ಕರಾವಳಿ

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು

ಬಂಟ್ವಾಳದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಬ್ದುಲ್ ರಹ್ಮಾನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಬಂಧಿತರಾಗಿದ್ದ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. […]

ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಡಿವೈಎಫ್ಐ ಕಾರ್ಯಕರ್ತ ವರ್ಷಿತ್ ಕುಲಾಲ್

ಸೋಮವಾರ ಸಂಜೆ ಕುತ್ತಾರ್ ಭಾಗದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳು ನಿಷ್ಕ್ರಿಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುತ್ತಾರ್ ಬಟ್ಟೆದಡಿ ಪ್ರದೇಶದ ಡಿವೈಎಫ್ಐಯ ಸಕ್ರಿಯ ಕಾರ್ಯಕರ್ತ ವರ್ಷಿತ್ ಕುಲಾಲ್ (21) ಇನ್ನಿಲ್ಲ ಎಂಬ ನೋವಿನ ಸುದ್ದಿ ನಿಜಕ್ಕೂ ಆಘಾತಕಾರಿ. ಮತ್ತೆ ಗುಣಮುಖನಾಗಿ ನಮ್ಮ ನಡುವೆ ಮರಳಿ ಬರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ, ವೈದ್ಯರು ವರ್ಷಿತ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದಾಗ ಆ ಕುಟುಂಬ ಎದುರಿಸಿದ ನೋವನ್ನು ಪದಗಳಲ್ಲಿ ಹೇಳಲಾಗದು. ಕಣ್ಣೆದುರೇ ಬೆಳೆಸಿದ ಮಗನನ್ನು ಕಳೆದುಕೊಂಡ ದುಃಖ ಒಂದೆಡೆಯಾದರೆ, […]

ರಾಜ್ಯ

ಸಿದ್ದು ಕೊರಳಿಗೆ ಗಂಟೆ ಕಟ್ಟುವವರು ಯಾರು.?, ಬೇರೆ ದಾರಿಯತ್ತ ರಾಜಣ್ಣ?, ಯಡಿಯೂರಪ್ಪ ಖುಷಿಗೆ ಏನು ಕಾರಣ?

✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಗೆ ಹೋದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿ ತುಂಬ ಕಕ್ಕುಲತೆ ತೋರಿಸಿದರಂತೆ. ‘ಸಿದ್ಧರಾಮಯ್ಯಾಜೀ, ನೀವು ನಮ್ಮ ಪಕ್ಷದ ಆಸ್ತಿ. ಮುಂದಿನ ದಿನಗಳಲ್ಲಿ ನಾವು ಮರಳಿ ಕರ್ನಾಟಕದ ಅಧಿಕಾರ ಸೂತ್ರ ಹಿಡಿಯಲು ನಿಮ್ಮ ಶಕ್ತಿ ಮುಖ್ಯ. 2029 ರ ಲೋಕಸಭಾ ಚುನಾವಣೆಯಲ್ಲಿ ನಾವು ಬಿಜೆಪಿ ಮಿತ್ರಕೂಟವನ್ನು ಎದುರಿಸಬೇಕು ಎಂದರೆ 2028 ರ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಕರ್ನಾಟಕವನ್ನು ಗೆಲ್ಲಲೇಬೇಕು. […]

ರಾಜ್ಯದಲ್ಲೂ SIR ಕರಾಳ ಮುಖದ ದರ್ಶನ.. ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತಂದ ಹೆಮ್ಮೆಯ ಪುತ್ರರನ್ನೇ ಅನುಮಾನಿಸುವ ಚುನಾವಣಾ ಆಯೋಗ

ಐಎಎಸ್, ಭಾರತ ರತ್ನ, ಪದ್ಮಶ್ರೀ ಅಂತಹ ಉನ್ನತ ಪ್ರಶಸ್ತಿ, ಪದವಿ ಪಡೆದರೂ ಅನುಮಾನ.! SIR ಕರಾಳ ಮುಖದ ದರ್ಶನ ರಾಜ್ಯದಲ್ಲೂ ಬೆಳಕಿಗೆ ಬರುತ್ತಿದೆ. SIR ಜಾರಿಯಾದರೆ ತಪ್ಪೇನು..? ಪಾಕಿಸ್ತಾನ, ಬಾಂಗ್ಲಾದೇಶದ ನುಸುಳುಕೋರರ ಪತ್ತೆಯಾಗುತ್ತದೆ ಅನ್ನುವ ಕಥೆ ಕಟ್ಟಿ ಜಾರಿಗೆ ಬಂದ SIR ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತಂದ ಹೆಮ್ಮೆಯ ಪುತ್ರರನ್ನೇ ಅನುಮಾನದ ದೃಷ್ಟಿಯಿಂದ ನೋಡುವ ಹಂತಕ್ಕೆ ಬಂದು ನಿಂತಿದೆ ಅನ್ನುವುದು ಸುಳ್ಳಲ್ಲ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ ನಡೆದ ಕೆಲವೊಂದು ಘಟನಾವಳಿಗಳೇ ಇದಕ್ಕೆ ಸಾಕ್ಷಿ. ಡಿಸಿಯಾಗಿದ್ದವರನ್ನೇ ಅನುಮಾನಿಸಿದ […]

ರಾಷ್ಟ್ರೀಯ

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ; ಪ್ರೀತಿಸುವ ನಾಟಕ, ಎಂಟು ಮಂದಿ ಕಾಮುಕರಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ. ಆರೋಪಿಗಳ ಬಂಧನ

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನೆಪವೊಡ್ಡಿ 8 ಮಂದಿ ಕಾಮುಕರು ಅನೇಕ ಬಾರಿ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅಲ್ವಾಲ್ ಮತ್ತು ಸುತ್ತಮುತ್ತಲಿನ ವಿವಿಧ ಸ್ಥಳಗಳಲ್ಲಿ ಸುಮಾರು ಎಂಟು ಮಂದಿ ಪುರುಷರು 16 ವರ್ಷದ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದಳು ಎಂದು ತಿಳಿದು ಬಂದಿದೆ. ಮಚಾ ಬೊಲ್ಲಾರಮ್ ನಿವಾಸಿ ಮತ್ತು ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಬಾಲಕಿ, ಹತ್ತನೇ ತರಗತಿಯಲ್ಲಿ ಓದುತ್ತಿದ್ದಾಗ ಜೆರ್ರಿ […]

ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ. 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಅಥವಾ ಧಾರ್ಮಿಕ ಬೋಧನೆ ನೀಡುವ ಎಲ್ಲ ಸಂಸ್ಥೆಗಳನ್ನು ನಿಯಂತ್ರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ಈ ಹಿಂದೆ ಶಿಕ್ಷಣ ಸಚಿವಾಲಯಕ್ಕೆ ಸೂಚಿಸಿತ್ತು. ಆದರೆ ಈ ಆದೇಶವನ್ನು ಸಚಿವಾಲಯ ಪಾಲಿಸಿಲ್ಲ ಎಂಬುದನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು. ನ್ಯಾಯಮೂರ್ತಿಗಳಾದ ದೀಪಂಕರ್‌ ದತ್ತಾ, ಶೀಲ್‌ ನಾಗೂ ಅವರಿದ್ದ […]

ಅಂತಾರಾಷ್ಟ್ರೀಯ

ಬಹುರಾಷ್ಟ್ರಿಯ ಶೃಂಗಸಭೆಗಳಿಂದ ದೇಶಕ್ಕೆ ಏನು ಪ್ರಯೋಜನ: ಚಿದಂಬರಂ

ಭಾರತದ ರಾಜತಾಂತ್ರಿಕತೆ, ಒಗ್ಗೂಡಿಸುವಿಕೆ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ: ತರೂರು ಬ್ರಿಕ್ಸ್ ಶೃಂಗಸಭೆಯ ಪ್ರಸ್ತುತತೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಬ್ರಿಕ್ಸ್ ಶೃಂಗಸಭೆಯಿಂದ ಭಾರತ ಪಡೆದಿರುವ ಸ್ಪಷ್ಟ ಪ್ರಯೋಜನಗಳನ್ನು ಪ್ರಶ್ನಿಸಿದ ನಂತರ, ಈ ಗುಂಪು ಜಾಗತಿಕ ದಕ್ಷಿಣಕ್ಕೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ ಮತ್ತು ಭಾರತದ ರಾಜತಾಂತ್ರಿಕ ಸಮಾವೇಶದ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ವರದಿಯೊಂದು ತಿಳಿಸಿದೆ. ಬ್ರಿಕ್ಸ್ ಶೃಂಗಸಭೆಯ ಮೊದಲು ಮಾತನಾಡಿದ ತರೂರ್, 11 ದೇಶಗಳ ಗುಂಪು ವಿಶ್ವದ ಜನಸಂಖ್ಯೆ ಮತ್ತು ಜಾಗತಿಕ […]

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

error: Content is protected !!