ ಕಾರಣವಾದವು. ಬ್ಯಾಂಕ್ ಸಾಲದ ಕರಾಳ ಮುಖ, ಮದರಸ ಅಧ್ಯಾಪಕರನ್ನು ಜಮಾಅತ್ ಕಮಿಟಿ ಕಡಿಮೆ ಸಂಬಳದಲ್ಲಿ ದುಡಿಸಿಕೊಳ್ಳುತ್ತಿರುವುದು ಈ ಬಗ್ಗೆ ಚರ್ಚೆಗಳು ನಡೆದವು. ಇವತ್ತು ಮಸೀದಿಗೆ ಅನಗತ್ಯವಾಗಿ ಕೋಟಿಗಟ್ಟಲೆ ದುಡ್ಡು ಸುರಿಸಿ ಬಿಲ್ಡಪ್ ಕೊಡುವ ಕೆಲವು […]

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಅಪರಾದಿಗೆ 20 ವರ್ಷ ಕಠಿಣ ಸಜೆ; ಅಫ್ರಿದಿ ಯಾನೆ ಅಪ್ಪಿ ಶಿಕ್ಷೆಗೊಳಗಾದ ಅಪರಾಧಿ

ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಗುರುಪುರ ಅಡ್ಡೂರು ಕೆಳಗಿನಕೆರೆಮನೆ ನಿವಾಸಿ ಅಫ್ರಿದಿ (20) ಎಂಬಾತನಿಗೆ 20 ವರ್ಷ ಕಠಿಣ ಸಜೆ ಮತ್ತು ಒಟ್ಟು 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಬಂಟ್ವಾಳ ತಾಲೂಕಿನ 17 ವರ್ಷದ ಅಪ್ರಾಪ್ತ ಬಾಲಕಿ ಪ್ಯಾಶನ್ ಡಿಸೈನಿಂಗ್ ಕೋರ್ಸ್‌ ಕಲಿಯುತ್ತಿದ್ದಳು. ಈ ಸಂದರ್ಭ ಬಾಲಕಿಗೆ ಇನ್‌ಸ್ಟಾಗ್ರಾಂ ಮೂಲಕ ಕಾರು ಚಾಲಕ ಅಡ್ಡೂರಿನ […]

ರಾಜ್ಯ

ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಸದ್ಯಕ್ಕಿಲ್ಲ; ಆರತಿ ಮಂತ್ರ ಜಪಿಸಿದ ಸೂಟು ಬೂಟು ಕಾ..ಕಾ.. ಗಳ ಕನಸು ಭಗ್ನ

ಬೆಂಗಳೂರು: ಕರ್ನಾಟಕದಲ್ಲಿ ಅನಿವಾಸಿ ಕನ್ನಡಿಗರಿಗಾಗಿ NRI ಪ್ರತ್ಯೇಕ ಸಚಿವಾಲಯ ಅಥವಾ ಇಲಾಖೆಯನ್ನು ಸ್ಥಾಪಿಸುವ ವಿಚಾರದಲ್ಲಿ ಆಡಳಿತಾರೂಢ ಸಚಿವ ಸಂಪುಟದಲ್ಲಿ ‘ಅಪಸ್ವರ’ ಉಂಟಾಗಿದೆ. ಅಸ್ತಿತ್ವದಲ್ಲಿರುವ ಕೈಗಾರಿಕೆ ಹಾಗೂ ಐಟಿ-ಬಿಟಿ ಇಲಾಖೆಗಳ ಕೆಲಸಗಳಲ್ಲಿ ಇದು ಮರುಕಳಿಕೆ (overlap) ಆಗಬಹುದೆಂಬ ಆತಂಕದಿಂದಾಗಿ, ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಪ್ರಸ್ತಾವನೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಪ್ರತ್ಯೇಕ ಎನ್ಆರ್‌ಐ ಇಲಾಖೆಯ ಪ್ರಸ್ತಾವನೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅನಿವಾಸಿ ಕನ್ನಡಿಗರಿಗೆ ನೆರವಾಗಲು ಮತ್ತು ರಾಜ್ಯಕ್ಕೆ ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಪ್ರತ್ಯೇಕ ಸಚಿವಾಲಯವನ್ನು ರಚಿಸಲು ಮುಂದಾಗಿದ್ದರು. […]

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ; ವಿದ್ಯಾರ್ಥಿಗೆ ಹೊಡೆದಿದ್ದ ಶಿಕ್ಷಕಿ ವಿರುದ್ದದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ’ ಎಂದು ಕಟುವಾಗಿ ನುಡಿದಿರುವ ಹೈಕೋರ್ಟ್, ‌ಯುಕೆಜಿ ವಿದ್ಯಾರ್ಥಿನಿಗೆ‌ ಕೋಲಿನಿಂದ ಹೊಡೆದ ಪ್ರಕರಣವೊಂದರಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ‌ಮಂಗಳೂರಿನ 2ನೇ ಜೆಎಂಎಫ್‌‌ಸಿ ಕೋರ್ಟ್‌ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ‌ ಶಿಕ್ಷಕಿ ಆಶಾ ಕ್ರಾಸ್ತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಿಗೆ […]

ರಾಷ್ಟ್ರೀಯ

ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಪ್ರಕ್ರಿಯೆಗೆ ಅಧಿಕೃತವಾಗಿ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಸಿದ್ಧತೆ, ಮಹತ್ವದ ಸುತ್ತೋಲೆ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ವೇಗ ಸಿಕ್ಕಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ಈಗಿನಿಂದಲೇ ರಾಜಕೀಯ ಕಾವೇರತೊಡಗಿದೆ. 2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ಹೊಸದಾಗಿ ಪುನರ್‌ರಚಿತವಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ […]

ಪಾರ್ಕಿಂಗ್‌ ದೀಪ, ಸೂಚನಾ ಫಲಕ ಇಲ್ಲದೆ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಮಾತ್ರಕ್ಕೆ, ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ, ಆತನೇ ತಪ್ಪಿತಸ್ಥ ಎಂಬ ವಾದವನ್ನು ಒಪ್ಪಲಾಗದು: ಸುಪ್ರೀಂ ಕೋರ್ಟ್

ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ಪಾರ್ಕಿಂಗ್‌ ದೀಪ, ಪ್ರತಿಫಲಕ ಅಥವಾ ಸೂಚನಾ ಫಲಕಗಳಿಲ್ಲದೆ ನಿಲುಗಡೆ ಮಾಡಲಾದ ಟ್ರಕ್‌ಗೆ ಕಾರು ಚಾಲಕನೊಬ್ಬ ಹಿಂದಿನಿಂದ ಡಿಕ್ಕಿ ಹೊಡೆದರೆ, ಆ ಅಪಘಾತಕ್ಕೆ ಟ್ರಕ್ ಚಾಲಕ ಮತ್ತು ಅದರ ಮಾಲೀಕರೇ ಪ್ರಾಥಮಿಕ ಹೊಣೆಗಾರರಾಗುತ್ತಾರೆ. ಇದರಲ್ಲಿ ಕಾರು ಚಾಲಕನ ತಪ್ಪೇನೂ ಇಲ್ಲ’ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೆಹಲಿಯಲ್ಲಿ 2013ರಲ್ಲಿ 20 ವರ್ಷದ ಚಾರ್ಟರ್ಡ್‌ ಅಕೌಂಟೆನ್ಸಿ ವಿದ್ಯಾರ್ಥಿಯೊಬ್ಬನ ಸಾವಿಗೆ ಕಾರಣವಾಗಿದ್ದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಓರಿಯಂಟಲ್‌ ಇನ್ಶುರೆನ್ಸ್‌ ಕಂಪನಿ ಸಲ್ಲಿಸಿದ್ದ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!