ಕರಾವಳಿ
ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ: ಜಾಮೀನು ಪಡೆದು ಒಂಬತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಜಾಮೀನು ಷರತ್ತು ಉಲ್ಲಂಘಿಸಿದ ಹಿನ್ನೆಲೆ ಮತ್ತೊಂದು ಪ್ರಕರಣ ದಾಖಲು ಪುತ್ತೂರು ನಗರ ಪೊಲೀಸ್ ಠಾಣಾ ಅ.ಕ್ರ: 51/2012 ಹಾಗೂ ಅ.ಕ್ರ:52/2012 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮಂಗಳೂರು) ಎಂಬಾತನನ್ನು ಮಂಗಳೂರು, ಕುಲಶೇಖರ, ಬಿಕರ್ನಕಟ್ಟೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ದಿನಾಂಕ: 27.02.2026 ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಮುಂದುವರಿದಂತೆ ಮಾನ್ಯ […]
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ.
ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸ್ವೀಪ್ಟ್ ಕಾರಿನಲ್ಲಿ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಸಮೇತ ಸ್ವೀಪ್ಟ್ ಕಾರನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರನ್ನು ಮುಸ್ತಫಾ ಸೀದಿಯಬ್ಬ, ಉಳ್ಳಾಲ. ಮೈಯದ್ದಿ, ಉಳ್ಳಾಲ. ಮೊಹಮ್ಮದ್ ಶಿಫಾನ್, ಮುಕ್ಕಚೇರಿ, ಉಳ್ಳಾಲ, ಮಂಗಳೂರು. ಎಂಬವರನ್ನು ವಶಕ್ಕೆ ಪಡೆದು, ರೂ.11 ಲಕ್ಷದ […]
ರಾಜ್ಯ
ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಭ್ರಷ್ಟಾಚಾರದ ಹಗರಣ ಬೆಳಕಿಗೆ: ಹತ್ತು ಎಕರೆ 20 ಗುಂಟೆ ಜಾಗಕ್ಕೆ ಅನಧಿಕೃತವಾಗಿ ‘ಎ’ ಖಾತಾ; 5 ಕೋಟಿಗೂ ಹೆಚ್ಚು ಕಿಕ್ಬ್ಯಾಕ್ ಆರೋಪ
ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರದ ಹಗರಣ ಬೆಳಕಿಗೆ ಬಂದಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಹೆಮ್ಮಿಗೆಪುರ, ಉತ್ತರಹಳ್ಳಿ ಹೋಬಳಿ, ಮಲ್ಲಸಂದ್ರ ಗ್ರಾಮದ ಸುಮಾರು 19 ಎಕರೆ ಜಾಗಕ್ಕೆ ನಕಲಿ PID ನಂಬರ್ ಮತ್ತು ನಕಲಿ ‘ಎ’ ಖಾತಾ ಸೃಷ್ಟಿಸಿ ಕೋಟಿಗಟ್ಟಲೇ ಹಣ ಪಡೆದ ಆರೋಪ ಎದುರಾಗಿದೆ. ಉಪ ಆಯುಕ್ತ ಅಬ್ದುಲ್ ರಬ್, ಜಂಟಿ ಆಯುಕ್ತೆ ಆರತಿ ಆನಂದ್, ರೆವೆನ್ಯೂ ಇನ್ಸ್ಪೆಕ್ಟರ್ (RI) ಶಿವಕುಮಾರ್ ARO ರಮೇಶ್ ರಾಥೋಡ್ ಈ ನಾಲ್ವರ ವಿರುದ್ಧ ಗಂಭೀರ […]
ಕೊಲೆ ಪ್ರಕರಣದಲ್ಲಿ ಸದ್ಯ ಜೈಲಲ್ಲಿರುವ ಜ್ಯೋತಿಷಿ ಕಮಲಾಕರ ಭಟ್ಟನ ವಿರುದ್ಧ ಮತ್ತೊಂದು ಗಂಭೀರ ಆರೋಪ; ಗೋಶಾಲೆ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಸಂಪಾದನೆ
ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರ ಸೇರಿದಂತೆ ಒಟ್ಟು ಎಂಟು ಆರೋಪಿಗಳು ವಸಂತ ನಾಯಕನ ಕೊಲೆ ಪ್ರಕರಣದಲ್ಲಿ ಸದ್ಯ ಕಂಬಿ ಎಣಿಸುತ್ತಿದ್ದಾರೆ. ಕಮಲಾಕರ ಭಟ್ಟ ಜ್ಯೋತಿಷಿ ವಿರುದ್ಧ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದೆ. ಗೋಶಾಲೆ ಹೆಸರಿನಲ್ಲಿ ಈತ ಕೋಟಿ ಕೋಟಿ ಆಸ್ತಿ ಸಂಪಾದಿಸಿದ್ದಾನೆ ಅನ್ನುವ ಆರೋಪ ಕೇಳಿ ಬಂದಿದೆ. ಗೋಶಾಲೆ ಹೆಸರಿನಲ್ಲಿ ಜ್ಯೋತಿಷಿ ಕಮಲಾಕಾರ್ ಭಟ್ ಕೋಟಿ ಕೋಟಿ ಆಸ್ತಿಗಳಿಕೆ ಮಾಡಿ ಶಿವಮೊಗ್ಗದ ಮುದುವಾಲ ಗ್ರಾಮದಲ್ಲಿ ಈ ಒಂದು ಜಮೀನು ಖರೀದಿಸಿದ್ದಾನೆ. ಮಠ ಹಾಗೂ ಗೋಶಾಲೆ […]
ರಾಷ್ಟ್ರೀಯ
ನ್ಯಾಯಮೂರ್ತಿಗಳ ವಿರುದ್ಧ ಸಿಜೆಐ ಕಚೇರಿಗೆ 2016 ರಿಂದ 2026ರ ವರೆಗೆ 8,630 ದೂರು; ಕೇಂದ್ರ ಕಾನೂನು ಸಚಿವಾಲಯ ಬಹಿರಂಗ
ನ್ಯಾಯಮೂರ್ತಿಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ 2016ರಿಂದ ಇಲ್ಲಿಯವರೆಗೆ 8,630 ದೂರುಗಳು ಬಂದಿವೆ ಎಂದು ಕೇಂದ್ರ ಕಾನೂನು ಸಚಿವಾಲಯವು ಲೋಕಸಭೆಯಲ್ಲಿ ಶುಕ್ರವಾರ ಬಹಿರಂಗಪಡಿಸಿದೆ. ಲೋಕಸಭೆಯಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಡಿಎಂಕೆ ಸಂಸದ ಮಾಥೇಶ್ವರನ್ ವಿ.ಎಸ್ ಕೇಳಿದ ಪ್ರಶ್ನೆಗೆ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಉತ್ತರ ನೀಡಿದರು. ಹೈಕೋರ್ಟ್ಗಳು ಅಥವಾ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ವಿರುದ್ಧ ಸಲ್ಲಿಕೆಯಾಗಿರುವ ಭ್ರಷ್ಟಾಚಾರ, ಲೈಂಗಿಕ ದುರ್ನಡತೆ ಅಥವಾ ಇತರ ಗಂಭೀರ ಅನುಚಿತ ವರ್ತನೆಗೆ ಸಂಬಂಧಿಸಿದ ದೂರುಗಳ ಬಗ್ಗೆ […]
ದೇಶದ ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ; ಪ್ರಬಲ ಕಾನೂನು ಜಾರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ; ಪ್ರಧಾನಿಗೆ ಮನವಿ
ಎಲ್ಲಾ ರಾಜ್ಯಗಳಲ್ಲೂ ಭ್ರಷ್ಟಾಚಾರ; ಪ್ರಧಾನಿಗೆ CRF ನಿಂದ 700 ಪುಟಗಳ ವರದಿ, ಕಠಿಣ ಶಿಕ್ಷೆಯ ಕಾನೂನು ಜಾರಿಗೆ ಸಲಹೆ ಭ್ರಷ್ಟರಿಗೆ ಜೀವಾವಧಿ ಮರಣದಂಡನೆ ಶಿಕ್ಷೆಯ ಜಾರಿಗೆ ತರಲು ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ […]
ಅಂತಾರಾಷ್ಟ್ರೀಯ
UAE ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ
ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು. ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಇತಿಹಾಸವನ್ನು ಸೃಷ್ಟಿಸಿತ್ತು. ಇದೇ ವೇಳೆ ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ, ಖಜಾಂಚಿಯಾಗಿ ಹಂಝಾ ಎ. ಖಾದರ್, ಸಂಚಾಲಕರಾಗಿ ಅಶ್ರಫ್ ಶಾ ಮಾಂತೂರು […]
ಲಾಗೋಸ್: 31.5 ಕೆ.ಜಿ ಕೊಕೇನ್ ವಶಪಡಿಸಿಕೊಂಡ ನೈಜೀರಿಯಾ ಪೊಲೀಸರು, 22 ಭಾರತೀಯರ ಬಂಧನ
ಲಾಗೋಸ್: ಹಡಗಿನಲ್ಲಿದ್ದ 31.5 ಕೆ.ಜಿ ಕೊಕೇನ್ ವಶಪಡಿಸಿಕೊಂಡ ನೈಜೀರಿಯಾ ಪೊಲೀಸರು, 22 ಭಾರತೀಯರನ್ನು ಬಂಧಿಸಿದ್ದಾರೆ. ಲಾಗೋಸ್ನ ಅಪಾಪಾ ಬಂದರಿನ ಜಿಡಿಎನ್ಎಲ್ ಟರ್ಮಿನಲ್ನಲ್ಲಿದ್ದ ‘ಎಂವಿ ಅರುಣ ಹುಲ್ಯ’ ಎಂಬ ವ್ಯಾಪಾರಿ ಹಡಗನ್ನು ಶೋಧಿಸಿದ ನೈಜೀರಿಯಾದ ಮಾದಕವಸ್ತು ನಿಗ್ರಹ ದಳದ ಅಧಿಕಾರಿಗಳಿಗೆ ಕೊಕೇನ್ ದೊರೆತಿದೆ. ಎಂದು ವೆಬ್ ಪೋರ್ಟಲ್ ‘ಪಂಚ್’ ವರದಿ ಮಾಡಿದೆ. ಕೊಕೇನ್ ಪತ್ತೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದವರಲ್ಲಿ ಹಡಗಿನ ಮಾಸ್ಟರ್ ಶರ್ಮಾ ಶಶಿ ಭೂಷಣ್ ಮತ್ತು 21 ಸಿಬ್ಬಂದಿ ಇದ್ದಾರೆ ಎಂದು ಮಾಧ್ಯಮ ಮತ್ತು ವಕಾಲತ್ತು ನಿರ್ದೇಶಕ ಫೆಮಿ […]
