ಕರಾವಳಿ
ಆತ್ಮಹತ್ಯೆ ಗೈಯ್ಯಲು ಯತ್ನಿಸಿದ ಕೃಷಿಕನ ಜೀವ ರಕ್ಷಿಸಿದ ಪಣಂಬೂರು ಪೊಲೀಸರು
ಇನ್ಸ್ ಪೆಕ್ಟರ್ ಸಲೀಂ ಅಬ್ಬಾಸ್ ವಳಾಲ್ ನೇತೃತ್ವದ ತಂಡದ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ಪೊಲೀಸರೆಂದರೆ ಸಾಕು ನಾಗರೀಕರು ಭಯ ಬೀಳುವ ಪ್ರಸಂಗವೇ ಹೆಚ್ಚು. ಅಪರಾಧಿಗಳ ಹೆಡೆಮುರಿ ಕಟ್ಟಿ ಜೈಲು ಕಂಬಿಗೆ ದೂಡುವುದೇ ಪೊಲೀಸರ ಕೆಲಸ ಅಂದುಕೊಂಡವರೆ ಹೆಚ್ಚು. ಆದರೆ ಪಣಂಬೂರು ಪೊಲೀಸರು ಇದಕ್ಕಿಂತ ಭಿನ್ನ. ಮಾನವೀಯ ಕಾಳಜಿಗೆ ಪಣಂಬೂರು ಪೊಲೀಸರು ಎತ್ತಿದ ಕೈ ಅನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಕಳೆದ ಆರು ತಿಂಗಳ ಹಿಂದೆ ಪಣಂಬೂರು ಇನ್ಸ್ ಪೆಕ್ಟರ್ ಸಲೀಂ ಅಬ್ಬಾಸ್ ವಳಾಲ್ ನೇತೃತ್ವದ ಪೊಲೀಸ್ ತಂಡ […]
ಪುತ್ತೂರು: ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು
ಬದಿಯಡ್ಕದ ಪೃಥ್ವಿರಾಜ್, ಜಾರ್ಖಂಡ್ ಮೂಲದ ರೇಮುಂಡಾ ನಿಗೆ ಜಾಮೀನು ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಬದಿಯಡ್ಕದ ನಿವಾಸಿ ಪ್ರಥ್ವಿರಾಜ್ ಹಾಗೂ ಮತ್ತೊಂದು ಪೋಕ್ಸೋ ಪ್ರಕರಣದ ಆರೋಪಿ ಜಾರ್ಖಂಡ್ ಮೂಲದ ರೇಮುಂಡಾ ಎಂಬಾತನಿಗೂ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸರಿತಾ. ಡಿ ರವರು ಎರಡೂ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿರುತ್ತಾರೆ. ಆರೋಪಿ ಪ್ರಥ್ವಿರಾಜ್ ಸಂತ್ರಸ್ಥೆಯೊಂದಿಗೆ ಪ್ರೀತಿಯ ನಾಟಕವಾಡಿ, ಆಕೆಯನ್ನು ಪುಸಲಾಯಿಸಿ ತನ್ನ ಜೊತೆ ಕರೆದುಕೊಂಡು ಹೋಗುತ್ತಿದ್ದ. ಸಂತ್ರಸ್ಥೆಯ ತಾಯಿಯ […]
ರಾಜ್ಯ
ಫೈನಲ್ ಸೆಟ್ಲ್ ಮೆಂಟಿಗೆ ಸಿದ್ರಾಮಯ್ಯ ರೆಡಿ; ರಾಹುಲ್ ಗೆ ಕಾಡುತ್ತಿರುವ ಚಿಂತೆ, ಕೈ ಪಾಳಯದಿಂದ ದಿಲ್ಲಿ ಅಭ್ಯರ್ಥಿ.?
ಕೆ.ಸಿ.ವೇಣು ಮುನಿಸು, ಸಂತೈಸುವ ರಾಹುಲ್ ಯತ್ನಕ್ಕೆ ಮನ್ಸೂರ್ ಅಲಿ ಖಾನ್ ಆಸರೆ ✍️. ಆರ್.ಟಿ.ವಿಠ್ಠಲಮೂರ್ತಿ ಸಿಎಂ ಸಿದ್ಧರಾಮಯ್ಯ ಈ ಬಾರಿ ಫೈನಲ್ ಸೆಟ್ಲ್ ಮೆಂಟ್ ಗೆ ಸಜ್ಜಾಗಿದ್ದಾರೆ. ಅಷ್ಟೇ ಅಲ್ಲ, ‘ನಿಮ್ಮ ಜತೆ ಮಾತನಾಡಬೇಕು ಟೈಮು ಕೊಡಿ’ ಅಂತ ರಾಹುಲ್ ಗಾಂಧಿಯವರನ್ನು ಕೇಳಿಕೊಂಡಿದ್ದಾರೆ. ಅಂದ ಹಾಗೆ ಸಿದ್ಧರಾಮಯ್ಯ ಅವರು ಸೆಟ್ಲ್ ಮಾಡಿಕೊಳ್ಳಲು ನಿರ್ಧರಿಸಿರುವ ವಿಷಯ ಯಾವುದು ಎಂಬುದು ರಹಸ್ಯವೇನಲ್ಲ. ಕಳೆದ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ವೆಂಕಟೇಶ್ವರ ಸ್ತೋತ್ರದಂತಾಗಿರುವ ಅಧಿಕಾರ ಹಂಚಿಕೆಯ ಮಾತನ್ನು ಸೆಟ್ಲ್ ಮಾಡಿಕೊಳ್ಳುವುದು ಸಿದ್ಧರಾಮಯ್ಯ […]
ಮಹಾ ವಂಚಕ, ಅವತಾರ ಪುರುಷ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್ ಜೈಲು ಪಾಲು
ಸಿನಿಮಾ ಸ್ಟೈಲ್ನಲ್ಲಿ ಅಬ್ಬರಿಸುತ್ತಿದ್ದ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್ ಅಸಲಿ ಬಣ್ಣ ಕೊನೆಗೂ ಬಯಲಾಗಿದೆ. ಮುಗ್ಧ ಜನರಿಗೆ ವಾರ್ಷಿಕ ಬರೋಬ್ಬರಿ 36% ಬಡ್ಡಿಯ ಆಮಿಷ ಒಡ್ಡಿ, ಬರೊಬ್ಬರಿ 4,500 ಕೋಟಿ ರೂಪಾಯಿ ಲೂಟಿ ಹೊಡೆದಿದ್ದ ಈ ಮಹಾ ವಂಚಕನ ಸಾಮ್ರಾಜ್ಯದ ಮೇಲೆ ಜಿಲ್ಲಾಡಳಿತ ಹಾಗೂ ಪೊಲೀಸರು ನಡುರಾತ್ರಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಬಂಧಿಸಿದ್ದಾರೆ. ದಾಳಿಯ ಸಮಯದಲ್ಲಿ ಸಿಕ್ಕ ರಹಸ್ಯ ದಾಖಲೆಗಳನ್ನು ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಹಣ ವಂಚನೆ ಆರೋಪದಡಿ ಅವತಾರ ಪುರುಷ ಶಿವಾನಂದ ನೀಲಣ್ಣವರ್ ವಿರುದ್ಧ […]
ರಾಷ್ಟ್ರೀಯ
ರಾಜ್ಯಸಭೆಗೆ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಲು ವರಿಷ್ಠರಿಗೆ ರಾಜ್ಯ ನಾಯಕರ ಶಿಫಾರಸು
ವಿಧಾನ ಪರಿಷತ್ತಿಗೆ ಬಿಜೆಪಿಗೆ 2 ಸ್ಥಾನ, ಆಕಾಂಕ್ಷಿಗಳ ದಂಡು.! ರಾಜ್ಯಸಭೆಯ ಸ್ಥಾನಗಳಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಬೇಕು ಎಂದು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಮ್ಮುಖದಲ್ಲಿ ಪ್ರಮುಖರ ಸಭೆ ಗುರುವಾರ ನಡೆಯಿತು. ಸದಾನಂದ ಗೌಡ ಅವರು ಬಿಜೆಪಿ […]
ಮಾಡೆಲಿಂಗ್ ಹೆಸರಲ್ಲಿ ಚರ್ಮ ದಂಧೆ.!, ಭೂಗತ ಗ್ಯಾಂಗ್ಸ್ಟರ್ ಗಳು, ತಾರೆಯರು ಭಾಗಿ ಶಂಕೆ.
ವಿದೇಶದ ಉದ್ಯೋಗ ಹಾಗೂ ಮಾಡೆಲಿಂಗ್ ಆಸೆ ಹುಟ್ಟಿಸಿ, ಯುವತಿಯರನ್ನು ವಿದೇಶಕ್ಕೆ ಕರೆಸಿಕೊಂಡು ಲೈಂಗಿಕ ದಂಧೆಗೆದೂಡುತ್ತಿದ್ದ ತನಿಖೆಯನ್ನು ಇದೀಗ ತಾರೆಗಳು ಮತ್ತು ಪ್ರಭಾವಿ ಗ್ಯಾಂಗ್ಗಳಿಗೂ ವಿಸ್ತರಿಸಲಾಗಿದೆ.ಈ ಪ್ರಕರಣದ ಮುಖ್ಯ ಆರೋಪಿ ಆಲುವಾದ ತೈನಾಟ್ ನಿವಾಸಿ ಸಿಂಧು ಅವರ ಮಗ ಹಾಗೂ ಮಗಳು ನಡೆಸುತ್ತಿರುವ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯು ಚಿತ್ರರಂಗದ ಹಲವರೊಂದಿಗೆ ನಿಕಟ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದ್ದು, ಯುವತಿಯರನ್ನು ಸೆಳೆಯುವಲ್ಲಿ ಇವರ ಪ್ರಭಾವ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದ ಎರಡನೇ ಆರೋಪಿ ತಿರುವನಂತಪುರ ನಿವಾಸಿ ಅಲೀನಾ ಪ್ರಸ್ತುತ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
