ಕರಾವಳಿ
ಅಪ್ಪಟ ಜಾತ್ಯಾತೀತವಾದಿ, ಕೋಮುವಾದಿಗಳಿಗೆ ಸಿಂಹ ಸ್ವಪ್ನ, ನೇರ ನಡೆನುಡಿಯ ದಲಿತ ನಾಯಕ ಶೇಖರ್ ಕುಕ್ಕೇಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ
ಮೃದು ಹಿಂದುತ್ವವಾದಿಗಳನ್ನು ದೂರ ಇಟ್ಟು ಅರ್ಹರನ್ನು ಪರಿಗಣಿಸಲಿ; ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅತ್ಯಂತ ಸೂಕ್ತ ಮತ್ತು ಇಂದಿನ ಕಾಲಘಟ್ಟಕ್ಕೆ ಅತ್ಯಂತ ತುರ್ತು ಅಗತ್ಯವಾಗಿ ಮುಂಚೂಣಿಯಲ್ಲಿ ಕಾಣಿಸುವ ಏಕೈಕ ವ್ಯಕ್ತಿ ಶೇಖರ್ ಕುಕ್ಕೇಡಿ. ಸಾಮಾಜಿಕ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಯುವ ನಾಯಕ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಮಾಜಿ ಅಧ್ಯಕ್ಷ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, […]
ರೈಲ್ವೆ ವಿಭಾಗ ಬದಲಾವಣೆ ಐತಿಹಾಸಿಕ ಸಾಧನೆ ಎಂದು ಹೇಳಿಕೊಳ್ಳುವ ನೈತಿಕ ಹಕ್ಕು ಬಿಜೆಪಿಗಿಲ್ಲ; ಇದು ಸಾಧನೆಯಲ್ಲ—ಜನರ ಕಣ್ಣಿಗೆ ಮಣ್ಣು ಎರಚುವ ರಾಜಕೀಯ ಪ್ರಚಾರ: ಸಂತೋಷ್ ಬಜಾಲ್
ಮಂಗಳೂರು ರೈಲ್ವೆಯನ್ನು ಮೈಸೂರು ವಿಭಾಗಕ್ಕೆ ಸೇರಿಸಿರುವುದನ್ನೇ ಬಿಜೆಪಿ ತನ್ನ ಅತೀ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ಳುವುದು ದಕ್ಷಿಣ ಕನ್ನಡದ ಜನತೆಗೆ ಮಾಡುವ ಮತ್ತೊಂದು ರಾಜಕೀಯ ಮೋಸ. ಸತತ ಹಲವು ಅವಧಿಗಳಲ್ಲಿ ದಕ್ಷಿಣ ಕನ್ನಡದಿಂದ ಬಿಜೆಪಿಯ ಸಂಸದರನ್ನು ನಿರಂತರವಾಗಿ ಆಯ್ಕೆ ಮಾಡಿ ಕಳುಹಿಸಿದರೂ, ಜಿಲ್ಲೆಯ ರೈಲ್ವೆ ಮೂಲಸೌಕರ್ಯಕ್ಕೆ ಅಗತ್ಯವಾದ ಅಭಿವೃದ್ಧಿಯನ್ನು ತರುವಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಮಂಗಳೂರು ಸೆಂಟ್ರಲ್ನಂತಹ ಪ್ರಮುಖ ರೈಲು ನಿಲ್ದಾಣಕ್ಕೆ ಸಮರ್ಪಕ ಪ್ಲಾಟ್ಫಾರಂ ವಿಸ್ತರಣೆ, ಹೆಚ್ಚಿನ ರೈಲುಗಳ ನಿಲುಗಡೆ, ಹೊಸ ರೈಲು ಸೇವೆಗಳು ಹಾಗೂ ಮಂಗಳೂರು ಕೇಂದ್ರವಾಗಿರುವ […]
ರಾಜ್ಯ
ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಬಂಧನ, ನೋಟಿಸ್ ನೀಡುವಿಕೆಗೆ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸದೇ ಹೋದರೆ ಗಂಭೀರ ಪರಿಣಾಮ ಎದುರಿಸಬೇಕು: ಹೈಕೋರ್ಟ್
ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವ ಹಾಗೂ ನೋಟಿಸ್ ನೀಡುವಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸದೇ ಹೋದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾದೀತು ಎಂದು ಹೈಕೋರ್ಟ್ ಪೊಲೀಸರಿಗೆ ಕಠಿಣ ಎಚ್ಚರಿಕೆ ನೀಡಿದೆ. ಮೋಹನ್ ಗೌಡ ಎಂಬವರ ವಿರುದ್ಧ ವೈಟ್ಫೀಲ್ಡ್ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಪೊಲೀಸರ ವರ್ತನೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಕಾಣಿಸುತ್ತಿಲ್ಲವೇ ಎಂದು […]
ಎಸ್ ಐ ಆರ್ ನಾಲ್ಕು ದಿನಗಳ ವಿಶೇಪ ಅಭಿಯಾನ. ಆಗಸ್ಟ್ 29 ಮತ್ತು 30, ಸೆಪ್ಟೆಂಬರ್ 19 ಮತ್ತು 20
ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (SIR) ಕ್ಲೇಮು, ಆಕ್ಷೇಪ ಹಾಗೂ ನೋಂದಣಿಗೆ ಅರ್ಜಿ ಸಲ್ಲಿಸುವಲ್ಲಿ ಮತದಾರರಿಗೆ ನೆರವಾಗಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ನಾಲ್ಕು ದಿನಗಳ ವಿಶೇಷ ಅಭಿಯಾನವನ್ನು ಘೋಷಿಸಿದೆ. ಆಗಸ್ಟ್ 29 ಮತ್ತು 30, ಸೆಪ್ಟೆಂಬರ್ 19 ಮತ್ತು 20ರಂದು ಈ ವಿಶೇಷ ಅಭಿಯಾನ ನಡೆಯಲಿದೆ.ನಾಲ್ಕು ದಿನ ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯು ಸೂಚಿಸಿದೆ. ಈ ಸಂದರ್ಭದಲ್ಲಿ ಅವರು ಅಗತ್ಯ ಪ್ರಮಾಣದಷ್ಟು ಅರ್ಜಿ ನಮೂನೆ-6, 7 ಮತ್ತು 8 ಅನ್ನು […]
ರಾಷ್ಟ್ರೀಯ
2029 ಕ್ಕೆ ದೇಶದಲ್ಲಿ ಜೆನ್ ಝೀ ಗಳದ್ದೇ ಕಾರುಬಾರು.. ಜೆನ್ ಝೀ ಗಳ ಹೃದಯ ಗೆದ್ದವರಿಗೆ ಗದ್ದುಗೆ ಫಿಕ್ಸ್!
ಹಿಂದೂ -ಮುಸ್ಲಿಂ ಖೇಲ್ ಖತಂ.. ಜೆನ್ ಝೀ -ಮಿಲೇನಿಯಲ್ಸ್ ತೀರ್ಪೆ ಫೈನಲ್ 2029 ಕ್ಕೆ ಚುನಾವಣೆಯ ಇಶ್ಯೂ ಯಾವುದೆಂದರೆ ಒಳ್ಳೆಯ ಗುಣಮಟ್ಟದ ಶಿಕ್ಷಣ, ಉಜ್ವಲ ಭವಿಷ್ಯಕ್ಕಾಗಿ ಯುವಜನತೆಗೆ ಉದ್ಯೋಗ, ಪರಿಸರದ ಬಗ್ಗೆ ಕಾಳಜಿ, ಆರೋಗ್ಯಕರ ಜೀವನ, ಬೆಲೆ ಏರಿಕೆಗೆ ಕಡಿವಾಣ, ಸ್ವಾಭಿಮಾನದ ಬದುಕು ಇದೇ ಮುಖ್ಯ ಅಸ್ತ್ರ ವಾಗುವ ಸಾಧ್ಯತೆಗಳಿವೆ. ದೇಶದೆಲ್ಲೆಡೆ ಜೆನ್ ಝೀ ಗಳ ಸಂಖ್ಯೆ ಗಣನೀಯ ಮಟ್ಟದಲ್ಲಿರುವುದರಿಂದ ಈ ತಲೆಮಾರನ್ನು ರಾಜಕಾರಣಿಗಳು ಭಾವನಾತ್ಮಕ ಅಂಶಗಳನ್ನು ಮುಂದಿಟ್ಟು ಮಂಕು ಮರುಳು ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಒಟ್ಟು […]
ಡೇತ್ ನೋಟಲ್ಲಿ ದೋಷಿತನಾದ ಮಾತ್ರಕ್ಕೆ ಪ್ರಚೋದನೆಯ ಅಪರಾಧವಾಗಲ್ಲ
FIR ದಾಖಲಿಸಿದ ಮಾತ್ರಕ್ಕೆ ಆತ್ಮಹತ್ಯೆಗೆ ಕುಮ್ಮಕ್ಕು ಎನ್ನಲಾಗದು: ಸುಪ್ರೀಂ ಕೋರ್ಟ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದ ಮಾತ್ರಕ್ಕೆ ಆತನನ್ನು ಕ್ರಿಮಿನಲ್ ಅಪರಾಧಕ್ಕೆ ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನಿನಡಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ದೃಢ ಹಕ್ಕನ್ನು ಹೊಂದಿದ್ದಾರೆ ಎಂದು ಅದು ಒತ್ತಿ ಹೇಳಿದೆ. ಯಾರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೋ ಅವರು ನಂತರ ಆತ್ಮಹತ್ಯೆ ಮಾಡಿಕೊಂಡರು ಎಂಬ ಕಾರಣಕ್ಕೆ […]
ಅಂತಾರಾಷ್ಟ್ರೀಯ
ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ
ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
