ಕರಾವಳಿ
ಪಣಂಬೂರು: ನಾಲ್ವರು ಗಾಂಜಾ ಮಾರಾಟಗಾರರ ಬಂಧನ, 22 ಕೆ.ಜಿ ಅಕ್ರಮ ಗಾಂಜಾ ವಶ
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಮಾರಾಟ ಮಾಡಲು ಹೊರ ರಾಜ್ಯದಿಂದ ತಂದಿರುವ ಅಕ್ರಮ ಗಾಂಜಾದ ಬಗ್ಗೆ ಖಚಿತ ಮಾಹಿತಿ ಪಡೆದ ಉತ್ತರ ಉಪ-ವಿಭಾಗದ ಎ.ಸಿ.ಪಿ. ಶ್ರೀಕಾಂತ್ ಮತ್ತು ಅವರ ತಂಡದ ಅಧಿಕಾರಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ 22.250 ಗಾಂಜಾದೊಂದಿಗೆ ಆರೋಪಿತರಾದ ಕರಣ್ ಬಾಬು ರಾಂ ಜಾದವ್ ಮಹಾರಾಷ್ಟ್ರ , ಸಮೀರ್ ಶಾ ಮಧ್ಯಪ್ರದೇಶ, ಎಂ.ಹೆಚ್. ಮಯ್ಯದಿ ಹೆಜಮಾಡಿ ಗ್ರಾಮ, ಉಡುಪಿ, ಇಬ್ರಾಹಿಂ […]
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ
ಉಡುಪಿ : ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಸಹಕಾರದಲ್ಲಿ ಬೆಂಗಳೂರಿನ ಕಲಾಗ್ರಾಮದಲ್ಲಿ ಫೆ.1ರಿಂದ 6ರವರೆಗೆ ನಡೆದ ‘ಭಾರತ ರಂಗ ಮಹೋತ್ಸವ -2026 ಹಾಗೂ ರಂಗ ಪರಿಷೆ ‘ ಕಾರ್ಯಕ್ರಮದಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾಜ ಸೇವೆ, ಯಕ್ಷಗಾನ, ಜಾನಪದ, […]
ರಾಜ್ಯ
ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ; ಶಾಸಕಿ ಈ ಅನ್ನಪೂರ್ಣ ಕಳವಳ
ಬಳ್ಳಾರಿ: ಯಾವುದೇ ಸಂದರ್ಭದಲ್ಲಿ ಪತ್ರಕರ್ತರ ಕೆಲಸಕ್ಕೆ ಅಡಿಪಡಿಸುವ ಹಾಗೂ ಸುದ್ದಿ ಮಾಡದಂತೆ ಬೆದರಿಸುವ ಮೂಲಕ ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಸಂಡೂರು ಶಾಸಕಿ ಈ ಅನ್ನಪೂರ್ಣ ಅವರು ಕಳವಳ ವ್ಯಕ್ತಪಡಿಸಿದರು. ನಗರದ ನಕ್ಷತ್ರ ಹೋಟೆಲ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪತ್ರಿಕೆ ಸಂವಿಧಾನದ ನಾಲ್ಕನೇ ಅಂಗ ಅದರಲ್ಲಿಯೂ ಪ್ರಜಾಪ್ರಭುತ್ವ ಸರಿದಾರಿಯಲ್ಲಿ ಸಾಗಬೇಕಾದರೆ ಪತ್ರಿಕೆ ಅವಶ್ಯಕತೆ ಇದೆ ಮತ್ತು ಜಾಗೃತಿ ಮೂಡಿಸುವ ಜನಸಾಮಾನ್ಯರ ನೊಂದವರು […]
ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ ನಿಯಮ ಉಲ್ಲಂಘನೆ: ಹೈಕೋರ್ಟ್ ಪ್ರಶ್ನೆ
ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ. ಹೀಗೆ ಸ್ಥಾನಮಾನ ನೀಡುವಾಗ ನಿಯಮ ಉಲ್ಲಂಘನೆ ಆಗಿದ್ಯಾಕೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ […]
ರಾಷ್ಟ್ರೀಯ
400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ. ಮಹಾರಾಷ್ಟ್ರ ವಿಶೇಷ ತನಿಖಾ ತಂಡ (SIT) ವರದಿ
ಕರ್ನಾಟಕ-ಗೋವಾ ಗಡಿಯಲ್ಲಿ 2025ರ ಅಕ್ಟೋಬರ್ನಲ್ಲಿ ನಡೆದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ ಎಂದು ಮಹಾರಾಷ್ಟ್ರ ವಿಶೇಷ ತನಿಖಾ ತಂಡ (SIT) ತನ್ನ ವರದಿಯಲ್ಲಿ ತಿಳಿಸಿದೆ.ದೂರುದಾರ ಸಂದೀಪ್ ದತ್ತಾ ಪಾಟೀಲ್ ಅವರ ಹೇಳಿಕೆಗಳಲ್ಲಿ ಗಂಭೀರ ವ್ಯತ್ಯಾಸಗಳು, ಕರೆ ವಿವರಗಳು, ಪ್ರಯಾಣ ಮಾರ್ಗ ಮತ್ತು ಸಮಯದಲ್ಲಿ ಹೋಲಿಕೆಯಾಗಿಲ್ಲ ಎಂದು ತನಿಖೆಯಲ್ಲಿ ಧೃಢಪಟ್ಟಿದೆ. ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಯಲ್ಲಿ ಜನವರಿ 2026ರಂದು ಸಲ್ಲಿಸಲಾದ ದೂರಿನಲ್ಲಿ ನಾಸಿಕ್ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಗೋವಾದಿಂದ ಅಹಮದಾಬಾದ್ನ ಒಂದು ಆಶ್ರಮಕ್ಕೆ […]
ನ್ಯಾಯಮೂರ್ತಿಗಳ ವಿರುದ್ಧ ಸಿಜೆಐ ಕಚೇರಿಗೆ 2016 ರಿಂದ 2026ರ ವರೆಗೆ 8,630 ದೂರು; ಕೇಂದ್ರ ಕಾನೂನು ಸಚಿವಾಲಯ ಬಹಿರಂಗ
ನ್ಯಾಯಮೂರ್ತಿಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ 2016ರಿಂದ ಇಲ್ಲಿಯವರೆಗೆ 8,630 ದೂರುಗಳು ಬಂದಿವೆ ಎಂದು ಕೇಂದ್ರ ಕಾನೂನು ಸಚಿವಾಲಯವು ಲೋಕಸಭೆಯಲ್ಲಿ ಶುಕ್ರವಾರ ಬಹಿರಂಗಪಡಿಸಿದೆ. ಲೋಕಸಭೆಯಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಡಿಎಂಕೆ ಸಂಸದ ಮಾಥೇಶ್ವರನ್ ವಿ.ಎಸ್ ಕೇಳಿದ ಪ್ರಶ್ನೆಗೆ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಉತ್ತರ ನೀಡಿದರು. ಹೈಕೋರ್ಟ್ಗಳು ಅಥವಾ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ವಿರುದ್ಧ ಸಲ್ಲಿಕೆಯಾಗಿರುವ ಭ್ರಷ್ಟಾಚಾರ, ಲೈಂಗಿಕ ದುರ್ನಡತೆ ಅಥವಾ ಇತರ ಗಂಭೀರ ಅನುಚಿತ ವರ್ತನೆಗೆ ಸಂಬಂಧಿಸಿದ ದೂರುಗಳ ಬಗ್ಗೆ […]
ಅಂತಾರಾಷ್ಟ್ರೀಯ
ಪವಿತ್ರ ರಂಜಾನ್ ತಿಂಗಳಲ್ಲಿ ಕರುಣೆ ತೋರಿದ ಆಡಳಿತಗಾರರು: ಶಾರ್ಜಾ, ಅಜ್ಮಾನ್ ಜೈಲಿನ 872 ಕೈದಿಗಳಿಗೆ ಬಿಡುಗಡೆ ಭಾಗ್ಯ
ರಂಝಾನ್ ತಿಂಗಳು ಅನ್ನುವುದು ಕ್ಷಮೆಯ ತಿಂಗಳು. ದೇವನ ಸಂಪ್ರೀತಿ ಪಡೆಯಲು ಹಪಹಪಿಸುವ ಪಾವನ ಮಾಸವಾಗಿದೆ ರಂಝಾನ್ ತಿಂಗಳು. ಇಂತಹ ಪವಿತ್ರ ಮಾಸದಲ್ಲಿ ಶಾರ್ಜಾ ಮತ್ತು ಅಜ್ಮಾನ್ ಜೈಲಿನಲ್ಲಿರುವ ಖೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಉತ್ತಮ ಸನ್ನಡತೆ, ಸ್ವಭಾವ ಹೊಂದಿರುವ ವಿವಿಧ ಅಪರಾಧಗಳಿಗೆ ಜೈಲು ಶಿಕ್ಷೆ ಅನುಭವಿಸುತ್ತಿರುವ 872 ಖೈದಿಗಳಿಗೆ ಕ್ಷಮಾದಾನ ದೊರೆತಿದೆ. ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಶಾರ್ಜಾ ಆಡಳಿತಗಾರ ಶೇಖ್ ಡಾ. ಸುಲ್ತಾನ್ ಬಿನ್ ಮೊಹಮ್ಮದ್ ಅಲ್ ಖಾಸಿಮಿ ಅವರು ಶಾರ್ಜಾದಲ್ಲಿ 738 ಕೈದಿಗಳನ್ನು ಬಿಡುಗಡೆ […]
UAE ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ
ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು. ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಇತಿಹಾಸವನ್ನು ಸೃಷ್ಟಿಸಿತ್ತು. ಇದೇ ವೇಳೆ ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ, ಖಜಾಂಚಿಯಾಗಿ ಹಂಝಾ ಎ. ಖಾದರ್, ಸಂಚಾಲಕರಾಗಿ ಅಶ್ರಫ್ ಶಾ ಮಾಂತೂರು […]
