ಕರಾವಳಿ

ಅಳದಂಗಡಿ ಪಿಲ್ಯ ಗ್ರಾಮದ ಬರಾಯಕೆರೆ ಅಕ್ರಮ ಗಣಿಗಾರಿಕೆ: ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ ದೂರು

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಜಂಟಿ ಬೇಟಿ; ಸ್ಥಳ ಪರಿಶೀಲನೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಸೋಮವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು […]

ಕಾಂತರಾಜ್, ಜಯಪ್ರಕಾಶ್ ಹೆಗ್ಡೆ ಹಾಗೂ ಮಧುಸೂದನ್ ನಾಯಕ್ ವರದಿಗಳ ಜಾರಿಗೆ ದ.ಕ ಅಹಿಂದ ನಾಯಕರ ಆಗ್ರಹ.

ಕರ್ನಾಟಕ ರಾಜ್ಯಾದ್ಯಂತ ಅಹಿಂದ ಚಳುವಳಿಯ ಭಾಗವಾಗಿ, ಪ್ರತಿ ಜಿಲ್ಲೆಯಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಟವನ್ನು ಬಲಪಡಿಸಲಾಗುತ್ತಿದೆ. ಇದರ ಭಾಗವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿ, ಕಾಂತರಾಜ್ ವರದಿ, ಜಯಪ್ರಕಾಶ್ ಹೆಗ್ಡೆ ವರದಿ ಹಾಗೂ ಮಧುಸೂದನ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಕೂಡಲೇ ಬಹಿರಂಗಪಡಿಸಿ, ಜಾರಿಗೊಳಿಸಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಯಿತು. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸಲು ಈ ವರದಿಗಳು […]

ರಾಜ್ಯ

ನಕಲಿ ಔಷಧ ಮಾರಾಟ ಪ್ರಕರಣಕ್ಕೆ ಮಹತ್ವದ ತಿರುವು; ವಿದೇಶದಲ್ಲಿ ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ ನಕಲಿ ಹಾಗೂ ಕಳಪೆ ಔಷಧ ಮಾರಾಟ ಪ್ರಕರಣಕ್ಕೆ ಈಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಬೆಂಗಳೂರಿನಲ್ಲಿ ನಡೆದ ಔಷಧ ದಂಧೆಯ ಹಿಂದೆ ವಿದೇಶಿ ಸಂಪರ್ಕವಿರುವುದು ತನಿಖೆಯಲ್ಲಿ ಬಯಲಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ಎನ್ನಲಾದ ನಾಗರಬಾವಿಯ ಪ್ರಶಾಂತ್‌ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಬಳಸುವ ಔಷಧಗಳು ಪಶ್ಚಿಮ ಏಷ್ಯಾದ ಕೆಲವು ದೇಶಗಳಲ್ಲಿ […]

ಪ. ಜಾತಿ – ಪಂಗಡಗಳ ಹಲವು ಬೇಡಿಕೆ ಹಾಗೂ ಡಿಸಿ ಮನ್ನಾ ಜಮೀನು ಹಂಚಿಕೆ ವಿಚಾರವಾಗಿ ರಕ್ಷಿತ್ ಶಿವರಾಂ ನೇತ್ರತ್ವದಲ್ಲಿ ಸಚಿವರುಗಳ ಹಾಗೂ ಕೆಪಿಸಿಸಿ ಅಧ್ಯಕ್ಷರ ಬೇಟಿ

ಪ.ಜಾತಿ, ಪ.ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಕೆಪಿಸಿಸಿ ಕಛೇರಿಯಲ್ಲಿ ಹಾಗೂ ರಾಜ್ಯ ಕಂದಾಯ ಸಚಿವ, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರನ್ನು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ […]

ರಾಷ್ಟ್ರೀಯ

ಡೇತ್ ನೋಟಲ್ಲಿ ದೋಷಿತನಾದ ಮಾತ್ರಕ್ಕೆ ಪ್ರಚೋದನೆಯ ಅಪರಾಧವಾಗಲ್ಲ

FIR ದಾಖಲಿಸಿದ ಮಾತ್ರಕ್ಕೆ ಆತ್ಮಹತ್ಯೆಗೆ ಕುಮ್ಮಕ್ಕು ಎನ್ನಲಾಗದು: ಸುಪ್ರೀಂ ಕೋರ್ಟ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದ ಮಾತ್ರಕ್ಕೆ ಆತನನ್ನು ಕ್ರಿಮಿನಲ್ ಅಪರಾಧಕ್ಕೆ ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನಿನಡಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ದೃಢ ಹಕ್ಕನ್ನು ಹೊಂದಿದ್ದಾರೆ ಎಂದು ಅದು ಒತ್ತಿ ಹೇಳಿದೆ. ಯಾರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೋ ಅವರು ನಂತರ ಆತ್ಮಹತ್ಯೆ ಮಾಡಿಕೊಂಡರು ಎಂಬ ಕಾರಣಕ್ಕೆ […]

ಪೋಷಕರನ್ನು ನೋಡಿಕೊಳ್ಳದಿದ್ದರೆ ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರು ಖಾಲಿ ಮಾಡಬೇಕು

ಹಿರಿಯ ನಾಗರಿಕರ ರಕ್ಷಣೆ, ಭದ್ರತೆ ಮತ್ತು ಗೌರವಯುತ ಜೀವನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿದ್ದಲ್ಲಿ, ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರನ್ನು ತೆರವುಗೊಳಿಸಲು ‘ತಂದೆ-ತಾಯಿ ಮತ್ತು ಹಿರಿಯ ನಾಗರಿಕರ ಪೋಷಣೆ ಹಾಗೂ ಕಲ್ಯಾಣ ಕಾಯ್ದೆ- 2007’ ರಡಿಯಲ್ಲಿ ರಚಿಸಲಾದ ನ್ಯಾಯಾಧಿಕರಣಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು, ಪುತ್ರ ಮತ್ತು ಸೊಸೆಯನ್ನು ಮನೆಯಿಂದ ತೆರವುಗೊಳಿಸುವಂತೆ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

error: Content is protected !!