ಕರಾವಳಿ
ಕಾರ್ಕಳ: ನಾಲ್ಕು ಬಾರಿ ಗೆದ್ದ ಶಾಸಕರ ಕ್ಷೇತ್ರದಲ್ಲಿ ರಸ್ತೆ ಸಂಚಾರವೇ ಸಂಚಿಕಾರ.. ಇಲ್ಲಿ ರಸ್ತೆ ದಾಟಲು ಗುಂಡಿಗೆ ಬೇಕು!
ಶಾಸಕರ ಕನಸಿನ ಸ್ವರ್ಣ ನಗರಿಯಲ್ಲಿ ಹೊಂಡಗಳ ಸಾಮ್ರಾಜ್ಯ! ಮುಂಗಾರು ಮಳೆ ತೀವ್ರತೆ ಪಡೆದುಕೊಂಡಿದೆ. ಸುಸ್ಥಿತಿಯಲ್ಲಿರುವ ರಸ್ತೆಯಲ್ಲೇ ವಾಹನ ಓಡಿಸುವುದು ಕಷ್ಟ. ಅಂತಹದರಲ್ಲಿ ರಸ್ತೆಯನ್ನೇ ನುಂಗಿದ ಹೊಂಡ ಗುಂಡಿಗಳಲ್ಲಿ ಸಂಚಾರವೇ ಸಂಚಿಕಾರ. ಇಂತಹದ್ದೊಂದು ನರಕಯಾತನೆ ಇರುವುದು ಯಾವುದೋ ಒಂದು ಕುಗ್ರಾಮದ ರಸ್ತೆಯಲ್ಲಿ ಅಲ್ಲ. ಬದಲಾಗಿ ಕಾರ್ಕಳ ಪೇಟೆಯ ಹೃದಯ ಭಾಗವಾದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ದುರಂತ ಚಿತ್ರಣ ಇದು. ಈ ಭಾಗದಲ್ಲಿ ಸತತ ನಾಲ್ಕು ಬಾರಿ ಹಿಂದುತ್ವದ ಅಲೆಯಲ್ಲಿ ಗೆದ್ದು ಬೀಗುತ್ತಿರುವ ಸುನೀಲ್ […]
ಇಲ್ಲಿ ನದಿ ದಾಟುವುದು ನಿಷೇಧ; ಮೂಲ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದ ಇಲಾಖೆ
ಆದಿವಾಸಿ ಮಲೆಕುಡಿಯ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲವಾದ ಜಿಲ್ಲಾಢಳಿತ ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತಿದೆ. ಇಲ್ಲಿ ನದಿ ದಾಟುವುದು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಹಾಕುವ ಮೂಲಕ ಮೂಲನಿವಾಸಿಗಳಿಗೆ ದಿಗ್ಬಂಧನ ವಿಧಿಸುವ ಕಾರ್ಯವನ್ನು ಇಲಾಖೆಗಳು ಮಾಡಿದೆ. ಸವಣಾಲು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಎಂಬಲ್ಲಿ […]
ರಾಜ್ಯ
ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ನೇಮಕಾತಿ ಆದೇಶ ರದ್ದು
ಮುಖ್ಯಮಂತ್ರಿಯವರ ಸಚಿವಾಲಯದ ಮೂರನೇ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಜುಲೈ 8, 2026 ರಂದು ರಾಘವೇಂದ್ರ ಭಟ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ನೇಮಕಾತಿ ಪ್ರಕಟವಾಗುತ್ತಿದ್ದಂತೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ […]
‘ಸಿರಾ-ಶಿಕು’ ಸೇತುವೆಗೆ ‘ಡಿಕೆ’ ಸಿಮೆಂಟು; ಆಷಾಡಕ್ಕೆ ಸಂಪುಟ ವಿಸ್ತರಣೆ, ಸಿದ್ದು ಫಿಟ್ನೆಸ್ ಸೆಂಟರ್; ಬಿಕೆ ಹೆಗಲಿಗೆ ಹೊಸ ಜವಾಬ್ದಾರಿ
✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ತಮ್ಮ ಪತ್ನಿ ಹಾಗೂ ಸಹೋದರನ ಜತೆಗೂಡಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಹೋಗಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಂದು ಮಹತ್ವದ ವಿಷಯವನ್ನು ಪ್ರಸ್ತಾಪಿಸಿದರಂತೆ. ಅಂದ ಹಾಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಮಹತ್ವದ ವಿಷಯವನ್ನು ಪ್ರಸ್ತಾಪಿಸಲು ಡಿ.ಕೆ.ಶಿವಕುಮಾರ್ ಅವರಿಗಿದ್ದ ಫೀಡ್ ಬ್ಯಾಕೇ ಕಾರಣ. ಅದೆಂದರೆ, ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪಕ್ಷದ ಕೆಲ ಶಾಸಕರು: ‘ಡಿಕೆ ಫುಲ್ಲು ಚೇಂಜ್ ಆಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ತಮಗೆ ಬೇಕಾದಂತೆ […]
ರಾಷ್ಟ್ರೀಯ
ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಪ್ರಕ್ರಿಯೆಗೆ ಅಧಿಕೃತವಾಗಿ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಸಿದ್ಧತೆ, ಮಹತ್ವದ ಸುತ್ತೋಲೆ
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ವೇಗ ಸಿಕ್ಕಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ಈಗಿನಿಂದಲೇ ರಾಜಕೀಯ ಕಾವೇರತೊಡಗಿದೆ. 2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ಹೊಸದಾಗಿ ಪುನರ್ರಚಿತವಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ […]
ಪಾರ್ಕಿಂಗ್ ದೀಪ, ಸೂಚನಾ ಫಲಕ ಇಲ್ಲದೆ ನಿಲ್ಲಿಸಲಾಗಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಮಾತ್ರಕ್ಕೆ, ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ, ಆತನೇ ತಪ್ಪಿತಸ್ಥ ಎಂಬ ವಾದವನ್ನು ಒಪ್ಪಲಾಗದು: ಸುಪ್ರೀಂ ಕೋರ್ಟ್
ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ಪಾರ್ಕಿಂಗ್ ದೀಪ, ಪ್ರತಿಫಲಕ ಅಥವಾ ಸೂಚನಾ ಫಲಕಗಳಿಲ್ಲದೆ ನಿಲುಗಡೆ ಮಾಡಲಾದ ಟ್ರಕ್ಗೆ ಕಾರು ಚಾಲಕನೊಬ್ಬ ಹಿಂದಿನಿಂದ ಡಿಕ್ಕಿ ಹೊಡೆದರೆ, ಆ ಅಪಘಾತಕ್ಕೆ ಟ್ರಕ್ ಚಾಲಕ ಮತ್ತು ಅದರ ಮಾಲೀಕರೇ ಪ್ರಾಥಮಿಕ ಹೊಣೆಗಾರರಾಗುತ್ತಾರೆ. ಇದರಲ್ಲಿ ಕಾರು ಚಾಲಕನ ತಪ್ಪೇನೂ ಇಲ್ಲ’ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೆಹಲಿಯಲ್ಲಿ 2013ರಲ್ಲಿ 20 ವರ್ಷದ ಚಾರ್ಟರ್ಡ್ ಅಕೌಂಟೆನ್ಸಿ ವಿದ್ಯಾರ್ಥಿಯೊಬ್ಬನ ಸಾವಿಗೆ ಕಾರಣವಾಗಿದ್ದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಸಲ್ಲಿಸಿದ್ದ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
