ಕರಾವಳಿ
ಕೋಮುವಾದಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಆಸೇ ನಿಯಮ ಉಲ್ಲಂಘಿಸಿದ ದ.ಕ ಜಿಲ್ಲಾಧಿಕಾರಿ ವಿರುದ್ದ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು: ನವೀನ್ ಸೂರಿಂಜೆ
ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಪಾಠ ಕಲಿಯಬೇಕಾದ ಅವಶ್ಯಕತೆ ಇದೆ. ಕಾನೂನು ಸುವ್ಯವಸ್ಥೆ ಎನ್ನುವುದು ಕೇವಲ ಕಾನೂನಿನಿಂದ ಮಾತ್ರ ಜಾರಿಯಲ್ಲಿರುವುದಲ್ಲ. ನಮ್ಮ ನಡತೆಯೂ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ದಂಡಾಧಿಕಾರಿ ಹುದ್ದೆಯವರಂತೂ ಈ ಬಗ್ಗೆ ಹೆಚ್ಚು ಎಚ್ಚರ ಹೊಂದಿರಬೇಕಾಗುತ್ತದೆ. ಇಂದು ನಡೆಯುತ್ತಿರುವ ಮೂಡಬಿದ್ರೆ ಕಂಬಳದ ಆಹ್ವಾನ ಪತ್ರಿಕೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ ಎಚ್ ವಿ ಹೆಸರುಗಳಿದ್ದವು. ಆ ಕಂಬಳ […]
ಮಂಗಳೂರು: ಬರ್ಕೆ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ಕಳ್ಳನ ಬಂಧನ; ಲಕ್ಷಾಂತರ ರೂ. ಬೆಲೆಬಾಳುವ ಚಿನ್ನದ ಒಡವೆ, ನಗದು ವಶ
ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ KSRTC ಬಸ್ಸು ನಿಲ್ದಾಣದಲ್ಲಿ ದಿನಾಂಕ: 23-01-2026 ರಂದು ಸಂಜೆ ಸಮಯ ಏಳು ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗನ್ನು ಕಳವುಗೈದಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂ: 10/2026 ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ […]
ರಾಜ್ಯ
ಮಕ್ಕಳ ಮೇಲೆ ‘ಸಾಮಾಜಿಕ ಮಾಧ್ಯಮ’ ಅಡ್ಡಪರಿಣಾಮ; ಜಾಗೃತಿಗಾಗಿ ಪಠ್ಯಕ್ರಮ ಆರಂಭಿಸಿ.. ಸರ್ಕಾರಕ್ಕೆ ವಕೀಲ ಮನೋರಾಜ್ ಪ್ರಸ್ತಾವನೆ
ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ ‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ […]
ರಾಜಕೀಯ ಪಕ್ಷದ ಪ್ರಭಾವಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ; ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖೆ ಅಗತ್ಯವಿದೆ: ಹೈಕೋರ್ಟ್
ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ದಾಖಲಿಸಿಕೊಂಡಿದೆ. ಅಲ್ಲದೇ, ಇದೊಂದು ಗಂಭೀರ ವಿಚಾರವಾಗಿರುವುದರಿಂದ ನ್ಯಾಯಾಲಯದ ನಿಗಾದಲ್ಲಿ ಕೇಂದ್ರೀಯ ಸಂಸ್ಥೆ ಅಥವಾ ವಿಶೇಷ ತನಿಖಾ ಸಂಸ್ಥೆಯಿಂದ ತನಿಖೆ (ಎಸ್ಐಟಿ) ನಡೆಸಬೇಕಾದ ಅಗತ್ಯವಿದೆ’ ಎಂದೂ ಹೇಳಿದೆ. ಮರಳು ಮಾಫಿಯಾಗಳಿಂದ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕ್ರಮ […]
ರಾಷ್ಟ್ರೀಯ
ಕುಖ್ಯಾತ ಅಂತಾರಾಜ್ಯ ಇರಾನಿ ಗ್ಯಾಂಗ್ನ ಏಳು ಮಂದಿಯನ್ನು ಬಂಧಿಸುವಲ್ಲಿ ಸಬರ್ಬನ್ ಠಾಣೆ ಪೊಲೀಸರು ಯಶಸ್ವಿ
ತೆಲಂಗಾಣದ ವಿವಿಧೆಡೆ ಒಂದೇ ದಿನ ಮೂರು ಅಪರಾಧ ಕೃತ್ಯಗಳನ್ನು ಎಸಗಿ ನಗರದಲ್ಲಿ ಆಶ್ರಯ ಪಡೆದಿದ್ದ ಕುಖ್ಯಾತ ಅಂತಾರಾಜ್ಯ ಇರಾನಿ ಗ್ಯಾಂಗ್ನ ಏಳು ಮಂದಿಯನ್ನು ಸಬರ್ಬನ್ ಠಾಣೆ ಪೊಲೀಸರು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಹಾರಾಷ್ಟ್ರದ ಬೀಡ್ ಜಿಲ್ಲೆಯವರಾದ ಜಹೀರ್ ಅಬ್ಬಾಸ್ ಅಲಿ, ರಜಾಕ್ ಶೇಖುಬ್ ಬೇಗ್, ಅಲಿಮಿರ್ಜಾ ದರಬೇಶ, ಜಾಫರ್ ಅಜಮ್ ಸೈಯದ್, ಲಾಲ್ ಸಮೀರ್ ಅಲಿಯಾಸ್ ಲಾಲ್ಗಾಂಧಿ, ಜಾಫರ್ ಅಲಿ ಸೈಯದ್ ಹಾಗೂ ಮಧ್ಯಪ್ರದೇಶದ ಭೂಪಾಲ್ನ ಖಾಸಿಂ ಜೋಜೋ ಜಾಫ್ರಿ ಬಂಧಿತರು. ಅಪರಾಧಿಗಳ ಪೈಕಿ ಒಬ್ಬ ಮುಂಬೈ ಪೊಲೀಸರ ಮಾಹಿತಿದಾರನಾಗಿಯೂ […]
ಕಾನ್ಫಿಡೆಂಟ್ ಗ್ರೂಪ್ ನ ಮುಖ್ಯಸ್ಥ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ED ಅಧಿಕಾರಿಗಳಿಗೆ ಬೆಂಗಳೂರು ಬಿಟ್ಟು ತೆರಳದಂತೆ ಮಹತ್ವದ ಸೂಚನೆ
‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಚುರುಕುಗೊಳಿಸಿದ್ದು, ದಾಳಿ ನಡೆಸಲು ಬಂದಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಬೆಂಗಳೂರು ಬಿಟ್ಟು ತೆರಳದಂತೆ ಮಹತ್ವದ ಸೂಚನೆ ನೀಡಿದೆ. ಕೊಚ್ಚಿಯಿಂದ ಆಗಮಿಸಿದ್ದ ಐಆರ್ಎಸ್ ಅಧಿಕಾರಿ ಕೃಷ್ಣಪ್ರಸಾದ್ ನೇತೃತ್ವದ ಅಧಿಕಾರಿಗಳ ತಂಡವು ಕಾನ್ಫಿಡೆಂಟ್ ಗ್ರೂಪ್ಗೆ ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ರಾಯ್ ಅವರ ಈ ದುಡುಕಿನ ನಿರ್ಧಾರಕ್ಕೆ ಐಟಿ ಅಧಿಕಾರಿಗಳ ದಾಳಿ ಹಾಗೂ ಅದರಿಂದ ಉಂಟಾದ […]
ಅಂತಾರಾಷ್ಟ್ರೀಯ
UAE ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ
ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು. ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಇತಿಹಾಸವನ್ನು ಸೃಷ್ಟಿಸಿತ್ತು. ಇದೇ ವೇಳೆ ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ, ಖಜಾಂಚಿಯಾಗಿ ಹಂಝಾ ಎ. ಖಾದರ್, ಸಂಚಾಲಕರಾಗಿ ಅಶ್ರಫ್ ಶಾ ಮಾಂತೂರು […]
ಲಾಗೋಸ್: 31.5 ಕೆ.ಜಿ ಕೊಕೇನ್ ವಶಪಡಿಸಿಕೊಂಡ ನೈಜೀರಿಯಾ ಪೊಲೀಸರು, 22 ಭಾರತೀಯರ ಬಂಧನ
ಲಾಗೋಸ್: ಹಡಗಿನಲ್ಲಿದ್ದ 31.5 ಕೆ.ಜಿ ಕೊಕೇನ್ ವಶಪಡಿಸಿಕೊಂಡ ನೈಜೀರಿಯಾ ಪೊಲೀಸರು, 22 ಭಾರತೀಯರನ್ನು ಬಂಧಿಸಿದ್ದಾರೆ. ಲಾಗೋಸ್ನ ಅಪಾಪಾ ಬಂದರಿನ ಜಿಡಿಎನ್ಎಲ್ ಟರ್ಮಿನಲ್ನಲ್ಲಿದ್ದ ‘ಎಂವಿ ಅರುಣ ಹುಲ್ಯ’ ಎಂಬ ವ್ಯಾಪಾರಿ ಹಡಗನ್ನು ಶೋಧಿಸಿದ ನೈಜೀರಿಯಾದ ಮಾದಕವಸ್ತು ನಿಗ್ರಹ ದಳದ ಅಧಿಕಾರಿಗಳಿಗೆ ಕೊಕೇನ್ ದೊರೆತಿದೆ. ಎಂದು ವೆಬ್ ಪೋರ್ಟಲ್ ‘ಪಂಚ್’ ವರದಿ ಮಾಡಿದೆ. ಕೊಕೇನ್ ಪತ್ತೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದವರಲ್ಲಿ ಹಡಗಿನ ಮಾಸ್ಟರ್ ಶರ್ಮಾ ಶಶಿ ಭೂಷಣ್ ಮತ್ತು 21 ಸಿಬ್ಬಂದಿ ಇದ್ದಾರೆ ಎಂದು ಮಾಧ್ಯಮ ಮತ್ತು ವಕಾಲತ್ತು ನಿರ್ದೇಶಕ ಫೆಮಿ […]
