ಕರಾವಳಿ

ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು

ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆಯುರ್ವೇದ ಥೆರಪಿಸ್ಟ್ ಸಹಿತ ಮೂವರು ಅಂದರ್ ಮಂಗಳೂರು ನಗರದಲ್ಲಿ ಮಾದಕ ವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ನಿರಂತರವಾಗಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ಜೈಲಿಗೆ ಅಟ್ಟುತ್ತಿದ್ದಾರೆ. ಅಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ […]

ಕರಾವಳಿಯಲ್ಲಿ ‘ಬಡ್ಡಿ’ ಮಕ್ಕಳದ್ದೇ ಗೂಂಡಾ ದರ್ಬಾರ್..!

ರಕ್ತಬೀಜಾಸುರರ ಅಟ್ಟಹಾಸಕ್ಕೆ ಬಡ, ಮಧ್ಯಮ ಕುಟುಂಬಗಳೇ ಬರ್ಬಾದ್ “ಸಾಲ ಮಾಡಿಯಾದರೂ ತುಪ್ಪ ತಿನ್ನು” ಇದು ಹಳೆಯ ಗಾದೆ ಮಾತು. ಆದರೆ ಬಡ, ಮಧ್ಯಮ ವರ್ಗದ ಕುಟುಂಬದ ಸ್ಥಿತಿಗತಿ ಇದಕ್ಕಿಂತ ಭಿನ್ನ. ದುಡಿಮೆಯ ಹಣ ಕುಟುಂಬ ಸಾಕುವುದೇ ಕಷ್ಟವಾಗುತ್ತದೆ. ಇಂದಿನ ಮಿತಿಮೀರಿದ ದರ ಏರಿಕೆ ನಡುವೆ ಕುಟುಂಬದ ಬೇಕು ಬೇಡವನ್ನು ಪೂರೈಸುವುದು ಯಜಮಾನನಿಗೆ ದೊಡ್ಡ ಸವಾಲು. ಇದರ ನಡುವೆ ಸ್ಕೂಲ್ ಫೀಸ್, ಅನಾರೋಗ್ಯ ಸಂಭವಿಸಿದರೆ ಆಸ್ಪತ್ರೆಗೆ ಹಾಕುವ ಕಾಸು ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಇಂತಹ ಕುಟುಂಬದ ಸ್ಥಿತಿ […]

ರಾಜ್ಯ

ಪ. ಜಾತಿ – ಪಂಗಡಗಳ ಹಲವು ಬೇಡಿಕೆ ಹಾಗೂ ಡಿಸಿ ಮನ್ನಾ ಜಮೀನು ಹಂಚಿಕೆ ವಿಚಾರವಾಗಿ ರಕ್ಷಿತ್ ಶಿವರಾಂ ನೇತ್ರತ್ವದಲ್ಲಿ ಸಚಿವರುಗಳ ಹಾಗೂ ಕೆಪಿಸಿಸಿ ಅಧ್ಯಕ್ಷರ ಬೇಟಿ

ಪ.ಜಾತಿ, ಪ.ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಕೆಪಿಸಿಸಿ ಕಛೇರಿಯಲ್ಲಿ ಹಾಗೂ ರಾಜ್ಯ ಕಂದಾಯ ಸಚಿವ, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರನ್ನು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ […]

ನಕಲಿ ಔಷಧಿ ಜಾಲವನ್ನು ಬೇಧಿಸಿದ ಅಧಿಕಾರಿಗಳು; 5 ಕೋಟಿ ರೂ. ಮೌಲ್ಯದ ಔಷಧಿ, ಸಲಕರಣೆ ವಶ

ಬೆಂಗಳೂರು ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರು ಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಔಷಧಿಗಳು ಹಾಗೂ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಶಾಂತ್ ಎಂಬಾತ ಸ್ಥಳೀಯರಿಂದ ಫಾರ್ಮ್‌ಹೌಸ್ ವೊಂದನ್ನು ಗುತ್ತಿಗೆಗೆ ಪಡೆದು, ಕಳೆದೊಂದು ವರ್ಷದಿಂದ ಈ ಕೃತ್ಯ ನಡೆಸುತ್ತಿದ್ದನು. ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಿಂದ […]

ರಾಷ್ಟ್ರೀಯ

ಇಡೀ ದೇಶಕ್ಕೆ 2002ರ ವರ್ಷವನ್ನು ಮೂಲ ವರ್ಷವಾಗಿ ನಿಗದಿಪಡಿಸಲಾಗಿದೆ. ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬರುವುದಿಲ್ಲ: ಸುಪ್ರೀಂ ಕೋರ್ಟ್

ಸಿಕ್ಕಿಂನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (SIR‌) 2002ನೇ ವರ್ಷವನ್ನು ಆಧಾರವಾಗಿರಿಸಿಕೊಂಡಿರುವ ಚುನಾವಣಾ ಆಯೋಗದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ. ಸಿಕ್ಕಿಂ ಮೂಲನಿವಾಸಿ ಸುರಕ್ಷಾ ಸಂಘವು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠವು ವಜಾಗೊಳಿಸಿದೆ. ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗಾಗಿ 2002ರ ಬದಲಿಗೆ 1993 ಅನ್ನು ಮೂಲ ವರ್ಷವಾಗಿ ನಿಗದಿಪಡಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ […]

ಅಪಘಾತದಲ್ಲಿ ಪೋಷಕರು ಮೃತಪಟ್ಟರೆ, ವಿವಾಹಿತ, ಉದ್ಯೋಗಿ ಮಕ್ಕಳು ಕೂಡ ಪರಿಹಾರ ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್

ಅಪಘಾತದಲ್ಲಿ ಪೋಷಕರು ಮೃತಪಟ್ಟ ಸಂದರ್ಭದಲ್ಲಿ, ಅವರ ವಯಸ್ಕ, ವಿವಾಹಿತ ಹಾಗೂ ಲಾಭದಾಯಕ ಉದ್ಯೋಗದಲ್ಲಿರುವ ಮಕ್ಕಳು ಕೂಡ ಪರಿಹಾರ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವಲಂಬನೆಯ ಪ್ರಮಾಣಕ್ಕೆ ಅನುಗುಣವಾಗಿ ಈ ಮಕ್ಕಳೂ ಪರಿಹಾರಕ್ಕಾಗಿ ಕಾನೂನುಬದ್ಧವಾಗಿ ಅರ್ಹರು ಎಂದು ನ್ಯಾಯಮೂರ್ತಿಗಳಾದ ಎನ್. ಕೋಟೀಶ್ವರ್ ಸಿಂಗ್ ಮತ್ತು ಎನ್.ವಿ. ಅಂಜಾರಿಯ ಅವರ ಪೀಠವು ತೀರ್ಪು ನೀಡಿದೆ. ಕಾನೂನುಬದ್ಧ ಪ್ರತಿನಿಧಿ ಎಂಬುದನ್ನು ಮೋಟಾರು ವಾಹನ ಕಾಯ್ದೆಯಲ್ಲಿ ವ್ಯಾಖ್ಯಾನಿಸಿಲ್ಲವಾದರೂ, ಮೃತ ವ್ಯಕ್ತಿಯ ಆಸ್ತಿಯನ್ನು ಕಾನೂನುಬದ್ಧವಾಗಿ ಪ್ರತಿನಿಧಿಸುವವರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರು […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

error: Content is protected !!